Home Latest News ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಗುಂಡು ತುಂಡು ಹಾಗೂ ಝಣ ಝಣ ಕಾಂಚಾಣ
Latest News

ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಗುಂಡು ತುಂಡು ಹಾಗೂ ಝಣ ಝಣ ಕಾಂಚಾಣ

Share
Share

ಚಿಕ್ಕಮಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಮಟ್ಟದ ಚುನಾವಣೆ ಮುಗಿದು ಶಾಸಕರುಗಳ ಮೂಗಿನ ನೇರಕ್ಕೆ ಪದಾಧಿಕಾರಿಗಳ ಅಯ್ಕೆ ನಡೆಯುತ್ತಿದೆ.ಸೇವೆ,ಸ್ಥಾನಮಾನ ಜೇಷ್ಠತೆಗಿಂತ ತಮ್ಮ ತಾಳಕ್ಕೆ ಕುಣಿಯುವವರನ್ನು ಅಧ್ಯಕ್ಷ ಮತ್ತು ಪದಾಧಿಕಾರಿಗಳಾಗಿ ನೇಮಿಸಿ ಚಪ್ಪಾಳೆ ತಟ್ಟಿಸಿಕೊಳ್ಳುತ್ತಿದ್ದಾರೆ.
ಪ್ರಸ್ತುತ ಜಿಲ್ಲಾ ಮಟ್ಟದಲ್ಲಿ 66 ಸ್ಥಾನಗಳಿಗೆ ಚುನಾವಣೆ ಭರ್ಜರಿಯಾಗಿ ನಡೆಯುತ್ತಿದೆ.
ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಹೆಣ,ಹೆಂಡ ಹಂಚುವುದು ಸಾಮಾನ್ಯ ಆದರೆ ನೌಕರರ ಚುನಾವಣೆಯಲ್ಲಿ ಕುರಿ,ಕೋಳಿ,ವಿಸ್ಕಿ,ಬ್ರಾಂಡಿ ಮತ್ತು ಹಣ ಸದ್ದು ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ.
ಮತಚಲಾಯಿಸುವ ನೌಕರರಿಗೆ ಅರಕಲಗೂಡು, ಮಂಡ್ಯ ಮತ್ತು ಮಳವಳ್ಳಿಯಿಂದ ಕುರಿ ತಂದು ಬಾಡೂಟವನ್ನು ಭಾನುವಾರ ಕೆಲವು ಕಡೆ ನೂರಾರು ನೌಕರರಿಗೆ ಕುಡಿಸಿ ಉಣಬಡಿಸಿ ರಣಕೇಕೆ ಹಾಕುತ್ತಿರುವುದನ್ನು ಪಾರ್ಟಿಗೆ ಹೋಗದ ನೌಕರರು ಹೇಳುತ್ತಿರುವುದು ಸುಳ್ಳೇನಲ್ಲಾ.

ಇನ್ನು ಚುನಾವಣೆ ನಡೆಯುವುದು 16ನೇ ತಾರೀಖು ,ಅದರ ಹಿಂದಿನ ದಿನ ಹಣ ಹಂಚಲು ಕೂಡ ಸ್ಪರ್ಧಾಳುಗಳು ತಯಾರಿ ನಡೆಸಿದ್ದಾರೆ ಎಂಬ ಮಾಹಿತಿಯಿದೆ. ಇದಕ್ಕಾಗಿ ಹಲವು ರಾಜಕೀಯ ಪಕ್ಷದವರ ನೆರವು ಕೂಡ ಇದೆ.ಒಟ್ಟಾರೆ ನೌಕರರ ಸಂಘದ ಚುನಾವಣೆಗಳು ರಾಜಕೀಯ ಪಕ್ಷಗಳಿಗೆ ಸೆಡ್ಡು ಹೊಡೆದಂತೆ ನಡೆಸುತ್ತಿರುವುದರ ಬಗ್ಗೆ ನೌಕರರನ್ನು ಪ್ರಶ್ನೆಸಿದರೆ ನಾವೇ ಅಲ್ವಾ ಸಾರ್ ಎಲ್ಲಾ ಚುನಾವಣೆ ನಡೆಸುವುದು ಎಂದು ಮಾರ್ಮಿಕವಾಗಿ ಉತ್ತರಿಸುವುದನ್ನು ನೋಡಿದರೆ ಹೌದು,ಹೌದು ಎನ್ನಿಸುತ್ತದೆ.

ನಾಮಪತ್ರ ಪರಿಶೀಲನೆ ಮುಗಿದಿದ್ದು ಹಲವು ಇಲಾಖೆಗಳಲ್ಲಿ ಅವಿರೋಧವಾಗಿ ಅಯ್ಕೆಯಾಗಿದೆ ಎಂದು ತಿಳಿದುಬಂದಿದೆ. ಸಹಕಾರ ಇಲಾಖೆಯ ನಿವೃತ್ತ ಅಧಿಕಾರಿ ಬಸವರಾಜಪ್ಪ ಚುನಾವಣೆ ನಡೆಸಿಕೊಡುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....