Home namma chikmagalur chikamagalur ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ
chikamagalurHomeLatest Newsnamma chikmagalur

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

Share
Share

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯೇತರ ಚಟುಚಟಿಕೆ:
ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ವ್ಯಾಪ್ತಿಗೆ ಸೇರಿದ ಮುಳ್ಳಯ್ಯನಗಿರಿ-ಬಾಬಾಬುಡನ್‌ಗಿರಿ ಶ್ರೇಣಿ ಪ್ರದೇಶದಲ್ಲಿ ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳನ್ನು ಬಳಸಿ ಹೊಸ ರಸ್ತೆಗಳ ನಿರ್ಮಾಣ ನಡೆಯುತ್ತಿದೆ ಎನ್ನಲಾಗಿದೆ. ಶೋಲಾ ಕಾಡುಗಳು ಹಾಗೂ ಹುಲ್ಲುಗಾವಲು ಪ್ರದೇಶಗಳನ್ನು ಬಗೆದು ರಸ್ತೆ ನಿರ್ಮಿಸಲಾಗುತ್ತಿದ್ದು, ಇದರಿಂದ ಪರಿಸರ ವ್ಯವಸ್ಥೆಗೆ ಗಂಭೀರ ಹಾನಿಯಾಗುವ ಸಾಧ್ಯತೆಯಿದೆ ಎಂದು ಪರಿಸರ ಹೋರಾಟಗಾರರು ಎಚ್ಚರಿಸಿದ್ದಾರೆ.

ಸ್ಥಳೀಯ ನಿವಾಸಿ ವಿಜಯಕುಮಾರ್ ಮಾತನಾಡಿ ಕೆಲವು ಪ್ರದೇಶಗಳಲ್ಲಿ ಗುಡ್ಡಗಳನ್ನು ಬಗೆದು ಮಣ್ಣು ಮತ್ತು ಅದಿರು ಸಾಗಾಣೆ ನಡೆಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಚಟುವಟಿಕೆಗಳು ಕೆಲವು ರೆಸಾರ್ಟ್‌ಗಳು, ಹೋಮ್‌ಸ್ಟೇಗಳು ಹಾಗೂ ಇತರ ಪ್ರವಾಸೋದ್ಯಮ ಸಂಬಂಧಿತ ನಿರ್ಮಾಣಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಡೆಯುತ್ತಿವೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣಾ ನಿಯಮಗಳ ಉಲ್ಲಂಘನೆ :
ಪರಿಸರವಾದಿ ವೀರೇಶ್ ಮಾತನಾಡಿ ಈ ಪ್ರದೇಶವು ಪ್ರಸ್ತಾಪಿತ ಮುಳ್ಳಯ್ಯನಗಿರಿ ಸಂರಕ್ಷಣಾ ಮೀಸಲು ವ್ಯಾಪ್ತಿಯಲ್ಲಿದ್ದು, ಇಲ್ಲಿ ಅರಣ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಆದರೂ ಭಾರೀ ಯಂತ್ರಗಳ ಬಳಕೆಯಿಂದ ರಸ್ತೆ ನಿರ್ಮಾಣ ನಡೆಯುತ್ತಿರುವುದು ಪರಿಸರ ಸಂರಕ್ಷಣಾ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಆರೋಪಿಸಿದ್ದಾರೆ.

ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ಮಳೆಗಾಲದಲ್ಲಿ ಭೂಕುಸಿತ ಸಂಭವಿಸುವ ಅಪಾಯ ಹೆಚ್ಚಾಗಿದೆ. ಮೃದುವಾದ ಮಣ್ಣಿನ ಪ್ರದೇಶಗಳಲ್ಲಿ ಜೆಸಿಬಿ ಮತ್ತು ಹಿಟಾಚಿ ಯಂತ್ರಗಳ ಕಾರ್ಯಾಚರಣೆ ಭೂಸ್ಥಿರತೆಗೆ ಧಕ್ಕೆ ತರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಇದೇ ವೇಳೆ, ಅಕ್ರಮ ರಸ್ತೆ ನಿರ್ಮಾಣ, ಮಣ್ಣು ಮತ್ತು ಅದಿರು ಸಾಗಾಣೆ ಕುರಿತು ಅರಣ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಜಿಲ್ಲಾಡಳಿತ ಯಾವುದೇ ಪರಿಣಾಮಕಾರಿ ಕ್ರಮಕೈಗೊಂಡಿಲ್ಲ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ.

