ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ ಶುಕ್ರವಾರ ಲೋಕಾರ್ಪಣೆಗೊಂಡಿತು.
ಬ್ರಿಗೇಡ್ ಫೌಂಡೇಷನ್ ವತಿಯಿಂದ ಈ ಶಾಲೆಯನ್ನು ಸಂಪೂರ್ಣವಾಗಿ ಮರು ನಿರ್ಮಾಣ ಮಾಡಿದ್ದು, ಸೊಗಸಾದ ಹಾಗೂ ಸುಸಜ್ಜಿತ ಆವರಣವನ್ನಾಗಿ ಬದಲಾಯಿಸಲಾಗಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಸಿ.ಟಿ. ರವಿ ಶಾಲೆ ಉದ್ಘಾಟಿಸಿದರು.
ಬ್ರಿಗೇಡ್ ಗ್ರೂಪ್ ಕಾರ್ಯನಿರ್ವಾಹಕ ಅಧ್ಯಕ್ಷ ಎಂ.ಆರ್. ಜೈಶಂಕರ್ ಮಾತನಾಡಿ, ‘ಈ ಕೆಲಸವನ್ನು ಕಟ್ಟಡದ ನವೀಕರಣ ಎಂದಷ್ಟೇ ಭಾವಿಸಿಲ್ಲ. ವಿದ್ಯಾರ್ಥಿಗಳನ್ನು ಪ್ರತಿದಿನ ಶಾಲೆಗೆ ಬರುವಂತೆ ಪ್ರೇರೇಪಿಸುವ ಕೆಲಸ ಇದಾಗಿದೆ. ತಮ್ಮ ಶಾಲೆ ಬಗ್ಗೆ ಮಕ್ಕಳು ಹೆಮ್ಮೆಪಡಬೇಕು. ಅದಕ್ಕೆ ಬೇಕಿರುವ ಸುಂದರ ವಾತಾವರಣ ನಿರ್ಮಿಸುವುದು ನಮ್ಮ ಉದ್ದೇಶ’ ಎಂದರು.
‘ಈ ಶಾಲೆಯ ಹಳೆಯ ವಿದ್ಯಾರ್ಥಿಯಾಗಿ ಬಾಲ್ಯದ ದಿನಗಳನ್ನು ಇಲ್ಲಿ ಕಳೆದಿದ್ದೇನೆ. ಬದುಕು ಮತ್ತು ಮೌಲ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಲೆಗೆ ಈ ರೀತಿಯ ಕೊಡುಗೆ ನೀಡುವುದು ನನಗೆ ಸಿಕ್ಕ ಸೌಭಾಗ್ಯ ಮತ್ತು ಗೌರವ’ ಎಂದು ಹೇಳಿದರು.
ವಿಧಾನ ಪರಿಷತ್ನ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ‘ಶೈಕ್ಷಣಿಕ ಮೂಲಸೌಕರ್ಯಗಳನ್ನು ಹೇಗೆ ಮರು ರೂಪಿಸಬಹುದು ಎಂಬುದಕ್ಕೆ ಇದು ಉತ್ತಮ ಉದಾಹರಣೆ. ಬ್ರಿಗೇಡ್ ಫೌಂಡೇಷನ್ ರೀತಿಯ ಸಂಸ್ಥೆಗಳು ಇಂತಹ ಶಾಲೆಗಳನ್ನು ಸುಧಾರಿಸಲು ಮುಂದೆ ಬಂದಿರುವುದು ಹೆಮ್ಮೆಯ ವಿಷಯ’ ಎಂದರು.
ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ, ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಸದಸ್ಯೆ ಸುಜಾತಾ ಶಿವ ಕುಮಾರ, ಬ್ರಿಗೇಡ್ ಫೌಂಡೇಶನ್ ಸಿಇಒ ಶಿವಯೋಗಿ ಕಳಸದ, ದಾನಿ ಕುಟುಂಬದ ಪ್ರತಿನಿಧಿ ಎಂ.ಆರ್. ಗುರುಮೂರ್ತಿ ಮತ್ತು ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ಅಧ್ಯಕ್ಷ ಪ್ರೇಮ್ಕುಮಾರ್ ಇದ್ದರು.
Inauguration of the renovated building of the University Education School
Leave a comment