Home namma chikmagalur ಒಂದು ವರ್ಷದ ಅಭಿನಯ – ರಂಗ ತರಬೇತಿ ಡಿಪ್ಲೋಮಾಗೆ ಆಹ್ವಾನ
namma chikmagalurHomeLatest NewsState News

ಒಂದು ವರ್ಷದ ಅಭಿನಯ – ರಂಗ ತರಬೇತಿ ಡಿಪ್ಲೋಮಾಗೆ ಆಹ್ವಾನ

Share
Share
ಚಿಕ್ಕಮಗಳೂರು: ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ ೨೦೨೫-೨೬ (ಒಂದು ವರ್ಷದ ಅಭಿನಯ ಮತ್ತು ರಂಗ ತರಬೇತಿ) ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ (ಆಡಿಷನ್) ಮೇ ೨೫ರಂದು ಬೆಳಿಗ್ಗೆ ೧೦ ಗಂಟೆಗೆ ಮೈಸೂರಿನ ರಾಮಕೃಷ್ಣನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ.
ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ನಿರಂತರ ಕ್ರಿಯಾಶೀಲವಾಗಿದ್ದು ರಂಗಭೂಮಿಯ ಅಧ್ಯಯನ, ಪ್ರಾತ್ಯಕ್ಷಿಕೆ, ಪ್ರಯೋಗ, ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯತ್ನಶೀಲವಾಗಿದೆ.
ತನ್ನ ಚಟುವಟಿಕೆಯ ಭಾಗವಾಗಿ ೧೬ ರಿಂದ ೩೨ ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ವಸತಿ ರಹಿತ ರಂಗಭೂಮಿ ಡಿಪ್ಲೊಮಾ ಕೋರ್ಸ್ ಅನ್ನು ನಡೆಸುತ್ತಿದ್ದು, ಕಳೆದ ಅನೇಕ ವರ್ಷಗಳಿಂದ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ನಟನ ರಂಗಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ನಟನ ರಂಗಶಾಲೆಯಲ್ಲಿ ತರಬೇತಿ ಪಡೆದ ಸುಮಾರು ೫೦೦ಕ್ಕೂ ಹೆಚ್ಚು ಕಲಾವಿದರು ದೇಶದಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
ಪ್ರತಿದಿನ ಸಂಜೆ ೫.೩೦ರಿಂದ ರಾತ್ರಿ ೯ರವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾಧನ, ಬೆಳಕು, ರಂಗ ವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ, ಪ್ರದರ್ಶನ.. ಹೀಗೆ ರಂಗಭೂಮಿಯ ಬೇರೆ ಬೇರೆ ಆಯಾಮಗಳ ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿವೆ. ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ದಿನಾಂಕದಂದೇ ಸಂದರ್ಶನದಲ್ಲಿ ಭಾಗವಹಿಸಬಹುದು.
ರಂಗಭೂಮಿಯನ್ನು ಗಂಭೀರವಾಗಿ ಅಭ್ಯಸಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್ (ತಿತಿತಿ.ಟಿಚಿಣಚಿಟಿಚಿmಥಿsuಡಿu.oಡಿg) ಅಥವಾ ಕಚೇರಿಯಲ್ಲಿ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಪಡೆದು ಅಂಚೆ ಮುಖಾಂತರ ಅಥವಾ ನೇರವಾಗಿ ತಲುಪಿಸಬೇಕು. ಆಡಿಷನ್ ಮತ್ತು ಪ್ರವೇಶಾತಿ ಕುರಿತ ಸೂಚನೆಗಳು ಮತ್ತು ಹೆಚ್ಚಿನ ಮಾಹಿತಿಗಳು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ೭೨೫೯೫೩೭೭೭೭, ೯೪೮೦೪೬೮೩೨೭, ೯೮೪೫೫೯೫೫೦೫ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ನಟನ ರಂಗಶಾಲೆಯ ಪ್ರಕಟಣೆ ತಿಳಿಸಿದೆ.
Invitation to the actor’s theater diploma
Share

Leave a comment

Leave a Reply

Your email address will not be published. Required fields are marked *

Don't Miss

ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಜಿ.ಎಸ್‌. ಬಾಲಕೃಷ್ಣ ಕರ್ತವ್ಯದಿಂದ ವಜಾ

ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತ ನಿರ್ಧಾರವನ್ನು...

ರೈತನಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸಾವು – ಹೊತ್ತಿ ಉರಿದ ಬೈಕ್!

ಚಿಕ್ಕಮಗಳೂರು: ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿ ರೈತರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು-ಕಡೂರು ರಸ್ತೆಯ ಎಐಟಿ ಸರ್ಕಲ್ ಬಳಿ ನಡೆದಿದೆ....

Related Articles

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಒದಗಿಸಿ ನ್ಯಾಯ ದೊರಕಿಸಲು ಸಮೀಕ್ಷೆ

ತರೀಕೆರೆ: ‘ಪರಿಶಿಷ್ಟ ಜಾತಿಯಲ್ಲಿ ರುವ 101 ಜಾತಿಗಳಿಗೂ ಅವರ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಒದಗಿಸಿ...

ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ

ಮೂಡಿಗೆರೆ: ‘ಸತ್ಯದ ಹಾದಿ ಯಲ್ಲಿ ಸಾಗುವ ಮೂಲಕ ದಂಪತಿ ಸಂಬಂಧವನ್ನು ಗಟ್ಟಿ ಮಾಡಿಕೊ ಳ್ಳಬೇಕು’ ಎಂದು...

ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ

ಮೂಡಿಗೆರೆ: ಗೋಣಿಬೀಡು ಹೋಬಳಿಯ ಕಮ್ಮರಗೋಡು ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಬಂದಿದ್ದ ಕಾಡಾನೆಯೊಂದು ಕೃಷಿಹೊಂಡಕ್ಕೆ ಇಳಿದು ಅರ್ಧ...

ವಸೂಲಿ,ವಸೂಲಿ ಎಷ್ಟು ? ಪ್ರವಾಸೋದ್ಯಮ ಅಭಿವೃದ್ಧಿ ಸಭೆ !

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಪ್ರಕರಣಗಳ ಸಭೆ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಅಧ್ಯಕ್ಷತೆಯಲ್ಲಿ ನಡೆಯಿತು....