Home namma chikmagalur ಕೆಆರ್‌ಐಡಿಎಲ್‌ನ ನೂತನ ಕಛೇರಿಯ ಉದ್ಘಾಟನೆ
namma chikmagalurchikamagalurHomeLatest News

ಕೆಆರ್‌ಐಡಿಎಲ್‌ನ ನೂತನ ಕಛೇರಿಯ ಉದ್ಘಾಟನೆ

Share
Share

ಕಡೂರು: ಬಹಳಷ್ಟು ವರ್ಷದಿಂದ ನೆನಗುದಿಗೆ ಬಿದ್ದಿದ್ದ ಹಿಂದಿನ ಎಲ್ಲ ರಾಜಕಾರಣಿಗಳು ಮರೆತಿದ್ದ ಹಳ್ಳಿಗಾಡಿನ ಪ್ರದೇಶದ ಅಭಿವೃದ್ಧಿಯನ್ನು ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ ತೃಪ್ತಿ ತಮಗಿದೆ ಎಂದು ಶಾಸಕ ಕೆ.ಎಸ್. ಆನಂದ್ ಹ? ವ್ಯಕ್ತಪಡಿಸಿದರು.

ಕಡೂರಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕೆಆರ್‌ಐಡಿಎಲ್‌ನ ನೂತನ ಕಛೇರಿಯ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ, ಸುಂದರವಾದ ಕಟ್ಟಡ ನಿರ್ಮಾಣ ಈ ಸಂಸ್ಥೆ ಮಾಡಿದೆ ಎಂದು ಶ್ಲಾಘಿಸಿದರು.

ಕೆಆರ್‌ಐಡಿಎಲ್ ಸಂಸ್ಥೆಗೆ ಜಾಗ ನೀಡುವಲ್ಲಿ ಇದ್ದ ಸಮಸ್ಯೆಯನ್ನು ಪರಿಹರಿಸಿ ಈ ಜಾಗ ನೀಡಿದ ಕಡೂರುಹಳ್ಳಿ ಗ್ರಾಮ ಪಂಚಾಯಿತಿಯ ಮತ್ತು ಸುತ್ತಮುತ್ತಲಿನ ಗ್ರಾಮದವರಿಗೆ ಅಭಿನಂದನೆ ಸಲ್ಲಿಸಿದರು.

ಕೆಆರ್‌ಐಡಿಎಲ್ ಸಂಸ್ಥೆ ಸುಮಾರು ೫೦ ಕೋಟಿ ರೂ.ಗಳ ಕಾಮಗಾರಿ ನಡೆಸಿದೆ. ೬ ಕೋಟಿ ಮುಜರಾಯಿ ಇಲಾಖೆಗೆ, ೬ ಕೋಟಿ ಸಮುದಾಯ ಭವನ ನಿರ್ಮಾಣಕ್ಕೆ, ೧೨ ಕೋಟಿ ಗ್ರಾಮೀಣ ರಸ್ತೆಯ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ, ರೈತ ಸಂಪರ್ಕ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಇದಲ್ಲದೆ ಜಯರಾಮ ರಮೇಶ್ ಮತ್ತು ಶ್ರೇಯಸ್ ಪಟೇಲ್ ಅವರ ವಿಶೇ? ಅನುದಾನದಿಂದ ಹಲವಾರು ವಿಶೇ? ಕಾಮಗಾರಿ ಮಾಡಲಾಗಿದೆ. ಕೆಆರ್‌ಐಡಿಎಲ್ ಸಂಸ್ಥೆ ತಮಗೆ ನೀಡಿರುವ ೨೨೦ ಕ್ಕೂ ಹೆಚ್ಚಿನ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ರಾಜಿಮಾಡಿಕೊಳ್ಳದೆ ಮಾಡಿದೆ ಎಂದರು.

