Home Political News ಕಾಫಿ ಸರ್ಫೆಸಿ ಕಾಯ್ದೆ ಅಡಿ ಬರಲ್ಲ ಎಂದರೆ ಬ್ಯಾಂಕ್ ಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ : ರವೀಶ್
Political News

ಕಾಫಿ ಸರ್ಫೆಸಿ ಕಾಯ್ದೆ ಅಡಿ ಬರಲ್ಲ ಎಂದರೆ ಬ್ಯಾಂಕ್ ಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ : ರವೀಶ್

Share
Share

ಚಿಕ್ಕಮಗಳೂರು : ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಕಾಫಿ ಬೆಳೆ ಸರ್ಫೇಸಿ ಕಾಯ್ದೆ ವ್ಯಾಪ್ತಿಗೆ ಬರೋದಿಲ್ಲ ಎಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ಆದರೆ ಬ್ಯಾಂಕುಗಳು ಸರ್ಫೇಸಿ ಕಾಯ್ದೆ ಅಡಿ ಕಾಫಿ ತೋಟಗಳನ್ನ ಹರಾಜು ಹಾಕಿರುವುದಕ್ಕೆ ಬ್ಯಾಂಕುಗಳ ಮೇಲೆ ಕೇಂದ್ರ ಸರ್ಕಾರ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಒತ್ತಾಯಿಸಿದ್ದಾರೆ.

ಸರ್ಫೇಸಿ ಕಾಯ್ದೆ ಒಳಗೆ ಕಾಫಿ ಬೆಳೆ ಬರುವುದಿಲ್ಲ ಎನ್ನುವುದಾದರೆ ವಾಣಿಜ್ಯ ಬ್ಯಾಂಕುಗಳು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡಿವೆ. ಬೆಳೆಗಾರರ ಮೇಲೆ ದೌರ್ಜನ್ಯವನ್ನು ಮಾಡುತ್ತಿವೆ. ಈ ಹುನ್ನಾರದಲ್ಲಿ ಕೇಂದ್ರ ಸರ್ಕಾರವೇ ಶಾಮೀಲಾಗಿ ಭೂಮಿ ಕಬಳಿಸುವ ದಂಧೆಯಲ್ಲಿ ತೊಡಗಿದೆಯೇ ಎಂದು ಪ್ರಶ್ನಿಸಿರುವ ರವೀಶ್, ಕೂಡಲೇ ಕಾಫಿ ಬೆಳೆಯುವ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ರಾಷ್ಟ್ರೀಕೃತ ಬ್ಯಾಂಕುಗಳ ಜೊತೆ ಸಭೆ ನಡೆಸಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು.
ಯಾವ ಬ್ಯಾಂಕು ಕಾನೂನಿಂದ ವಿರುದ್ಧ ನಡೆದುಕೊಳ್ಳುತ್ತಿದೆ ಆ ಬ್ಯಾಂಕುಗಳ ಮುಖ್ಯಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೆ ವೇಳೆ ಮಾತನಾಡಿದ ಅವರು, ಕೃಷಿ ಸಂಬಂಧಿ ಸಾಲಗಳಿಗೆ ಸಿಬಿಲ್ ಸ್ಕೋರ್ ಅನ್ವಯಿಸದಂತೆ ಬ್ಯಾಂಕುಗಳು ಕ್ರಮ ವಹಿಸಬೇಕು, ಕೃಷಿ ಚಟುವಟಿಕೆಗಳಿಗೆ ರೈತರು ಪಡೆದ ಸಾಲಗಳಿಗೆ ಸಿಬಿಲ್ ಅನ್ವಯ ಆಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮೂಡಿಗೆರೆ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ, ಕೂಡಲೇ ಯಾವ ಯಾವ ಬೆಳೆಗಾರರಿಗೆ ಸರ್ಫೇಸಿ ಕಾಯ್ದೆ ಮೂಲಕ ನೋಟಿಸ್ ನೀಡಲಾಗಿದೆ ಅಂತಹ ರೈತರನ್ನು ಉಳಿಸುವ ಕೆಲಸವಾಗಬೇಕು. ಈ ಕೂಡಲೇ ಜಿಲ್ಲಾಧಿಕಾರಿ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸೂಚನೆ ನೀಡಿ ಮನವರಿಕೆ ಮಾಡುವಂತೆ ಒತ್ತಾಯಿಸಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸರ್ಫೇಸಿ ಕಾಯ್ದೆ ಅಡಿ ಹರಾಜಿಗೆ ಬಂದಿರುವ ಬೆಳೆಗಾರರ ಜಮೀನು ಮಾಲೀಕರಿಂದ ಬ್ಯಾಂಕ್ ಸಾಲ ಮರುಪಾವತಿಗೆ ಆರು ತಿಂಗಳು ಸಮಯ ಅವಕಾಶ ಏಕೆ ಕೊಡಿಸಿದರು ಎಂದು ಪ್ರಶ್ನಿಸಿದರು. ಕಾಫಿ ಬೆಳೆಗಾರರು ಯಾವುದೇ ಗೊಂದಲಕ್ಕೆ ಸಿಲುಕಬಾರದು ಈ ಬಗ್ಗೆ ಬ್ಯಾಂಕುಗಳ ಜೊತೆ ವ್ಯವಹರಿಸುವಾಗ ಸರ್ಫೇಸಿ ಕಾಯ್ದೆ ಏನು ಹೇಳುತ್ತದೆ ಎಂಬುದರ ಬಗ್ಗೆ ಬ್ಯಾಂಕುಗಳ ಮುಖ್ಯಸ್ಥರಿಂದ ಮಾಹಿತಿ ಸರಿಯಾಗಿ ಪಡೆಯಬೇಕು ಎಂದು ಸಲಹೆ ನೀಡಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...