Home ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ.
Home

ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ.

Share
Share

ಶೃಂಗೇರಿ: ‘ಮನುಷ್ಯನ ಜೀವ ಅತ್ಯಮೂಲ್ಯವಾದದ್ದು, ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೆ ದುರದೃಷ್ಟವಾಗಿ ಈ ದುರಂತ ಸಂಭವಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ತಾಲ್ಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗೆ ಕೆರೆಕಟ್ಟೆ ಗ್ರಾಮದ ಕೆರೆಗದ್ದೆಯಲ್ಲಿ ಆನೆ ತುಳಿತಕ್ಕೊಳಗಾಗಿ ಮೃತಪಟ್ಟ ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಮನೆಗೆ ಭೇಟಿ ನೀಡಿ, ಬಳಿಕ ಅವರು ಮಾತನಾಡಿದರು.

‘ಮನುಷ್ಯನ ಜೀವವೂ ಉಳಿಯಬೇಕು, ಪ್ರಾಣಿಯ ಸಂಕುಲವೂ ಉಳಿಯಬೇಕು. ಇಂದು ಆನೆಗಳ ಸಂಖ್ಯೆ, ಹುಲಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ನೈಸರ್ಗಿಕ ಸಂಪತ್ತಿನಲ್ಲಿ ಸಮತೋಲನ ಕಾಪಾಡಿಕೊಳ್ಳಬೇಕಾಗಿದೆ. ನಗರೀಕರಣದಿಂದಾಗಿ ಅರಣ್ಯದ ವಿಸ್ತೀರ್ಣ ಕಡಿಮೆ ಆಗುತ್ತಿದೆ. ಪ್ರಾಣಿಗಳ ದಾಳಿಯಿಂದಾಗಿ ರಾಜ್ಯದಲ್ಲಿ 30 ರಿಂದ 40 ಜನರು ಮೃತಪಟ್ಟ ಘಟನೆಗಳು ಸಂಭವಿಸುತ್ತಿದೆ. ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಅವರ ಕುಟುಂಬದ ನೋವಿನ ಜೊತೆಗೆ ಇಲಾಖೆ ಹಾಗೂ ನಾವು ಸದಾ ಇರುತ್ತೇವೆ. ಅವರ ಕುಟುಂಬದ ಕಷ್ಟ ಸುಖಕ್ಕೆ ಸ್ಪಂದಿಸಲಿದೆ ಎಂದು ಹೇಳಿದರು.

ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ ₹20 ಲಕ್ಷ ನೀಡಲಾಗಿದೆ. ವೈಯಕ್ತಿಕವಾಗಿ ಎರಡು ಕುಟುಂಬಕ್ಕೆ ತಲಾ ₹5 ಲಕ್ಷ ಮತ್ತು ಶಾಸಕ ಟಿ.ಡಿ ರಾಜೇಗೌಡರು ಎರಡು ಕುಟುಂಬಕ್ಕೆ ತಲಾ ₹1 ಲಕ್ಷವನ್ನು ಶಾಸಕ ಟಿ.ಡಿ.ರಾಜೇಗೌಡರ ಮೂಲಕ ತಲುಪಿಸಲಾಗುತ್ತದೆ. ಕಾಯಂ ಆಗಿ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲದೇ ಇರುವುದರಿಂದ ಕಟುಂಬದಲ್ಲಿನ ಒಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗವನ್ನು ತಕ್ಷಣವೇ ನೀಡಲು ಸೂಚಿಸಲಾಗಿದೆ. ಪರಿಹಾರದ ಧನವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಮುಂಬರುವ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯೋನ್ಮುಖರಾಗಿದ್ದಾರೆ. ಆನೆ ಯಾವ ಸಮಯದಲ್ಲಿ ಬರುತ್ತವೆ. ಹೇಗೆ ಬರುತ್ತವೆ, ಎಂದು ಗೊತ್ತಾಗುವುದಿಲ್ಲ’ ಎಂದರು.

ಈ ಸಂದರ್ಭದಲ್ಲಿ ಶಾಸಕ ಟಿ.ಡಿ.ರಾಜೇಗೌಡ, ಕಾಡಾ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್‍ಪಿ ವಿಕ್ರಮ್ ಅಮ್ಟೆ, ಮಂಗಳೂರು ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ವನ್ಯಜೀವಿ ವಿಭಾಗದ ಡಿಎಫ್‍ಒ ಶಿವರಾಮ್ ಬಾಬು, ಎಸಿಎಫ್ ಮೋಹನ್ ಕುಮಾರ್, ವಲಯಾ ಅರಣ್ಯ ಸಂರಕ್ಷಣಾಧಿಕಾರಿ ಮಧುಕರ್, ವನ್ಯಜೀವಿ ವಲಯಾ ಅರಣ್ಯ ಸಂರಕ್ಷಣಾಧಿಕಾರಿ ಅನಿಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಭಟ್, ಪುಟ್ಟಪ್ಪ ಹೆಗ್ಡೆ, ದಿನೇಶ್ ಹೆಗ್ಡೆ, ಎಂ.ಎಚ್ ನಟರಾಜ್, ನೂತನ್ ಕುಮಾರ್, ಭಾಸ್ಕರ್ ನಾಯ್ಕ, ವೆಂಕಟೇಶ್ ಕುರದಾಮನೆ, ರಾಜೇಶ್ ದ್ಯಾವಂಟು, ಜನಪ್ರತಿನಿಧಿಗಳು, ಕೆರೆಕಟ್ಟೆ ಗ್ರಾಮದ ಸ್ಥಳೀಯ ಮುಖಂಡರು, ಸ್ಥಳೀಯ ಕಾಂಗ್ರೆಸ್, ಬಿಜೆಪಿ ಮುಖಂಡರು ಹಾಜರಿದ್ದರು.

Human life cannot be priced

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...