ಹಿಂದಿನ ಜನಪ್ರತಿನಿಧಿಗಳು, ಸರ್ಕಾರ ಮಾಡಲಾಗದ ಕೆಲಸವನ್ನು ತಾವು ತಮ್ಮ ಸರ್ಕಾರ ಮಾಡುತ್ತಿದೆ ಎಂಬ ಹೆಮ್ಮ ತಮ್ಮದು ಎಂದ ಅವರು, ನಗದಿಯಾತ್ ಕಾವಲಿನ ಕೈಗಾರಿಕಾ ಪ್ರದೇಶದಲ್ಲಿ ಮುಂದಿನ ಮೂರು ವ?ಗಳಲ್ಲಿ ಕನಿ? ಐದು ಸಾವಿರ ಜನರಿಗೆ ಕೆಲಸ ಸಿಗಲಿದೆ, ಕ್ಷೇತ್ರದ ನೀರಿನ ಬವಣೆ ನೀಗಿಸುವ ಸಲುವಾಗಿ ಭದ್ರ ಉಪಕಣಿವೆ ಮೂರನೇ ಹಂತದ ಕಾಮಗಾರಿಯ ಕಾರ್ಯ ಭರದಿಂದ ಸಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ತಾವು ಮತ್ತು ತಮ್ಮಯ್ಯ ಅವರು ಜತೆಗೂಡಿ ಕೆಲಸ ಮಾಡುವ ಭರವಸೆ ನೀಡಿದರು.

ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ರಾಜಕೀಯ ಅವಧಿಯಲ್ಲಿ ಉದ್ಘಾಟಿಸಿದ ಅತ್ಯಂತ ಸುಸಜ್ಜಿತ ಮತ್ತು ಉತ್ತಮ ಗುಣಮಟ್ಟದ ಕಛೇರಿ ಇದಾಗಿದೆ. ನಿಮ್ಮ ಇಲಾಖೆಯಿಂದ ನಿರ್ಮಾಣ ಮಾಡುವ ಇತರ ಕಟ್ಟಡ, ರಸ್ತೆಯ ಕಾಮಗಾರಿಯನ್ನೂ ಇದೇ ರೀತಿ ಮಾಡುವ ಭರವಸೆ ಇದೆ. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವುದನ್ನು ನಿಜವಾಗಿಸಲು ಶಾಸಕಾಂಗದೊಂದಿಗೆ ಕಾರ್ಯಾಂಗ ಸಹಕರಿಸಬೇಕು ಎಂದರು.

ಜಿಲ್ಲೆಗೆ ಎರಡು ಜವಳಿ ಪಾರ್ಕ್ ತರುವಲ್ಲಿ ತಾವು ಮತ್ತು ಆನಂದ್ ಯಶಸ್ವಿ ಆಗಿದ್ದೇವೆ, ಭದ್ರಾ ಉಪಕಣಿವೆ ಯೋಜನೆಯ ಉಳಿದ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ರೈತರ ಜಮೀನಿಗೆ ನೀರು ಸಿಗಲಿದೆ. ತಾವು ಮತ್ತು ಆನಂದ್ ಅವರು ಒಟ್ಟಾಗಿ ಎರಡೂ ಕ್ಷೇತ್ರದ ಅಭಿವೃದ್ಧಿಗಾಗಿ ದುಡಿಯುವುದಾಗಿ ಹೇಳಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಆರಂಭವಾಗಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸುವುದರೊಂದಿಗೆ ಹೊಸ ಕಾಮಗಾರಿಗಳನ್ನೂ ಮಾಡುತ್ತಾ ಐದು ಗ್ಯಾರಂಟಿಗಳನ್ನು ನೀಡಿ ಉತ್ತಮ ಕಾರ್ಯ ಮಾಡುತ್ತಿರುವ ಸರ್ಕಾರದ ಭಾಗವಾಗಿರುವುದು ನಮ್ಮ ಹೆಮ್ಮೆ ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷ ಗೀತಾ ಶಿವಕುಮಾರ್, ಕಡೂರು ತಹಸಿಲ್ದಾರ್ ಪೂರ್ಣಿಮಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಕೆಆರ್‌ಐಡಿಎಲ್ ಮುಖ್ಯ ಇಂಜಿನಿಯರ್ ಗೋಪಾಲ್, ಕಾರ್ಯಪಾಲಕ ಅಭಿಯಂತ ಅಶ್ವಿನಿ, ತಂಗಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ್, ಕೆಆರ್‌ಐಡಿಯಲ್ ಅಭಿಯಂತರ ವಿನಯ್, ಮುರುಳಿ ಹಾಗೂ ಕಡೂರಳ್ಳಿ ತಂಗಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು ಮತ್ತು ಗುತ್ತಿಗೆದಾರರಾದ ಗಿರೀಶ್ ಮತ್ತು ಸಾರ್ವಜನಿಕರು ಇದ್ದರು.

Inauguration of KRIDL’s new office

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...