Home namma chikmagalur ಕಸಬಾ ಹೋಬಳಿ ಕಾಫಿ ಬೆಳೆಗಾರರ ಸಂಘದ ನೂತನ ಅಧ್ಯಕ್ಷ ಐ.ಎಂ.ಮಿಥುನ್
namma chikmagalurchikamagalurHomeLatest News

ಕಸಬಾ ಹೋಬಳಿ ಕಾಫಿ ಬೆಳೆಗಾರರ ಸಂಘದ ನೂತನ ಅಧ್ಯಕ್ಷ ಐ.ಎಂ.ಮಿಥುನ್

Share
Share

ಚಿಕ್ಕಮಗಳೂರು: ಕಸಬಾ ಹೋಬಳಿ ಕಾಫಿ ಬೆಳೆಗಾರರ ಸಂಘದ ಜವಾಬ್ದಾರಿಯನ್ನು ಯುವ ಪದಾಧಿಕಾರಿಗಳ ತಂಡವು ವಹಿಸಿಕೊಂಡಿದೆ. ಯಶಸ್ವಿಯಾಗಿ ಸಂಘವನ್ನು ಮುನ್ನಡೆಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ ಹೇಳಿದರು.

ಕಸಬಾ ಹೋಬಳಿ ನೂತನ ಅಧ್ಯಕ್ಷ ಐ.ಎಂ.ಮಿಥುನ್ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೂತನ ತಂಡಕ್ಕೆ ಶುಭ ಹಾರೈಸುತ್ತೇವೆ. ಸಂಘದ ಕಾರ್ಯಕ್ರಮಗಳಿಗೆ ಕೆಜಿಎಫ್ ಸದಾ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.

ನೂತನ ಸಂಘವು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕೆಜಿಎಫ್ ಸೇರಿದಂತೆ ಎಲ್ಲಾ ಬೆಳೆಗಾರರ ಸಂಘಗಳು ಸಂಘಟಿತವಾಗಿ ಕೆಲಸ ಮಾಡಿದಾಗ ಗುರಿ ಸಾಧಿಸಬಹುದು ಎಂದು ತಿಳಿಸಿದರು.

ಬೆಳೆಗಾರರ ಪ್ರಮುಖ ಬೇಡಿಕೆಗಳಾದ ಡೀಮ್ಡ್ ಅರಣ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು, ಒತ್ತುವರಿ ಭೂಮಿ ಗುತ್ತಿಗೆಗೆ ನೀಡುವ ವಿಚಾರ, ಮಲೆನಾಡಿನಲ್ಲಿ ಆನೆಗಳ ಹಾವಳಿ ಉಂಟಾಗುತ್ತಿರುವ ಜೀವ ಹಾನಿ, ಬೆಳೆ ಹಾನಿ ತಡೆಗಟ್ಟಲು ಪರಿಣಾಮಕಾರಿ ಕ್ರಮ ಕೈಗೊಳ್ಳುವುದು, ಕಾಡು ಪ್ರಾಣಿಗಳ ಹಾವಳಿಯಿಂದ ಮಲೆನಾಡಿನ ಜನ ಬದುಕಲು ಆಗುತ್ತಿಲ್ಲ ಅದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಇದರ ಬಗ್ಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ಬೆಳೆಗಾರರ ಮುಖಂಡ ಕೆ.ಕೆ. ಮನುಕುಮಾರ್ ಮಾತನಾಡಿ, ಇಲ್ಲಿಂದ ಕಾಫಿ ಬೆಳೆಗಾರರ ಸಂಘದ ಎನ್.ಎಂ. ರವಿ ಅವರನ್ನು ಪ್ರತಿನಿಧಿಯನ್ನಾಗಿ ಕಳಿಸಿಕೊಡಲಾಗುತ್ತಿದೆ. ನೂತನ ಸಂಘಕ್ಕೆ ಎಲ್ಲಾ ಸಹಕಾರ ಇರುತ್ತದೆ ಎಂದರು.

ನೂತನ ಪ್ರಧಾನ ಕಾರ್ಯದರ್ಶಿ ಟಿ.ಕೆ. ಪ್ರದೀಪ್ ಮಾತನಾಡಿದರು. ಸಂಘದ ಉಪಾಧ್ಯಕ್ಷರಾಗಿ ಎ.ಆರ್.ನಿತಿನ್, ಖಜಾಂಚಿಯಾಗಿ ಸುಮಂತ್, ಪ್ರತಿನಿಧಿಯಾಗಿ ಎನ್.ಎಂ. ರವಿ, ಸಹಕಾರ್ಯದರ್ಶಿಯಾಗಿ ಆಕಾಶ್ ಆಯ್ಕೆಯಾದರು. ಹಿರಿಯ ಬೆಳೆಗಾರ ಎಂ.ಎಸ್.ಲಿಂಗಪ್ಪಗೌಡ, ಐ.ಎಂ.ಮಹೇಶ್ ಗೌಡ, ಉಮೇಶ್ಚಂದ್ರ ಇತರರು ಉಪಸ್ಥಿತರಿದ್ದರು.

I.M. Mithun is the new president of the Kasaba Hobli Coffee Growers Association.

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...