Home Political News ಎಲ್ಲಾ ವಕ್ಫ್ ಆಸ್ತಿ ಅಂದ್ರೆ ಜನ ಕಾಲಲ್ಲಿರೋದು ಕೈಗೆ ತಗೋತಾರೆ : ಸಿ.ಟಿ ರವಿ
Political News

ಎಲ್ಲಾ ವಕ್ಫ್ ಆಸ್ತಿ ಅಂದ್ರೆ ಜನ ಕಾಲಲ್ಲಿರೋದು ಕೈಗೆ ತಗೋತಾರೆ : ಸಿ.ಟಿ ರವಿ

Share
Share

ಚಿಕ್ಕಮಗಳೂರು : ಕಾಂಗ್ರೆಸಿಗಿಂತ ಬಿಜೆಪಿ ಅವಧಿಯಲ್ಲೆ ಹೆಚ್ಚು ವಕ್ಫ್ ನೋಟಿಸ್ ನೀಡಿದ್ದಾರೆಂಬ ಹೇಳಿಕೆ ವಿಚಾರ ದಿನದಿಂದ ದಿನಕ್ಕೆ ತೀವ್ರ ಸ್ವರೂಪದ ರಾಜಕೀಯ ತಿರುವು ಪಡೆಯುತ್ತಿದೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಸಿಟಿ ರವಿ ದಾನದ ಆಸ್ತಿ ಬೇರೆ, ಕಂಡ ಕಂಡವರ ಆಸ್ತಿ ವಕ್ಫ್ ಬೋರ್ಡಿಗೆ ಬರೆಯೋದು ಬೇರೆ, ದಾನದ ಆಸ್ತಿಯನ್ನು ಪ್ರಭಾವಿಗಳು ದುರ್ಬಳಕೆ ಮಾಡಿಕೊಂಡಿರುವುದು ಅನ್ವರ್ ಮಾನಪ್ಪಾಡಿ ವರದಿಯಲ್ಲಿ ಉಲ್ಲೇಖವಿದೆ ಎಂದು ಸಿ.ಟಿ ರವಿ ಹೇಳಿದ್ದಾರೆ.

ನಾವು ಆ ಆಸ್ತಿಯನ್ನು ಉಳಿಸಿ ಎಂದು ಹೇಳಿದ್ದು ಹೌದು, ಈಗ ಎಲ್ಲಾ ನಂದು-ನಂದು ಅಂತ ಕಂಡ ಕಂಡವರ ಆಸ್ತಿಗೆ ಕಣ್ಣಾಕುವ ಕೆಲಸ ಆಗುತ್ತಿದೆ. ದೇವಸ್ಥಾನ ವಿಧಾನಸೌಧ ಸಂಸತ್ತು ಎಲ್ಲಾ ನಮ್ದು ಅನ್ನೋದು ಬಕಾಸುರ ಸಂಸ್ಕೃತಿ ಅಂತ ಹೇಳಿದ್ದು ನಾನು. ಜನ ಬರಿ ಬಡಿಗೆ ತೆಗೆದುಕೊಳ್ಳಲ್ಲ, ಬಡಿಗೆ ಜೊತೆ ಕಾಲಿನಲ್ಲಿ ಇರೋದನ್ನ ತೆಗೆದುಕೊಳ್ಳುತ್ತಾರೆ. ರೈತರ ಆಸ್ತಿ ದೇವಸ್ಥಾನ, ಸ್ಮಶಾನ, ಶಾಲೆ, ಆಸ್ಪತ್ರೆ, ಕೆರೆಯನ್ನು ಅತಿಕ್ರಮಿಸಿಕೊಳ್ಳೋಕೆ ಯಾವತ್ತು ಆದೇಶಿಸಲ್ಲ. 1500 ವರ್ಷದ ದೇವಸ್ಥಾನವನ್ನು ಅತಿಕ್ರಮಿಸಿ ಎಂದು ಬಿಜೆಪಿ ಯಾವತ್ತಾದರೂ ಹೇಳಿತ್ತಾ ಎಂದು ಪ್ರಶ್ನಿಸಿದರು.

ರೈತರ 18,000 ಎಕರೆಯನ್ನ ದಾಖಲೆ ಇಲ್ಲದೆ ವಕ್ಫ್ ಬೋರ್ಡಿಗೆ ಮಾಡುವುದಕ್ಕೆ ನಾವು ಎಂದಾದರೂ ಹೇಳಿದ್ವಾ… ದುರ್ಬಳಕೆ ಆಗಿರೋ ದಾನದ ಆಸ್ತಿಯನ್ನು ತೆಗೆದುಕೊಳ್ಳುವುದಕ್ಕೆ ನಾವು ಈಗಲೂ ಬದ್ದ, ದಾನ ಬೇರೆ ಕಂಡವರ ಆಸ್ತಿಗೆ ಕಣ್ಣು ಹಾಕೋದು ಬೇರೆ ಎಂದು ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...