ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆಗಳ ನೋಂದಾವಣೆ ಅತ್ಯಂತ ಕಡಿಮೆ ಇದೆ. ಹೀಗಾಗಿ ಜಿಲ್ಲೆಯಲ್ಲಿರುವ ಪ್ರಮುಖ ಆಸ್ಪತ್ರೆಗಳನ್ನು ಇಎಸ್ಐಗೆ ಜೋಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ, ಇಎಸ್ಐ, ಆರೋಗ್ಯ, ಕಾರ್ಮಿಕ, ಪಿಎಂ ವಿಶ್ವಕರ್ಮ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದ ಅವರು, ಕೊಪ್ಪದ ಒಂದು ಆಸ್ಪತ್ರೆ ಹೊರತುಪಡಿಸಿ ಬೇರೆ ಯಾವುದೇ ಆಸ್ಪತ್ರೆಗಳು ಇಎಸ್ ಐ ಯೋಜನೆಯಡಿ ನೋಂದಣಿಯಾಗಿಲ್ಲ. ಹೀಗಾಗಿ ಇಎಸ್ಐ ಯೋಜನೆಯಡಿ ಹೆಚ್ಚಿನ ಆಸ್ಪತ್ರೆಗಳನ್ನು ಜೋಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯ ಯಾವ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ಅಡಿ ಸೌಲಭ್ಯ ಸಿಗುತ್ತಿದೆಯೋ ಆ ಎಲ್ಲಾ ಆಸ್ಪತ್ರೆಗಳನ್ನು ಇಎಸ್ಐ ಜೊತೆ ಜೋಡಿಸಬೇಕು. ಇದಲ್ಲದೆ ಚಿಕ್ಕಮಗಳೂರಿನ ಬಹುತೇಕ ಪ್ರಮುಖ ಆಸ್ಪತ್ರೆಗಳನ್ನು ಇಎಸ್ಐ ಜೊತೆ ಜೋಡಿಸಿದಾಗ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.
ಪಿ ಎಮ್ ವಿಶ್ವಕರ್ಮ ಯೋಜನೆ ಅಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದುವರೆಗೂ 15 ಕೋಟಿಗೂ ಹೆಚ್ಚು ಸಾಲ ಸೌಲಭ್ಯ ನೀಡಲಾಗಿದೆ. ಇದಲ್ಲದೆ 1000ಕ್ಕೂ ಹೆಚ್ಚು ಕಿಟ್ ವಿತರಣೆ ಮಾಡಿ ಉತ್ತೇಜನ ನೀಡಲಾಗಿದೆ. ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳನ್ನು ಜನರಿಗೆ ನೇರವಾಗಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಮುಖಂಡರಾದ ಎಚ್.ಸಿ.ಕಲ್ಮರುಡಪ್ಪ, ದೀಪಕ್ ದೊಡ್ಡಯ್ಯ ಮತ್ತಿತರರಿದ್ದರು.
Instructions to give more priority to ESI hospitals
Leave a comment