Home namma chikmagalur chikamagalur ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ
chikamagalurHomeLatest Newsnamma chikmagalur

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

Share
Share

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ ಶುಕ್ರವಾರ ಲೋಕಾರ್ಪಣೆಗೊಂಡಿತು.

ಬ್ರಿಗೇಡ್‌ ಫೌಂಡೇಷನ್ ವತಿಯಿಂದ ಈ ಶಾಲೆಯನ್ನು ಸಂಪೂರ್ಣವಾಗಿ ಮರು ನಿರ್ಮಾಣ ಮಾಡಿದ್ದು, ಸೊಗಸಾದ ಹಾಗೂ ಸುಸಜ್ಜಿತ ಆವರಣವನ್ನಾಗಿ ಬದಲಾಯಿಸಲಾಗಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಸಿ.ಟಿ. ರವಿ ಶಾಲೆ ಉದ್ಘಾಟಿಸಿದರು.

ಬ್ರಿಗೇಡ್ ಗ್ರೂಪ್ ಕಾರ್ಯನಿರ್ವಾಹಕ ಅಧ್ಯಕ್ಷ ಎಂ.ಆರ್. ಜೈಶಂಕರ್ ಮಾತನಾಡಿ, ‘ಈ ಕೆಲಸವನ್ನು ಕಟ್ಟಡದ ನವೀಕರಣ ಎಂದಷ್ಟೇ ಭಾವಿಸಿಲ್ಲ. ವಿದ್ಯಾರ್ಥಿಗಳನ್ನು ಪ್ರತಿದಿನ ಶಾಲೆಗೆ ಬರುವಂತೆ ಪ್ರೇರೇಪಿಸುವ ಕೆಲಸ ಇದಾಗಿದೆ. ತಮ್ಮ ಶಾಲೆ ಬಗ್ಗೆ ಮಕ್ಕಳು ಹೆಮ್ಮೆಪಡಬೇಕು. ಅದಕ್ಕೆ ಬೇಕಿರುವ ಸುಂದರ ವಾತಾವರಣ ನಿರ್ಮಿಸುವುದು ನಮ್ಮ ಉದ್ದೇಶ’ ಎಂದರು.

‘ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿ ಬಾಲ್ಯದ ದಿನಗಳನ್ನು ಇಲ್ಲಿ ಕಳೆದಿದ್ದೇನೆ. ಬದುಕು ಮತ್ತು ಮೌಲ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಲೆಗೆ ಈ ರೀತಿಯ ಕೊಡುಗೆ ನೀಡುವುದು ನನಗೆ ಸಿಕ್ಕ ಸೌಭಾಗ್ಯ ಮತ್ತು ಗೌರವ’ ಎಂದು ಹೇಳಿದರು.

ವಿಧಾನ ಪರಿಷತ್‌ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ‘ಶೈಕ್ಷಣಿಕ ಮೂಲಸೌಕರ್ಯಗಳನ್ನು ಹೇಗೆ ಮರು ರೂಪಿಸಬಹುದು ಎಂಬುದಕ್ಕೆ ಇದು ಉತ್ತಮ ಉದಾಹರಣೆ. ಬ್ರಿಗೇಡ್ ಫೌಂಡೇಷನ್‌ ರೀತಿಯ ಸಂಸ್ಥೆಗಳು ಇಂತಹ ಶಾಲೆಗಳನ್ನು ಸುಧಾರಿಸಲು ಮುಂದೆ ಬಂದಿರುವುದು ಹೆಮ್ಮೆಯ ವಿಷಯ’ ಎಂದರು.

ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ, ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಸದಸ್ಯೆ ಸುಜಾತಾ ಶಿವ ಕುಮಾರ, ಬ್ರಿಗೇಡ್ ಫೌಂಡೇಶನ್ ಸಿಇಒ ಶಿವಯೋಗಿ ಕಳಸದ, ದಾನಿ ಕುಟುಂಬದ ಪ್ರತಿನಿಧಿ ಎಂ.ಆರ್. ಗುರುಮೂರ್ತಿ ಮತ್ತು ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ಅಧ್ಯಕ್ಷ ಪ್ರೇಮ್‌ಕುಮಾ‌ರ್ ಇದ್ದರು.

Inauguration of the renovated building of the University Education School

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ತರೀಕೆರೆ: ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾವಿಕೆರೆಯಲ್ಲಿ ನಂಬಿಕೆಗೆ ದ್ರೋಹ ಬಗೆದ ಆಘಾತಕಾರಿ ಘಟನೆಯೊಂದು ಬೆಳಕಿಗೆ...