Home Political News ಕಾಫಿ ಸರ್ಫೆಸಿ ಕಾಯ್ದೆ ಅಡಿ ಬರಲ್ಲ ಎಂದರೆ ಬ್ಯಾಂಕ್ ಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ : ರವೀಶ್
Political News

ಕಾಫಿ ಸರ್ಫೆಸಿ ಕಾಯ್ದೆ ಅಡಿ ಬರಲ್ಲ ಎಂದರೆ ಬ್ಯಾಂಕ್ ಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ : ರವೀಶ್

Share
Share

ಚಿಕ್ಕಮಗಳೂರು : ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಕಾಫಿ ಬೆಳೆ ಸರ್ಫೇಸಿ ಕಾಯ್ದೆ ವ್ಯಾಪ್ತಿಗೆ ಬರೋದಿಲ್ಲ ಎಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ಆದರೆ ಬ್ಯಾಂಕುಗಳು ಸರ್ಫೇಸಿ ಕಾಯ್ದೆ ಅಡಿ ಕಾಫಿ ತೋಟಗಳನ್ನ ಹರಾಜು ಹಾಕಿರುವುದಕ್ಕೆ ಬ್ಯಾಂಕುಗಳ ಮೇಲೆ ಕೇಂದ್ರ ಸರ್ಕಾರ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಒತ್ತಾಯಿಸಿದ್ದಾರೆ.

ಸರ್ಫೇಸಿ ಕಾಯ್ದೆ ಒಳಗೆ ಕಾಫಿ ಬೆಳೆ ಬರುವುದಿಲ್ಲ ಎನ್ನುವುದಾದರೆ ವಾಣಿಜ್ಯ ಬ್ಯಾಂಕುಗಳು ಕಾಯ್ದೆಯನ್ನು ದುರುಪಯೋಗ ಪಡಿಸಿಕೊಂಡಿವೆ. ಬೆಳೆಗಾರರ ಮೇಲೆ ದೌರ್ಜನ್ಯವನ್ನು ಮಾಡುತ್ತಿವೆ. ಈ ಹುನ್ನಾರದಲ್ಲಿ ಕೇಂದ್ರ ಸರ್ಕಾರವೇ ಶಾಮೀಲಾಗಿ ಭೂಮಿ ಕಬಳಿಸುವ ದಂಧೆಯಲ್ಲಿ ತೊಡಗಿದೆಯೇ ಎಂದು ಪ್ರಶ್ನಿಸಿರುವ ರವೀಶ್, ಕೂಡಲೇ ಕಾಫಿ ಬೆಳೆಯುವ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ರಾಷ್ಟ್ರೀಕೃತ ಬ್ಯಾಂಕುಗಳ ಜೊತೆ ಸಭೆ ನಡೆಸಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು.
ಯಾವ ಬ್ಯಾಂಕು ಕಾನೂನಿಂದ ವಿರುದ್ಧ ನಡೆದುಕೊಳ್ಳುತ್ತಿದೆ ಆ ಬ್ಯಾಂಕುಗಳ ಮುಖ್ಯಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೆ ವೇಳೆ ಮಾತನಾಡಿದ ಅವರು, ಕೃಷಿ ಸಂಬಂಧಿ ಸಾಲಗಳಿಗೆ ಸಿಬಿಲ್ ಸ್ಕೋರ್ ಅನ್ವಯಿಸದಂತೆ ಬ್ಯಾಂಕುಗಳು ಕ್ರಮ ವಹಿಸಬೇಕು, ಕೃಷಿ ಚಟುವಟಿಕೆಗಳಿಗೆ ರೈತರು ಪಡೆದ ಸಾಲಗಳಿಗೆ ಸಿಬಿಲ್ ಅನ್ವಯ ಆಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮೂಡಿಗೆರೆ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ, ಕೂಡಲೇ ಯಾವ ಯಾವ ಬೆಳೆಗಾರರಿಗೆ ಸರ್ಫೇಸಿ ಕಾಯ್ದೆ ಮೂಲಕ ನೋಟಿಸ್ ನೀಡಲಾಗಿದೆ ಅಂತಹ ರೈತರನ್ನು ಉಳಿಸುವ ಕೆಲಸವಾಗಬೇಕು. ಈ ಕೂಡಲೇ ಜಿಲ್ಲಾಧಿಕಾರಿ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸೂಚನೆ ನೀಡಿ ಮನವರಿಕೆ ಮಾಡುವಂತೆ ಒತ್ತಾಯಿಸಿದ್ದಾರೆ. ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸರ್ಫೇಸಿ ಕಾಯ್ದೆ ಅಡಿ ಹರಾಜಿಗೆ ಬಂದಿರುವ ಬೆಳೆಗಾರರ ಜಮೀನು ಮಾಲೀಕರಿಂದ ಬ್ಯಾಂಕ್ ಸಾಲ ಮರುಪಾವತಿಗೆ ಆರು ತಿಂಗಳು ಸಮಯ ಅವಕಾಶ ಏಕೆ ಕೊಡಿಸಿದರು ಎಂದು ಪ್ರಶ್ನಿಸಿದರು. ಕಾಫಿ ಬೆಳೆಗಾರರು ಯಾವುದೇ ಗೊಂದಲಕ್ಕೆ ಸಿಲುಕಬಾರದು ಈ ಬಗ್ಗೆ ಬ್ಯಾಂಕುಗಳ ಜೊತೆ ವ್ಯವಹರಿಸುವಾಗ ಸರ್ಫೇಸಿ ಕಾಯ್ದೆ ಏನು ಹೇಳುತ್ತದೆ ಎಂಬುದರ ಬಗ್ಗೆ ಬ್ಯಾಂಕುಗಳ ಮುಖ್ಯಸ್ಥರಿಂದ ಮಾಹಿತಿ ಸರಿಯಾಗಿ ಪಡೆಯಬೇಕು ಎಂದು ಸಲಹೆ ನೀಡಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...