Home Crime News ಅಕ್ರಮ ಗೋ ಸಾಗಾಟ : ಪೊಲೀಸರಿಗೆ ಹಿಡಿದು ಕೊಟ್ಟ ಹಿಂದು ಸಂಘಟನೆಗಳು
Crime News

ಅಕ್ರಮ ಗೋ ಸಾಗಾಟ : ಪೊಲೀಸರಿಗೆ ಹಿಡಿದು ಕೊಟ್ಟ ಹಿಂದು ಸಂಘಟನೆಗಳು

Share
Share

ಚಿಕ್ಕಮಗಳೂರು : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಹಿಂದು ಸಂಘಟನಾ ಕಾರ್ಯಕರ್ತರು ಹಾಗೂ ಸ್ಥಳೀಯರು ತಡೆದು ರಕ್ಷಿಸಿರುವ ಘಟನೆ ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರ್‌ ನಲ್ಲಿ ನಡೆದಿದೆ.

ಏಜೆಂಟ್ ಒಬ್ಬನ ಮೂಲಕ ಸಾಗರದ ಕಸಾಯಿಖಾನೆಗೆ ಗೋವುಗಳನ್ನು ಬೇಗಾರಿನ ಹರಾವರಿ ಎಂಬ ಗ್ರಾಮದಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಇದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಸ್ಥಳೀಯರು ತಡೆದು ಗೋವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದರು. ಆರೋಪಿಗಳನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ವಾಹನವನ್ನು ಸೀಜ್ ಮಾಡಲಾಗಿದೆ ಹಾಗೂ ಗೋವುಗಳನ್ನು ಗೋಶಾಲೆಗೆ ಬಿಡಲಾಗಿದೆ.

ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಯಾವಾಗ ?
ಗೋ ಹತ್ಯಾ ನಿಷೇಧವಿದ್ದರೂ ಮಲೆನಾಡು ಭಾಗದಲ್ಲಿ ಮಾತ್ರ ಗೋಕಳ್ಳತನ ಮತ್ತು ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬಿದ್ದಿಲ್ಲ. ಪ್ರತಿದಿನ ಜಿಲ್ಲೆಯಲ್ಲಿ ಅಕ್ರಮ ಗೋಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಪೊಲೀಸರ ಕಣ್ಣು ತಪ್ಪಿಸಲು ಗೋಕಳ್ಳರು ನಾನಾ ತಂತ್ರ ಹೆಣೆಯುತ್ತಿದ್ದಾರೆ. ಆದರೆ, ಗ್ರಾಮಸ್ಥರು ಹಾಗೂ ಬಜರಂಗದಳ ಕಾರ್ಯಕರ್ತರ ಸಮಯ ಪ್ರಜ್ಞೆಯಿಂದ ಹಲವು ಗೋವುಗಳನ್ನ ರಕ್ಷಿಸಲಾಗುತ್ತಿದೆ. ಐಷಾರಾಮಿ ವಾಹನಗಳಲ್ಲಿ ಅತಿ ಹಿಂಸಾತ್ಮಕವಾಗಿ ತುಂಬಿ ಗೋವುಗಳನ್ನು ಸಾಗಿಸಲಾಗುತ್ತಿದೆ. ದಿನ ಬೆಳಗಾದರೆ ಗೋಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅಕ್ರಮ ಗೋ ಸಾಗಾಟ ಮತ್ತು ಕಳ್ಳತನಕ್ಕೆ ತಾರ್ಕಿಕ ಅಂತ್ಯವನ್ನು ಪೊಲೀಸ್ ಇಲಾಖೆಯೇ ಒದಗಿಸಬೇಕಾಗಿದೆ.

“ಮಲೆನಾಡು ಭಾಗದಲ್ಲಿ ಅಕ್ರಮ ಗೋಸಾಗಾಟವನ್ನು ಹಿಂದೂ ಸಂಘಟನೆ ಹಾಗೂ ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿದ್ದರೂ ಕೂಡ ಆರೋಪಿಗಳ ಮೇಲೆ ಸಣ್ಣ ಸೆಕ್ಷನ್ ಗಳನ್ನು ಹಾಕುತ್ತಿರುವುದರಿಂದ ಕೆಲವೇ ಗಂಟೆಯಲ್ಲಿ ಜಾಮೀನು ಪಡೆದು ಬರುತ್ತಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸದಿರುವುದು ಸಹ ಅಕ್ರಮ ಗೋ ಸಾಗಾಟಕ್ಕೆ ಪ್ರೇರಣೆ ನೀಡಿದೆ. ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋಸಾಗಾಟದ ಕುರಿತು ತತ್‌ಕ್ಷಣ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಲಿ. ಇಲ್ಲದಿದ್ದಲ್ಲಿ ಸಂಘಟನೆಯಿಂದ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ದಿವೀರ್ ಮಲ್ನಾಡ್ ಎಚ್ಚರಿಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...