Home Latest News ಇ-ಹರಾಜು ನಿಲ್ಲಿಸದಿದ್ದರೆ ಬ್ಯಾಂಕ್‌ಗಳ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ
Latest NewschikamagalurHomenamma chikmagalur

ಇ-ಹರಾಜು ನಿಲ್ಲಿಸದಿದ್ದರೆ ಬ್ಯಾಂಕ್‌ಗಳ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ

Share
Share

ಚಿಕ್ಕಮಗಳೂರು:  ಸ್ವಾಭಿಮಾನಿ ರೈತ ಬೆಳೆಗಾರರ ಫಲವತ್ತಾದ ಭೂಮಿಯನ್ನು ಸರ್ಫೇಸಿ ಕಾಯ್ದೆ ಅಡಿ ಕೆಲವು ಬ್ಯಾಂಕ್ ಅಧಿಕಾರಿಗಳು ದುರುದ್ದೇಶದಿಂದ ಇ-ಹರಾಜು ಮಾಡುವುದನ್ನು ನಿಲ್ಲಿಸದಿದ್ದರೆ ಈ ಪಿಡುಗಿನ ವಿರುದ್ಧ ಬ್ಯಾಂಕ್‌ಗಳ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದೆಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಎಚ್ಚರಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೆಜಿಎಫ್ ಅಧ್ಯಕ್ಷ ಹೆಚ್.ಬಿ. ಶಿವಣ್ಣ, ಬೆಳೆಗಾರರ ಸಾಲ ತೀರುವಳಿ ಆದ ನಂತರವೂ ಕೆನರಾ ಬ್ಯಾಂಕ್ ಮೂಡಿಗೆರೆ ಶಾಖೆಯ ಮೂಲ ದಾಖಲೆಗಳನ್ನು ಬೆಳೆಗಾರರಿಗೆ ಹಿಂದಿರುಗಿಸದೇ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದರು.

ಕಳೆದ ಮೂರು ವರ್ಷಗಳಿಂದ ಕಾಫಿ ಬೆಳೆಗಾರರ ಸಾಲ ವಸೂಲಾತಿಗಾಗಿ ಸರ್ಫೇಸಿ ಕಾಯ್ದೆ ಅಡಿಯಲ್ಲಿ ಬ್ಯಾಂಕ್‌ಗಳು ಇ-ಹರಾಜು ಮಾಡಲು ಮುಂದಾಗಿರುವ ಬಗ್ಗೆ ಪ್ರತಿರೋಧಿಸಿದ್ದು, ಇಂದೂ ಸಹ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಮೂಡಿಗೆರೆ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡುವಿನ ಮೊಳಕಲ್ ಗ್ರಾಮದ ಬೆಳೆಗಾರರಾದ ಕೆ.ಕೆ. ಸುರೇಶ್ ಇವರು ತೋಟದ ನಿರ್ವಹಣೆಗಾಗಿ ಸಾಲ ಪಡೆದುಕೊಂಡಿದ್ದು, ಹಲವಾರು ಕಾರಣಗಳಿಂದ ಸಾಲ ಮರುಪಾವತಿ ಮಾಡುವುದು ವಿಳಂಭವಾಗಿದ್ದು, ಕೆನರಾ ಬ್ಯಾಂಕ್‌ನ ಸೂಚನೆಯಂತೆ ಸುಮಾರು ೪೩ ಲಕ್ಷ ರೂಪಾಯಿಗಳನ್ನು ಜನವರಿ ತಿಂಗಳಿನಲ್ಲಿ ಮರುಪಾವತಿ ಮಾಡಿದ್ದರೂ ಇದೂವರೆಗೂ ಈ ಬೆಳೆಗಾರರಿಗೆ ಸಾಲದ ಭದ್ರತೆಗಾಗಿ ನೀಡಿದ್ದ ತೋಟದ ಮೂಲ ದಾಖಲೆಗಳನ್ನು ಹಿಂದುರಿಗಿಸದೇ ಬ್ಯಾಂಕ್ ಅಧಿಕಾರಿಗಳು ಅನುಚಿತ ವರ್ತನೆ ತೋರಿದ್ದಾರೆಂದು ದೂರಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಬೆಳೆಗಾರರ ಸಂಘಟನೆಗಳು, ಜನಪ್ರತಿನಿಧಿಗಳು ಹಾಗೂ ಎಲ್ಲಾ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು, ಈ ಸಭೆಯಲ್ಲಿ ಸಂಸದರು ಸರ್ಫೇಸಿ ಕಾಯ್ದೆ ಅಡಿಯಲ್ಲಿ ರೈತ ಬೆಳೆಗಾರರ ಭೂಮಿಯನ್ನು ಹರಾಜು ಹಾಕುವುದನ್ನು ಸುಮಾರು ಆರು ತಿಂಗಳ ಕಾಲ ತಡೆ ಹಿಡಿಯುವಂತೆ ಹಾಗೂ ಬೆಳೆಗಾರರಿಗೆ ಬ್ಯಾಂಕ್‌ಗಳು ಓಟಿಎಸ್ ಮೂಲಕ ಸೌಹಾರ್ದಯುತವಾಗಿ ತಮ್ಮ ಸಾಲ ತೀರುವಳಿಯನ್ನು ಮಾಡಲು ಅವಕಾಶ ಕಲ್ಪಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎಂದು ಹೇಳಿದರು.

