Home namma chikmagalur chikamagalur ಬಿಜೆಪಿ ನಾಯಕರ ಟೀಕೆಗೆ ಈಶ್ವರ್ ಖಂಡ್ರೆ ತಿರುಗೇಟು
chikamagalurHomeLatest Newsnamma chikmagalur

ಬಿಜೆಪಿ ನಾಯಕರ ಟೀಕೆಗೆ ಈಶ್ವರ್ ಖಂಡ್ರೆ ತಿರುಗೇಟು

Share
Share

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಚಿಕ್ಕಮಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಬಿಜೆಪಿ ಮೊದಲು ತನ್ನ ಆಡಳಿತ ಅವಧಿಯ ಬೆಲೆ ಏರಿಕೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆಗಳು ಬಿಜೆಪಿ ಆಡಳಿತದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ ಎಂದು ಆರೋಪಿಸಿದರು.

ಒಮ್ಮೆ ₹400 ಇದ್ದ ಗ್ಯಾಸ್ ಸಿಲಿಂಡರ್ ದರ ಈಗ ₹1000 ದಾಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿದರೂ ದೇಶದಲ್ಲಿ ದರ ಕಡಿಮೆಯಾಗಿಲ್ಲ ಎಂದು ಹೇಳಿದರು. ಬಡಜನರ ಹಣವನ್ನು ತೆರಿಗೆಗಳ ಮೂಲಕ ಲೂಟಿ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದರು.

ತೆರಿಗೆ ಹಂಚಿಕೆ ವಿಚಾರದಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ ಸಚಿವರು, ರಾಜ್ಯ ಬಿಜೆಪಿ ನಾಯಕರು ದೆಹಲಿಯಲ್ಲಿ ಹಕ್ಕು ಕೇಳಬೇಕು, ಇಲ್ಲಿ ಟೀಕೆ ಮಾಡುವುದು ಬೇಡ ಎಂದು ಲೇವಡಿ ಮಾಡಿದರು.

ಉಪಚುನಾವಣೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದರು. ಪಕ್ಷದೊಳಗಿನ ಸಣ್ಣಪುಟ್ಟ ಅಸಮಾಧಾನಗಳಿದ್ದರೂ, ಎಲ್ಲರಿಗೂ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಕಾಂಗ್ರೆಸ್ ಮಹಿಳಾ ಪರ ಪಕ್ಷವಾಗಿದ್ದು, ಬಿಜೆಪಿ ಮಹಿಳಾ ವಿರೋಧಿ ಧೋರಣೆ ಹೊಂದಿದೆ ಎಂದು ಟೀಕಿಸಿದರು.

Ishwar Khandre hits back at BJP leaders’ criticism

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..?

ಚಿಕ್ಕಮಗಳೂರು:  ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ...

ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳ ವಾರ್ಷಿಕ ಸಿಡಿ ಉತ್ಸವ

ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ ವಾರ್ಷಿಕ ಸಿಡಿ ಉತ್ಸವ ಸಹಸ್ರಾರು ಭಕ್ತರ ನಡುವೆ ಶುಕ್ರವಾರ ವೈಭವದಿಂದ ನಡೆಯಿತು. ಉತ್ಸವದ ಅಂಗವಾಗಿ...

Related Articles

ಡಾ.ಚಂದ್ರಶೇಖರ್‌ಸಾಲಿಮಠ್ ಪ್ರಭಾರ ಜಿಲ್ಲಾಸರ್ಜನ್

ಚಿಕ್ಕಮಗಳೂ: ಅರವಳಿಕೆ ವಿಭಾಗ ಮತ್ತು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ರುಕ್ಷ್ಮಿಣಿಯಮ್ಮ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ...

ಭದ್ರಾ ನದಿಯ ಹಿನ್ನೀರಿನಲ್ಲಿ ಯುವಕ ನಾಪತ್ತೆ

ಎನ್. ಆರ್.ಪುರ ಭದ್ರಾ ನದಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ನರಸಿಂಹರಾಜಪುರ ತಾಲೂಕಿನ...

ರಾಜ್ಯದಲ್ಲಿ ವಿದ್ಯುತ್ ದರ ಹುಚ್ಚಂಬಟ್ಟೆ ಏರಿಕೆ

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ‌್.ಯಡಿಯೂರಪ್ಪ ತಿಳಿಸಿದರು....

ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ

ಚಿಕ್ಕಮಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಸದಸ್ಯ...