Home Latest News microfinance harassment:ಮೈಕ್ರೋಫೈನಾನ್ಸ್ ಕಿರುಕುಳದ ವಿರುದ್ಧ ಗಂಡ ಹೆಂಡತಿಯಿಂದ ದೂರು
Latest NewsCrime NewsHomeKadur

microfinance harassment:ಮೈಕ್ರೋಫೈನಾನ್ಸ್ ಕಿರುಕುಳದ ವಿರುದ್ಧ ಗಂಡ ಹೆಂಡತಿಯಿಂದ ದೂರು

Share
Share

ಚಿಕ್ಕಮಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ನವರ ಕಿರುಕುಳದಿಂದ ಹಲವರು ಆತ್ಮಹತ್ಯೆ ಮಾಡಿಕೊಂಡ ಸುದ್ದಿಗಳು ಬರುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಲಿ ಇಲ್ಲಿ ಮೈಕ್ರೋ ಫೈನಾನ್ಸ್ ಬಗ್ಗೆ ಗುಸು,ಗುಸು ಸುದ್ದಿ ಬಂದರು ಅಧಿಕೃತವಾಗಿ ಯಾವ ದೂರುಗಳು ಬಂದಿರಲಿಲ್ಲ.ಈ ಮಧ್ಯೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಭೆ ನಡೆಸಿ ಕಟ್ಟು ನಿಟ್ಟಿನ ಸೂಚನೆ ಕೊಡುವುದರ ಮೂಲಕ ಎಚ್ಚರಿಕೆ ನೀಡಿದ್ದರು.

ಕಡೂರು ತಾಲೂಕಿನ ಬೀರೂರು ಸಮೀಪದ ಅಲದಹಳ್ಳಿಯ ಗಜಲಕ್ಷ್ಮಿ ಉಮೇಶ್ ನಾಯ್ಕ ಎಂಬ ದಂಪತಿಗೆ ಗ್ರಾಮ ಶಕ್ತಿ ಫೈನಾನ್ಸ್ ನವರು ಮಾನಸಿಕ ಕಿರುಕುಳ ನೀಡಿ ಅಧಿಕ ಹಣಕ್ಕೆ ಹಿಂಸೆ ಕೊಡುತ್ತಿದ್ದಾರೆ ಎಂದು ದಂಪತಿ ಜಿಲ್ಲಾ ಪೊಲೀಸ್ ಕಛೇರಿ ಮೆಟ್ಟಿಲು ಹತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾಲ್ಕು ಲಕ್ಷ ಹಣ ಸಾಲಪಡೆಯಲು ಹೋದಾಗ ಅ ಖರ್ಚು ಈ ಖರ್ಚು ಎಂದು ಮೂರು ಲಕ್ಷ ಎಪ್ಪತ್ತು ಸಾವಿರ ಹಣ ನೀಡಿದ್ದು ಪ್ರತಿ ತಿಂಗಳು 12 600 ರೂನಂತೆ 36 ತಿಂಗಳ ಅವಧಿ ನೀಡಲಾಗಿತ್ತು ಈಗಾಗಲೆ 34 ತಿಂಗಳು ಹಣ ಕಟ್ಟಲಾಗಿದೆ .ಆದರೂ ಇನ್ನೂ ಎರಡು ಲಕ್ಷ ಬಾಕಿ ಇದೆ ಎಂದು ಕಿರುಕುಳ ನೀಡುತ್ತಿದ್ದಾರೆ

ಬೆಳಗ್ಗೆ 7 ಗಂಟೆಗೆ ಬಂದು 11 ಗಂಟೆಯವರೆಗೆ ಸತಾಯಿಸುತ್ತಾರೆ ಸಂಜೆ 4 ಗಂಟೆಗೆ ಬಂದವರು ರಾತ್ರಿ8 ಗಂಟೆಯವರಿಗೆ ಕಿರುಕುಳ ನೀಡಿ ಕೂಗಾಡುತ್ತಾರೆ ಅಕ್ಕ ಪಕ್ಕದ ಜನ ಸೇರುವಂತೆ ಮಾಡಿರುವುದಲ್ಲದೆ ಮನೆಗೆ ಬೀಗ ಜಡಿದು ಸೀಜ್ ಮಾಡುತ್ತೇವೆ ಎಂದು ಬೆದರಿಕೆ ಒಡ್ಡಿದ್ದು ನಮಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ದಂಪತಿಗಳು ಜಿಲ್ಲಾ ಪೊಲೀಸ್ ಕಛೇರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೋರಿದ್ದಾರೆ.

Husband and wife file complaint against microfinance harassment

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...