Home State News ನಕ್ಸಲರ ಶರಣಾಗತಿ ಬಗ್ಗೆ ನನಗೆನೂ ಗೊತ್ತಿಲ್ಲ ಎಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್
State News

ನಕ್ಸಲರ ಶರಣಾಗತಿ ಬಗ್ಗೆ ನನಗೆನೂ ಗೊತ್ತಿಲ್ಲ ಎಂದ ಜಿಲ್ಲಾಧಿಕಾರಿ ಮೀನಾ ನಾಗರಾಜ್

Share
Share

ಚಿಕ್ಕಮಗಳೂರು : ನಕ್ಸಲ್ ಶರಣಾಗತಿ ಸಂಬಂಧ ಯಾವುದೇ ಪ್ರಸ್ತಾವನೆ ಜಿಲ್ಲಾಡಳಿತ ಮುಂದೆ ಬಂದಿಲ್ಲ, ನನಗೆ ಅದರ ಬಗ್ಗೆ ಮಾಹಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಹೇಳಿದ್ದಾರೆ. ರಾಜ್ಯ ಸರ್ಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಆರು ಜನ ಸಕ್ರಿಯ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆಂಬ ಗಂಭೀರ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು ಈ ಸಂಬಂಧ ನನಗೆ ಯಾವುದೇ ಮಾಹಿತಿ ಇಲ್ಲ, ಆ ರೀತಿ ಏನಾದರೂ ಇದ್ದರೇ ನಕ್ಸಲ್ ಶರಣಾಗತಿ ಕಮಿಟಿ ಇದ್ದು, ರಾಜ್ಯ ಸರ್ಕಾರದಿಂದ ಮಾಹಿತಿ ನೀಡಬೇಕು. ರಾಜ್ಯ ಸರ್ಕಾರದಿಂದ ಅಂತಹ ಯಾವುದೇ ಮಾಹಿತಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ನಕ್ಸಲ್ ಶರಣಾಗತಿ ಪ್ರಸ್ತಾವ ರಾಜ್ಯ ಸರ್ಕಾರದಿಂದ ನಮ್ಮ ಮುಂದೇ ಬಂದರೇ, ಕಮಿಟಿ ನಿಯಮದಂತೆ ಶರಣಾಗತಿ ಪ್ರಕ್ರಿಯೆ ಮಾಡಲಾಗುವುದು, ಈ ಹಿಂದೆ ಶರಣಾಗಿರುವ ನಕ್ಸಲರಿಗೆ ಪ್ಯಾಕೇಜ್ ಅಡಿ ಏನೇನು ಭರವಸೆ ನೀಡಲಾಗಿತ್ತು, ಅವುಗಳನ್ನು ಸಮರ್ಪಕವಾಗಿ ಈಡೇರಿಸಿಲ್ಲವೆಂಬ ಕಾರಣಕ್ಕೆ ಶರಣಾಗತಿಗೆ ವಿಳಂಬ ಮಾಡುತ್ತಿದ್ದಾರೆಂದು ಕೇಳಿ ಬರುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಸಿ ಮೀನಾ ನಾಗರಾಜ್ ನಮ್ಮ ಹಂತದಲ್ಲಿ ಏನೆಲ್ಲಾ ಸಮಸ್ಯೆ ಪರಿಹರಿಸಲು ಸಾಧ್ಯ ಅವುಗಳನ್ನು ಮಾಡಲಾಗಿದೆ. ಉಳಿದಂತೆ ಅವರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಮತ್ತು ಕಮಿಟಿ ಮುಂದೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ರಾಜ್ಯದಲ್ಲಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...