Home namma chikmagalur chikamagalur ರಕ್ತ ಹೀರುವ ಪಕ್ಷವಿದ್ದರೆ ಅದು ಕಾಂಗ್ರೆಸ್
chikamagalurHomeLatest Newsnamma chikmagalur

ರಕ್ತ ಹೀರುವ ಪಕ್ಷವಿದ್ದರೆ ಅದು ಕಾಂಗ್ರೆಸ್

Share
Share

ಚಿಕ್ಕಮಗಳೂರು: ಜಿಗಣೆಯಂತೆ ರಕ್ತ ಹೀರುವ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಕಾಂಗ್ರೆಸ್ ಎಂದರೆ ಬಡವರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಕ್ತ ಹೀರುವ ಪಕ್ಷ. ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಯಾರು ಸಹ ತೃಪ್ತಿಯಿಂದ ಇಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಹೀನ ಸಾಧನೆ ಮಾಡಿ ಇದೀಗ ಸಾಧನ ಸಮಾವೇಶ ನಡೆಸಲು ಮುಂದಾಗಿರುವುದು ಹಾಸ್ಯಾಸ್ಪದ ಎಂದರು.

ಶಾಂತಿಯ ತೋಟದಲ್ಲಿ ಅಶಾಂತಿ ಮೂಡಿಸುವುದು ಕಾಂಗ್ರೆಸ್ ಸಂಸ್ಕೃತಿ. ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಪಕ್ಷ. ಒಂದು ಶೂನ್ಯ ಸರ್ಕಾರ ಜನರ ಜೀವನದ ಜೊತೆ ಆಟವಾಡುತ್ತಿದೆ. ಇದನ್ನೇ ತಮ್ಮ ಸಾಧನೆ ಎಂದುಕೊಂಡು ಸಾಧನಾ ಸಮಾವೇಶ ಮಾಡುತ್ತಿರಬೇಕು ಎಂದು ವ್ಯಂಗ್ಯವಾಡಿದರು.

ದೇಶದಲ್ಲಿ ತೈಲದ ಕೊರತೆ ಇದೆ. ಶೇ. 80ರಷ್ಟು ತೈಲವನ್ನು ನಾವು ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕು. ಯುದ್ಧದ ಕಾರಣದಿಂದಾಗಿ ತೈಲ ಆಮದು ದುರ್ಲಭವಾಗುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಿತವಾಗಿ ತೈಲಬಳಕೆ ಮಾಡುವಂತೆ ಸಲಹೆ ನೀಡಿದ್ದಾರೆಯೇ ಹೊರತು ಕಟ್ಟು ನಿಟ್ಟಿನ ಆದೇಶ ಮಾಡಿಲ್ಲ ಎಂದು ತಿಳಿಸಿದರು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆ ಏರಿಕೆಯಾಗಿದೆ. ಹೀಗಾಗಿ ಇದುವರೆಗೂ ನಾಲ್ಕು ಲಕ್ಷ ಕೋಟಿ ರೂ. ಗೂ ಹೆಚ್ಚು ಹೊರೆಯಾಗಿದ್ದರೂ ಜನರಿಗೆ ಹೊರೆಯಾಗಬಾರದು ಎಂದು ಪ್ರಧಾನಿ ಮೋದಿ ಅವರು ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ.

ಹಿಂದೆಯೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಬೇಕಿತ್ತು. ಆದರೆ ಟ್ಯಾಕ್ಸ್ ಇಡಿಕೆ ಮಾಡುವ ಮೂಲಕ ನರೇಂದ್ರ ಮೋದಿ ಅವರು ಜನರ ಮೇಲಿನ ಹೊರೆ ಇಳಿಸಿದ್ದರು. ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವ ಯುದ್ಧವೂ ಇರಲಿಲ್ಲ. ಆದರೆ ಅಂದು ವೀರಪ್ಪ ಮೊಯ್ಲಿ ಅವರು ವಾರ್ಷಿಕ ಆರು ಸಿಲಿಂಡರ್ ನೀಡುವುದಾಗಿ ಹೇಳಿದ್ದರು. ಕಾಂಗ್ರೆಸ್ ನಾಯಕರು ಮೊದಲು ಇದಕ್ಕೆ ಸ್ಪಷ್ಟನೆ ನೀಡಲಿ ಎಂದು ತಿರುಗೇಟು ನೀಡಿದರು.

