Home namma chikmagalur chikamagalur ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ -ಮೂಳೆಗಳು ಪತ್ತೆ
chikamagalurCrime NewsHomeLatest Newsnamma chikmagalur

ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ -ಮೂಳೆಗಳು ಪತ್ತೆ

Share
Share

ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟವೊಂದರಲ್ಲಿ ಮನುಷ್ಯನನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಎಲ್ಲೋ ಬಿನ್ ಅವರಚ್ಚನ್ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿದ್ದು, ಇದು ಸುಮಾರು ಒಂದೂವರೆ ತಿಂಗಳಿನಿಂದ ಕಾಣೆಯಾಗಿದ್ದ ಬಿಬಿನ್ (43) ಎಂಬುವವರದ್ದೇ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಮೃತ ಬಿಬಿನ್ ಮೂಲತಃ ಕೇರಳದವರಾಗಿದ್ದು, ಕಳೆದ 15 ವರ್ಷಗಳಿಂದ ಸಿಂಸೆಯಲ್ಲಿ ವಾಸವಿದ್ದರು ಮತ್ತು ಕಳೆದ ಕೆಲವು ವರ್ಷಗಳಿಂದ ಎಲ್ಲೋ ಅವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು.

ಕಳೆದ ಮಾರ್ಚ್ 5 ರಿಂದ ಬಿಬಿನ್ ಕಾಣೆಯಾಗಿದ್ದು, ಆತ ಕೇರಳಕ್ಕೆ ಹೋಗಿರಬಹುದೆಂದು ಸಂಬಂಧಿಕರು ಭಾವಿಸಿದ್ದರು. ಆದರೆ ಬಿಬಿನ್ ತಂದೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿದಾಗ ಅನುಮಾನಗೊಂಡ ಆತನ ಅಣ್ಣ ಮಾರ್ಟಿನ್ ಅವರು ಎಲ್ಲೋ ಅವರ ಮನೆಗೆ ಹುಡುಕಿಕೊಂಡು ಹೋಗಿದ್ದಾರೆ.

ಆ ವೇಳೆ ಎಲ್ಲೋ ಕೂಡ ಮನೆಯಲ್ಲಿ ಇರಲಿಲ್ಲ. ವಿಚಾರಿಸಿದಾಗ ಮದ್ಯವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಾಗಿರುವುದು ತಿಳಿದುಬಂದಿದೆ. ಬಿಬಿನ್ ಕಾಣೆಯಾದ ಸಮಯ ಮತ್ತು ಎಲ್ಲೋ ಕೇಂದ್ರಕ್ಕೆ ದಾಖಲಾದ ಸಮಯ ಒಂದೇ ಆಗಿದ್ದರಿಂದ ಸಂಶಯಗೊಂಡು ಮಾರ್ಟಿನ್ ಮತ್ತು ಗ್ರಾಮಸ್ಥರು ರಬ್ಬರ್ ತೋಟದಲ್ಲಿ ಹುಡುಕಾಟ ನಡೆಸಿದ್ದಾರೆ.

ಈ ವೇಳೆ ತೋಟದ ಗುಂಡಿಯೊಂದರಲ್ಲಿ ನಾಯಿಗಳು ಏನೋ ತಿನ್ನುತ್ತಿರುವುದು ಕಂಡುಬಂದಿದೆ. ಹತ್ತಿರ ಹೋಗಿ ನೋಡಿದಾಗ ಮನುಷ್ಯನನ್ನು ಕೊಲೆ ಮಾಡಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಮೂಳೆಗಳು ಸಿಕ್ಕಿವೆ.

ಸಾಕ್ಷಿ ನಾಶಪಡಿಸಲು ಶವದ ಮೇಲೆ ತೆಂಗಿನ ಗರಿಗಳನ್ನು ಹಾಕಿ ಸುಡಲಾಗಿದ್ದು, ಸುತ್ತಮುತ್ತಲಿನ ಗಿಡಗಳು ಕೂಡ ಸುಟ್ಟು ಹೋಗಿವೆ. ಘಟನಾ ಸ್ಥಳದಲ್ಲಿ ಬಿಬಿನ್ ಧರಿಸುತ್ತಿದ್ದ ಜರ್ಕಿನ್ ಕೂಡ ಪತ್ತೆಯಾಗಿದೆ. ಈ ಬಗ್ಗೆ ಮಾರ್ಟಿನ್ ಅವರು ಎನ್.ಆರ್.ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಯಾರೋ ದುಷ್ಕರ್ಮಿಗಳು ಬಿಬಿನ್ ಅವರನ್ನು ಕೊಲೆ ಮಾಡಿ ಸಾಕ್ಷಿ ನಾಶಪಡಿಸಲು ಸುಟ್ಟಿರುವ ಸಾಧ್ಯತೆ ಇದ್ದು, ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.

Human skull and bones found in a rubber plantation

Share

Leave a comment

Leave a Reply

Your email address will not be published. Required fields are marked *

Don't Miss

ನಕಲಿ “ಐ.ಎ.ಎಸ್” ಮಿಥುನ್ ಬಂಧನ

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು...

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ...

Related Articles

ಪ್ರಯಾಣಿಕರೇ ಬಸ್ ತಳ್ಳುವ ಕೆಎಸ್‌ಆರ್‌ಟಿಸಿ ಬಸ್‌

ಚಿಕ್ಕಮಗಳೂರು: ಸರ್ಕಾರದ ಉಚಿತ ಯೋಜನೆಗಳ ಆರ್ಭಟದ ನಡುವೆ ಸಾರಿಗೆ ಬಸ್‌ಗಳ ನಿರ್ವಹಣೆ ಅಧೋಗತಿಗೆ ತಲುಪಿದೆಯೇ? ಇಂತಹದೊಂದು ಪ್ರಶ್ನೆ...

ಏ.23ಕ್ಕೆ ಕರಾಳಕೃತ್ಯ ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯದ ಅಪಚಾರ ಏಪ್ರಿಲ್ ೨೩ ರಂದು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿದೆ. ಇದನ್ನು ವಿರೋಧಿಸಿ...

ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ

ಚಿಕ್ಕಮಗಳೂರು:ಭದ್ರಾ ಅಭಯಾರಣ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನವಹಿಸಿದ್ದಾರೆಂದು ದಲಿತ ಸಂಘರ್ಷಸಮಿತಿ ರಾಜ್ಯ ಸಂಘಟನಾ ಸಂಚಾಲಕ...

ಜನತೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋದ ಕಾಫಿನಾಡಿನ ಜನತೆ

ಚಿಕ್ಕಮಗಳೂರು: ಮಲೆನಾಡಿನ ಮಡಿಲು, ತಂಪಾದ ಹವಾಮಾನಕ್ಕೆ ಹೆಸರಾದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಈ ಬಾರಿ ಸೂರ್ಯನ ಪ್ರಖರತೆ...