ಬೆಂಗಳೂರಿನ ಕಾಫಿ ಮಂಡಳಿಯಲ್ಲಿ ಅಧ್ಯಕ್ಷ ಎಂ.ಜೆ. ದಿನೇಶ್ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಭೆಯನ್ನು ಕರೆಯಲಾಗಿದ್ದು, ಅಲ್ಲಿಯೂ ಕೂಡ ಬೆಳೆಗಾರರ ತೋಟಗಳನ್ನು ಇ-ಹರಾಜು ಮಾಡುವುದನ್ನು ಬಿಟ್ಟು ಬ್ಯಾಂಕ್ ಹಾಗೂ ಬೆಳೆಗಾರರು ಪರಸ್ಪರ ಮಾತುಕತೆ ಮೂಲಕ ಋಣಮುಕ್ತರಾಗಲು ಅವಕಾಶ ಕಲ್ಪಿಸಿಕೊಡುವುದಾಗಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಮಾಹಿತಿ ನೀಡಿದರು.

ಇತ್ತೀಚಿನ ಬೆಳವಣಿಗೆಗಳಲ್ಲಿ ಕೆಲವು ಬ್ಯಾಂಕ್ ಹಿರಿಯ ಅಧಿಕಾರಿಗಳು ಸುಸ್ತಿದಾರರಾಗಿರುವ ಬೆಳೆಗಾರರ ಸಾಲವನ್ನು ಮಾತುಕತೆಗಳ ಮೂಲಕ ತೀರ್ಮಾನ ಮಾಡುವುದನ್ನು ಪರಿಗಣಿಸದೇ ಕೆಲವು ರಿಯಲ್ ಎಸ್ಟೇಟ್ ಬಂಡವಾಳ ಶಾಹಿಗಳ ಕೈಗೊಂಬೆಯಂತೆ ವರ್ತಿಸಿದ್ದಾರೆಂದು ಟೀಕಿಸಿದರು.

ಈ ಘಟನೆಗಳನ್ನು ಸಧ್ಯದಲ್ಲೇ ನಿಯಂತ್ರಿಸದಿದ್ದಲ್ಲಿ ರೈತ ಬೆಳೆಗಾರರು ಜೀವನಾಧಾರವಾಗಿರುವ ತಮ್ಮ ಅಮೂಲ್ಯವಾದ ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ದಿಮೆದಾರರಿಗೆ ಅನಿವಾರ್ಯವಾಗಿ ಒಪ್ಪಿಸಬೇಕಾಗಿರುತ್ತದೆ. ಇದಕ್ಕೆ ದುರಾಲೋಚನೆ ಮನಸ್ಥಿತಿಯ ಬ್ಯಾಂಕ್ ಅಧಿಕಾರಿಗಳು ಕಾರಣ ಎಂದು ಲೇವಡಿ ಮಾಡಿದರು.

ಈ ಕೂಡಲೇ ಡಿಎಲ್‌ಬಿಸಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆಗಳನ್ನು ನೀಡಿ ಬೆಳೆಗಾರರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಮುಖಂಡರಾದ ಜಯರಾಂ, ಸುರೇಶ್ ಗೌಡ, ಅಶೋಕ್ ಕುಮಾರ್, ಹಾಲಪ್ಪ, ರತೀಶ್ ಕುಮಾರ್, ಸುರೇಂದ್ರ, ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಮತ್ತಿತರರು ಉಪಸ್ಥಿತರಿದ್ದರು.

Indefinite strike in front of banks if e-auctions are not stopped

 

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ...

Related Articles

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಚಿಕ್ಕಮಗಳೂರು: ಹಾಫ್ ಹೆಲ್ಮೆಟ್ ಹಾಕುವವರೇ ಎಚ್ಚರ.. ಎಚ್ಚರ.. ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ...

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ...

₹1,281.80 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ...