Home namma chikmagalur chikamagalur ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ
chikamagalurHomeLatest Newsnamma chikmagalur

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

Share
Share

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಹಂಡುಗುಳಿ ಗ್ರಾಮದ ಬಳಿ ರಸ್ತೆ ಬದಿಯಲ್ಲಿ ಲಾರಿಯೊಂದರಲ್ಲಿ ಮರದ ದಿಮ್ಮಿಗಳನ್ನು ತುಂಬಿ ನಿಲ್ಲಿಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಲಾರಿಯಲ್ಲಿ ಕಾಡುಜಾತಿಯ ಮರಗಳ ದಿಮ್ಮಿಗಳು ಗಳು ಪತ್ತೆಯಾದವು.

ಲಾರಿಯಲ್ಲಿದ್ದ ಚಿಕ್ಕಮಗಳೂರು ತಾಲ್ಲೂಕಿನ ಹೊಸಕೋಟೆ ಗ್ರಾಮದ ರಂಗರಾಜು ಅವರನ್ನು ವಿಚಾರಣೆ ನಡೆಸಿದಾಗ, ಸಾಗಿಸಲಾಗುತ್ತಿದ್ದ ಮರದ ದಿಮ್ಮಿಗಳು ಶಿವಪ್ಪ, ಪ್ರಕಾಶ್ ಹಾಗೂ ಇತರರಿಗೆ ಸೇರಿದ್ದು, ಸಾಗಾಣಿಕೆಗೆ ಅಗತ್ಯವಾದ ರಹದಾರಿ (ಪರವಾನಗಿ) ಇಲ್ಲ ಎಂಬುದು ಗೊತ್ತಾಯಿತು.

ಅಧಿಕಾರಿಗಳು ಮರದ ದಿಮ್ಮಿಗಳನ್ನು ಹಾಗೂ ಲಾರಿಯನ್ನು ವಶಕ್ಕೆ ಪಡೆದು, ರಂಗರಾಜು, ಹಳೆಮೂಡಿಗೆರೆಯ ಶಿವಪ್ಪ, ಮುತ್ತಿಗೆಪುರದ ಪ್ರಕಾಶ್, ಆನೆದಿಬ್ಬದ ಚಂದ್ರಶೇಖ‌ರ್, ಜೋಗಣ್ಣಕೆರೆಯ ರಘು ಹಾಗೂ ಹಳೆಕೋಟೆಯ ಚಂದ್ರಶೇಖರ್ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಡಿಎಫ್‌ಒ ಕೆ.ಟಿ. ಬೋರಯ್ಯ ಹಾಗೂ ಎಸಿಎಫ್ ಆಕರ್ಷ್ ಮಾರ್ಗದರ್ಶನದಲ್ಲಿ ಆರ್‌ಎಫ್‌ಒ ಮಂಜುನಾಥ್, ಡಿಆರ್‌ಎಫ್‌ಒ ಕೆ.ಎಸ್. ಅಶ್ವತ್, ಎಸ್.ಡಿ. ದೀಪಕ್, ಗಸ್ತು ಅರಣ್ಯ ಪಾಲಕರಾದ ಅಭಿಜಿತ್, ಆದರ್ಶ್, ಮನು ಹಾಗೂ ವಾಹನ ಚಾಲಕರಾದ ನವರಾಜ್ ಮತ್ತು ಸುಮಂತ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Illegally transported and seized logs of wild species of trees

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...