Home Crime News ಮುಂಡಗಾರು ಲತಾ ಬಗ್ಗೆ ಸುಳಿವು ಹಿನ್ನೆಲೆ : ನಕ್ಸಲ್ ಕೂಂಬಿಂಗ್ ತೀವ್ರ
Crime News

ಮುಂಡಗಾರು ಲತಾ ಬಗ್ಗೆ ಸುಳಿವು ಹಿನ್ನೆಲೆ : ನಕ್ಸಲ್ ಕೂಂಬಿಂಗ್ ತೀವ್ರ

Share
Share

ಚಿಕ್ಕಮಗಳೂರು : ಜಿಲ್ಲೆಯ ಕಾಡಂಚಿನ ಕುಗ್ರಾಮಗಳಿಗೆ ಭೇಟಿ ನೀಡಿ ಎಸ್ಕೇಪ್ ಆಗಿದ್ದ ನಕ್ಸಲರಿಗಾಗಿ ಇದೀಗ ಪೊಲೀಸ್ ಹಾಗೂ ನಕ್ಸಲ್‌ ನಿಗ್ರಹ ಪಡೆ ಸಿಬ್ಬಂದಿಗಳು ಕೂಂಬಿಂಗ್ ಚುರುಕುಗೊಳಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಾಡಂಚಿನ ಗಡಿ ಗ್ರಾಮಗಳಲ್ಲಿ ಕೂಂಬಿಂಗ್ ಚುರುಕುಗೊಂಡಿದ್ರೆ, ಅಂತರ್ ಜಿಲ್ಲಾ ಗಡಿಯಲ್ಲಿ ವಾಹನ ತಪಾಸಣೆ ಕೂಡ ಹೆಚ್ಚಿದೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ, ಆಗುಂಬೆ ಘಾಟಿ, ಕಳಸ ತಾಲೂಕಿನ ಕುದುರೆಮುಖ ಮಾರ್ಗ, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಸುತ್ತಮುತ್ತ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಮಾರ್ಗದಲ್ಲಿ ಓಡಾಡುವ ಪ್ರತಿಯೊಂದು ವಾಹನಗಳನ್ನೂ ಚೆಕ್ ಮಾಡಿ ಬಿಡುತ್ತಿದ್ದಾರೆ. ಕೊಪ್ಪ ತಾಲೂಕಿನ ಕಾಡಂಚಿನ ಕುಗ್ರಾಮ ಕಡೇಗುಂದಿ ಗ್ರಾಮದ ಸುಬ್ಬೇಗೌಡ ಎಂಬುವರ ಮನೆಗೆ ಭೇಟಿ ನೀಡಿ ಹೋದ ಪರಿಣಾಮ ಅವರು ಹೋದ ಮಾರ್ಗದಲ್ಲಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ. ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೂಡ್ಲಿ ಗ್ರಾಮದಲ್ಲಿ ಆರು ಜನ ಅಪರಿಚಿತರು ಓಡಾಡಿದ್ದರು ಎಂಬ ಮಾಹಿತಿ ಹಿನ್ನೆಲೆ ಆ ಭಾಗದಲ್ಲೂ ಕೂಂಬಿಂಗ್ ಹೆಚ್ಚಾಗಿದೆ.‌ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಗಡಿ ಹಂಚಿಕೊಂಡಿರೋ ಮೂರು ತಾಲೂಕಿನ ಗಡಿಯಲ್ಲೂ ಪೊಲೀಸರು ಹಾಗೂ ನಕ್ಸಲ್ ನಿಗ್ರಹ ಪಡೆ ತೀವ್ರ ಶೋಧ ಕೈಗೊಂಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...