Home namma chikmagalur chikamagalur ಪತಿ – ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ
chikamagalurCrime NewsHomeLatest Newsnamma chikmagalur

ಪತಿ – ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ

Share
Share

ಚಿಕ್ಕಮಗಳೂರು: ತಾಲ್ಲೂಕಿನ ಅಂಬಳೆ ಹೋಬಳಿ ಗಿಡ್ಡೆನಹಳ್ಳಿ ಗ್ರಾಮದ ನಿವಾಸಿ ಗೋವಿಂದೇಗೌಡ ಅವರು ತಮ್ಮ ಹಾಗೂ ತಮ್ಮ ಪತ್ನಿಯ ಮೊಬೈಲ್ ಸಂಖ್ಯೆಗಳಿಗೆ ನಿರಂತರವಾಗಿ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿರುವ ವ್ಯಕ್ತಿಯ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಳೆದ 2025ರ ಮೇ ತಿಂಗಳಿನಿಂದ ಗೋವಿಂದೇಗೌಡರ ಜಿಯೋ ಸಂಖ್ಯೆಗೆ ಹಾಗೂ ನವೆಂಬರ್ ತಿಂಗಳಿನಿಂದ ಅವರ ಪತ್ನಿ ಭವ್ಯ ಅವರು ಬಳಸುತ್ತಿರುವ ಏರ್‌ಟೆಲ್ ಸಂಖ್ಯೆಗೆ 9025682598 ಎಂಬ ಮೊಬೈಲ್ ಸಂಖ್ಯೆಯಿಂದ ಅಸಭ್ಯ ಫೋಟೋ ಮತ್ತು ವಿಡಿಯೋಗಳು ಬರುತ್ತಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಆರೋಪಿತ ವ್ಯಕ್ತಿಯ ಸಂದೇಶಗಳನ್ನು ಹಲವಾರು ಬಾರಿ ಬ್ಲಾಕ್ ಮಾಡಿದರೂ ಸಹ ಬೇರೆ ಬೇರೆ ರೀತಿಯಲ್ಲಿ ಅಶ್ಲೀಲ ಮಾಹಿತಿ ರವಾನಿಸುವುದು ಮುಂದುವರೆದಿದ್ದು, ಇದರಿಂದ ದಂಪತಿಗಳು ತೀವ್ರ ಮಾನಸಿಕ ಕಿರಿಕಿರಿ ಮತ್ತು ತೊಂದರೆ ಅನುಭವಿಸುವಂತಾಗಿದೆ.

ಈ ಸಂಬಂಧ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Husband harasses wife by sending obscene messages

Share

Leave a comment

Leave a Reply

Your email address will not be published. Required fields are marked *

Don't Miss

ಬಿ.ಟಿ. ಮಲ್ಲೇನಹಳ್ಳಿ ಗ್ರಾಮದ ಬಳಿ ದಿನಬಳಕೆಯ ವಸ್ತುಗಳ ಕಳವು

ಕಡೂರು: ತಾಲ್ಲೂಕಿನ ಪಂಚನಹಳ್ಳಿ ಸಮೀಪದ ಬಿ.ಟಿ. ಮಲ್ಲೇನಹಳ್ಳಿ ಬಳಿ ದಿನಬಳಕೆಯ ವಸ್ತುಗಳನ್ನು ಸಾಗಿಸುತ್ತಿದ್ದ ಲಾರಿಯಿಂದ ಗ್ರಾಮಸ್ಥರು ಸರಂಜಾಮು ದೋಚಿದ ಘಟನೆ ಶನಿವಾರ ನಡೆದಿದೆ. ಚಿಕ್ಕಬಳ್ಳಾಪುರದಿಂದ ಕಡೂರು ಎಪಿಎಂಸಿಯ ಏಜೆನ್ಸಿಗೆ ಸೋಪು, ಸೋಪಿನ...

ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿ-ಫರ್ನಿಚರ್ ಅಂಗಡಿಗೆ ಬೆಂಕಿ

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮವಾಗಿ ಫರ್ನಿಚರ್ ಅಂಗಡಿಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಐಜಿ ರಸ್ತೆಯಲ್ಲಿ ನಡೆದಿದೆ. ಈ ಆಕಸ್ಮಿಕ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಸುಟ್ಟು ಕರಕಲಾಗಿದ್ದು,...

Related Articles

ಬಿದ್ರಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಕಸದ ರಾಶಿ

ಕೊಟ್ಟಿಗೆಹಾರ : ಧರ್ಮಸ್ಥಳ–ಹೋರನಾಡು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕಸದ ರಾಶಿಗಳು ಗುಡ್ಡಗಟ್ಟಿರುವ ದುಸ್ಥಿತಿ...

ಕೆಸವೆ ಪ್ರವಾಸಿ ಮಂದಿರದ ಬಳಿ ಒಂಟಿ ಸಲಗ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತಾರಣ್ಯದ ಕೆಸವೆ ಪ್ರದೇಶದಲ್ಲಿರುವ ಬ್ರಿಟಿಷರ ಕಾಲದ ಪ್ರವಾಸಿ...

ಬಾಬೂಜಿ ದೇಶದ ಹಸಿವು ನೀಗಿಸಿದ ಮಹಾನ್ ಚೇತನ

ಚಿಕ್ಕಮಗಳೂರು: ದೇಶದ ಹಸಿವು ನೀಗಿಸಿದ ಹಸಿರು ಕ್ರಾಂತಿಯ ರೂವಾರಿ ಹಾಗೂ ಅಸಮಾನತೆಯ ವಿರುದ್ಧ ಸಂಘಟಿತ ಹೋರಾಟ...

ಭೀಕರ ರಸ್ತೆ ಅಪಘಾತದಲ್ಲಿ ಅಮಾಯಕ ಜೀವ ಬಲಿ

ಮೂಡಿಗೆರೆ:ಬಿಳಗುಳದ ಎನ್ ಹೆಚ್ 173 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಚಾಲಕನ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದ್ದು,...