Home Latest News ಅರಣ್ಯ ಸಮಸ್ಯೆ ಸದನದಲ್ಲಿ ಚರ್ಚಿಸದಿದ್ದರೆ ಘೇರಾವ್ : ವಿಜಯಕುಮಾರ್ ವಾರ್ನಿಂಗ್
Latest News

ಅರಣ್ಯ ಸಮಸ್ಯೆ ಸದನದಲ್ಲಿ ಚರ್ಚಿಸದಿದ್ದರೆ ಘೇರಾವ್ : ವಿಜಯಕುಮಾರ್ ವಾರ್ನಿಂಗ್

Share
Share

ಚಿಕ್ಕಮಗಳೂರು : ಅರಣ್ಯ ಸಮಸ್ಯೆಗಳನ್ನು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಅಜೆಂಡಾ ವಿಷಯವಾಗಿ ಪರಿಗಣಿಸದಿದ್ದರೆ ಜಿಲ್ಲೆಯ ಶಾಸಕರು ಹಾಗೂ ಸಂಸದರಿಗೆ ಘೇರಾವ್ ಹಾಕಲಾಗುವುದು ಎಂದು ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್ ವಿಜಯ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಗರದ ಗಾಂಧಿ ಪ್ರತಿಮೆ ಬಳಿ ಅರಣ್ಯ ಸಮಸ್ಯೆಗಳಾದ ಡಿಮ್ಡ್ ಫಾರೆಸ್ಟ್, ಸೊಪ್ಪಿನ ಬೆಟ್ಟ ಸೆಕ್ಷನ್ 4(1), ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ನಡೆಸಲಾಗುತ್ತಿರುವ ಪ್ರತಿಭಟನೆಗೆ ವಿವಿಧ,ರೈತ ಸಂಘ, ಪ್ರಗತಿಪರ ಸಂಘಟನೆಗಳು ಕೈಜೋಡಿಸಿವೆ. ಇದೆ ವೇಳೆ ಮಾತನಾಡಿದ ವಿಜಯ್ ಕುಮಾರ್, ಅರಣ್ಯ ಸಚಿವರು ತಮ್ಮ ಹೇಳಿಕೆಯಲ್ಲಿ ಸುಮಾರು 16,114 ಚದುರ ಕಿಲೋಮೀಟರ್ ಪ್ರದೇಶವನ್ನು ಕಸ್ತೂರಿ ರಂಗನ್ ವರದಿ ವ್ಯಾಪ್ತಿಯಲ್ಲಿ ತಂದು ಅರಣ್ಯ ರಕ್ಷಣೆ ಮಾಡಲಾಗುವುದು ಮತ್ತು ಇದರಲ್ಲಿ ಸುಮಾರು 1500 ಹಳ್ಳಿಗಳು ಬರುತ್ತದೆ, ಇದಕ್ಕೆ ಕೇಂದ್ರದಿಂದ ಪರಿಹಾರದ ಪ್ಯಾಕೇಜ್ ಹೇಳಲಾಗುವುದು ಎಂದಿದ್ದಾರೆ. ಆದರೆ ಈ ಭೂ ಪ್ರದೇಶವನ್ನು ಭೌತಿಕ ಸರ್ವೆ ಮಾಡಿ ಹಳ್ಳಿಗಳ ಗಡಿ ಗುರುತಿಸಿ ಅಧಿಕೃತ ಅರಣ್ಯ ವ್ಯಾಪ್ತಿಯ ಮಾತ್ರ ಸೇರಿಸಿ, ಜನರ ಅಭಿಪ್ರಾಯಗಳನ್ನು ಪಡೆದುಕೊಳ್ಳಬೇಕೆಂದು ಎಂದರು.
ಜನಾಭಿಪ್ರಾಯವನ್ನು ಸಂಗ್ರಹಿಸಿದ ನಂತರ ಯೋಜನೆಯ ವ್ಯಾಪ್ತಿಯನ್ನು ಪುನರ್ ಪರಿಶೀಲಿಸಲು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಸುಮಾರು 23,500 ಎಕರೆ ಹೆಚ್ಚು ಪ್ರದೇಶವನ್ನು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ಘೋಷಣೆ ಮಾಡಲು ಅರಣ್ಯ ಇಲಾಖೆ ತಯಾರಿ ನಡೆಸುತ್ತಿದ್ದು, ಈ ವಿಚಾರವನ್ನು ಸ್ಥಳೀಯ ಗ್ರಾಮಸ್ಥರಿಂದ ಮುಚ್ಚಿಟ್ಟು ಯೋಜನೆ ಜಾರಿಗೆಗೊಳಿಸಲು ಮುಂದಾಗಿರುವುದು ದುರಂತ. ಹೀಗಿರುವ ಅರಣ್ಯ ಕಾನೂನುಗಳನ್ನು ಸಮರ್ಪಕವಾಗಿ ಬಳಸಿ ಗ್ರಾಮಸ್ಥರ ಸಹಕಾರದೊಂದಿಗೆ ಅರಣ್ಯ ಮತ್ತು ಪಶ್ಚಿಮಘಟ್ಟ ರಕ್ಷಣೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಅಭಿವೃದ್ಧಿಗೆ ಮಾರಕವಾಗಿರುವ ಡಿಮ್ಡ್ ಫಾರೆಸ್ಟ್ ಸಮಸ್ಯೆಗಳನ್ನು ಕೂಲಂಕುಶವಾಗಿ ಮುಂಬರುವ ಅಧಿವೇಶನದಲ್ಲಿ ಅಜೆಂಡ ರೀತಿಯಲ್ಲಿ ಚರ್ಚೆ ರೂಪಿಸಿ ರೈತರ ಸಮಸ್ಯೆಗಳ ನಿವಾರಣೆಗೆ ಪ್ರಮುಖ ವಿಷಯವನ್ನಾಗಿಸಿ ಎಂದರು.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...