ಪರಿಸರ ಸೂಕ್ಷ್ಮ ವಲಯದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಸಂಬಂಧಿಸಿದ ಇಲಾಖೆಗಳು ಮೌನವಹಿಸುವುದು ಸರಿಯಲ್ಲ, ಅಕ್ರಮ ರಸ್ತೆ ನಿರ್ಮಾಣ ಹಾಗೂ ಗುಡ್ಡ ಬಗೆಯುವಿಕೆಯನ್ನು ತಕ್ಷಣವೇ ನಿಲ್ಲಿಸಬೇಕು. ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಂತ್ರಗಳನ್ನು ವಶಕ್ಕೆ ಪಡೆದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಅರಣ್ಯ ಸಂರಕ್ಷಣಾ ಕಾಯ್ದೆ ಹಾಗೂ ಇತರೆ ಪರಿಸರ ಕಾನೂನುಗಳಡಿ ಪ್ರಕರಣ ದಾಖಲಿಸಬೇಕು ಎಂದು ಪರಿಸರ ಆಸಕ್ತ ಸಂಘಟನೆಗಳು ಒತ್ತಾಯಿಸಿವೆ.

ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಮಣ್ಣು ಕುಸಿಯುವ ಆತಂಕ ಎದುರಾಗಿದ್ದು, ಕಳೆದ ವರ್ಷದ ಮಳೆಗಾಲದಲ್ಲಿ ಈ ಪ್ರದೇಶಕ್ಕೆ ಭೂ ವಿಜ್ಞಾನಿಗಳ ತಂಡವೊಂದು ಭೇಟಿನೀಡಿ ಮಣ್ಣನ್ನು ಪರಿಶೀಲಿಸಿದ್ದು, ಅಧಿಕ ವಾಹನಗಳ ಓಡಾಟದಿಂದ ಮಣ್ಣು ಸಡಿಲಗೊಂಡು ಭೂ ಕುಸಿತ ಉಂಟಾಗುವ ಸಾಧ್ಯತೆಗಳಿವೆ ಎಂದು ವರದಿಯಲ್ಲಿ ತಿಳಿಸಿತ್ತು. ಇದರಿಂದ ಎಚ್ಚೆತ್ತುಕೊಂಡು ಜಿಲ್ಲಾಡಳಿತ ಗಿರಿಭಾಗದಲ್ಲಿ ಅಧಿಕವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಿತ್ತು.

ಪ್ರವಾಸಿಗರ ವಾಹನಗಳ ದಿನಕ್ಕೆ ಇಂತಿಷ್ಟೆ ಓಡಾಟ ನಡೆಸಬೇಕೆಂದು ಆದೇಶವನ್ನು ಹೊರಡಿಸುವ ಮೂಲಕ ಗಿರಿಪ್ರದೇಶದ ಮಣ್ಣು ಸಡಿಲಗೊಳ್ಳುವುದಕ್ಕೆ ಅವಕಾಶ ನೀಡಿರಲಿಲ್ಲ. ಈಗ ರಸ್ತೆ ನಿರ್ಮಾಣಕ್ಕೆ ಯಂತ್ರಗಳನ್ನು ಬಳಸುತ್ತಿದ್ದು, ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಇಲಾಖೆಗಳ ಇತ್ತ ಗಮನಹರಿಸಿ ಗಿರಿಶ್ರೇಣಿಯಲ್ಲಿ ಭಾರೀ ಯಂತ್ರಗಳ ಬಳಕೆಗೆ ಕಡಿವಾಣ ಹಾಕಲು ಮುಂದಾಗಬೇಕೆಂದು ಗಿರಿಪ್ರದೇಶದ ನಿವಾಸಿಗಳು ಆಗ್ರಹಿಸಿದ್ದಾರೆ.

Illegal road construction at the foothills of Mullaiyanagari

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಯುವಕರ ತಂಡವೊಂದು ಖಾಸಗಿ ಓಪನ್ ಜೀಪಿನಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡಾನೆಗಳನ್ನು ಕಾಡಿರುವ ಆರೋಪ ಕೇಳಿಬಂದಿದ್ದು,...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಡಿ.ರಾಮೇಗೌಡ ಕಲ್ಲಹಳ್ಳಿ ಅವರ ಆಯ್ಕೆ ಕ್ರಮಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ...

Related Articles

ಜನಪ್ರತಿನಿಧಿ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ

ಮೂಡಿಗೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ದಂಪತಿ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ....

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು...

ಆಲ್ದೂರು ಸಮೀಪ ಅಪರಿಚಿತ ವ್ಯಕ್ತಿ ಶವ ಪತ್ತೆ

ಚಿಕ್ಕಮಗಳೂರು: ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿಮಕ್ಕಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ...

ಬಿಜೆಪಿ ಮುಖಂಡನಿಂದ ಯುವಕನ ಮೇಲೆ ರಾಡ್‌ನಿಂದ ಹಲ್ಲೆ

ಅಜ್ಜಂಪುರ : ಬೈಕ್ ವೇಗವಾಗಿ ಚಲಾಯಿಸಿದ್ದಾನೆ ಎಂಬ ಕಾರಣಕ್ಕೆ ಯುವಕನ ಮೇಲೆ ರಾಡ್‌ನಿಂದ ಹಲ್ಲೆ ನಡೆಸಿ...