ಅಂಬೇಡ್ಕರ್ ಅವರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ. ಸರ್ವೇ ಜನ ಸುಖಿನೋ ಭವಂತು ಎನ್ನುವುದನ್ನು ಸಂವಿಧಾನದ ಮೂಲಕ ಮಾಡಿದ್ದಾರೆ. ಅದೇ ರೀತಿಯ ಕೆಲಸವನ್ನು ಬಿಮೋತ್ಸವ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಸಿ.ಟಿ.ರವಿ ಅವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭೀಮೋತ್ಸವ ಕಾರ್ಯಕ್ರಮದ ಮೂಲಕ ಸಾಮರಸ್ಯ ಮೂಡಿಸುವ ಜೊತೆಗೆ ತಳ ಸಮುದಾಯಗಳನ್ನು ಗುರುತಿಸಿ ಜಾತಿಭೇದ ಮಾಡದೆ ಅಸ್ಪೃಶ್ಯತೆ ತೊಡೆದು ಹಾಕುವ ರೀತಿ ಸರ್ವರನ್ನು ತನ್ನ ಮನೆಗೆ ಕರೆದು ಮನೆ ತುಂಬಿಸಿಕೊಳ್ಳುವ ಕೆಲಸವನ್ನು ಸಿ.ಟಿ.ರವಿ ಅವರು ಮಾಡಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದರು.

If there is a blood-sucking party it is Congress.

Share

Leave a comment

Leave a Reply

Your email address will not be published. Required fields are marked *

Don't Miss

ಬಿದರೆ ಗ್ರಾಮದ ಕೋಳಿ ಗೂಡಿನಲ್ಲಿ ಮೂರು ನಾಗರಹಾವು ಪತ್ತೆ

ಚಿಕ್ಕಮಗಳೂರು: ಅತಿಯಾದ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಹಾಗೂ ಆಹಾರದ ಹುಡುಕಾಟದಲ್ಲಿದ್ದ ಮೂರು ನಾಗರ ಹಾವುಗಳು ಒಂದೇ ಗ್ರಾಮದ ಮೂರು ಮನೆಗಳ ಕೋಳಿ ಗೂಡು ಸೇರಿ ಅಚ್ಚರಿ ಮೂಡಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ...

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನೆಡೆದಿರುವ ಚುನಾವಣಾ ಅಕ್ರಮ ದೇಶದ ಇತಿಹಾಸದಲ್ಲಿ ಹಾಗೂ ಭವಿಷ್ಯದಲ್ಲಿ ಹಿಂದೆಂದಿಗೂ ಊಹಿಸಲು ಸಾಧ್ಯವಿಲ್ಲದ ಅಕ್ರಮವಾಗಿದ್ದು, ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿ ಪಾರದರ್ಶಕ, ನಿಷ್ಪಕ್ಷಪಾತ ತನಿಖೆ...

Related Articles

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ

ಚಿಕ್ಕಮಗಳೂರು: ನಗರದಲ್ಲಿ ಶನಿವಾರ ಮಧ್ಯಾಹ್ನ ಅರ್ಧಗಂಟೆಗೂ ಹೆಚ್ಚುಕಾಲ ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ನಗರದ...

ಜಾನಪದ ಕ್ಷೇತ್ರದಲ್ಲಿ ನಮ್ಮ ನಾಡು ಹಿಂದೆ ಬಿದ್ದಿಲ್ಲ

ಚಿಕ್ಕಮಗಳೂರು: ಜಾನಪದ ಕ್ಷೇತ್ರದಲ್ಲಿ ನಮ್ಮ ನಾಡು ಹಿಂದೆ ಬಿದ್ದಿಲ್ಲ. ಕಂಸಾಳೆ ನೃತ್ಯವು ಮೈಸೂರು ಭಾಗದಲ್ಲಿ ವಿಶೇಷ...

ಮನೆಹಾಳು ಕೆಲಸಕ್ಕೆ ಸಾಧನಾ ಸಮಾವೇಶವೇ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ದುಡ್ಡು ತಿಂದಿದ್ದು, ಎಸ್ ಸಿಪಿ ಎಸ್ ಟಿಪಿ ಅನುದಾನ ದುರ್ಬಳಕೆ,...

ಅಪ್ರಾಪ್ತೆ ಕೊಲೆ ಆರೋಪಿ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ಬೀದರ್ ಜಿಲ್ಲೆಯ ಬೆಳಕುಣಿ ಗ್ರಾಮದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ...