Home namma chikmagalur ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ
namma chikmagalurchikamagalurHomeLatest News

ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ

Share
????????????????????????????????????
Share

ಚಿಕ್ಕಮಗಳೂರು:  ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ. ಆಸಕ್ತಿ ಯುಳ್ಳ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಜೊತೆಗೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಲು ಸದಾಬದ್ಧ ವಾಗಿದ್ದೇವೆ ಎಂದು ಗಾಲ್ಪ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಸಂಜಯ್ ನಾಡಗೌಡ ಹೇಳಿದರು.

ತಾಲ್ಲೂಕಿನ ಅಲ್ಲಂಪುರ ಸಮೀಪದ ಗಾಲ್ಪ್ ಕ್ಲಬ್‌ನಲ್ಲಿ ರಾಜ್ಯ ಗಾಲ್ಪ್ ಅಸೋಸಿಯೇಷನ್ ಹಾಗೂ ಮೈ ಸೂರು ಸ್ಯಾಂಡಲ್ ಸೋಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ಧ ರಾಜ್ಯಮಟ್ಟದ ಗಾಲ್ಪ್ ಕ್ರೀಡಾ ಸ್ಪರ್ಧೆ ಯ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಸಂಜೆ ಭಾಗವಹಿಸಿ ಅವರು ಮಾತನಾಡಿದರು.

ಗಾಲ್ಪ್ ಅಂತರಾಷ್ಟ್ರೀಯ ಕ್ರೀಡೆಯಾಗಿದೆ. ಹೀಗಾಗಿ ಸ್ಥಳೀಯವಾಗಿ ಯುವಜನತೆಗೆ ಕ್ರೀಡೆಯ ಪರಿಚ ಯಿಸಲು ಸಲುವಾಗಿ ವರ್ಷಕ್ಕೊಮ್ಮೆ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಿ ಕ್ರೀಡೆಗೆ ಪ್ರೋತ್ಸಾಹಿಸಲಾಗು ತ್ತಿದೆ. ಅಲ್ಲದೇ ಬಡವರ್ಗದ ಕ್ರೀಡಾಸಕ್ತ ಯುವಕರಿಗೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಹಕರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ರಾಜ್ಯದಲ್ಲಿ ಸುಮಾರು ೧೬ ಜಿಲ್ಲೆಗಳಲ್ಲಿ ಗಾಲ್ಪ್ ಸಂಸ್ಥೆ ಅಸ್ಥಿತ್ವದಲ್ಲಿದೆ. ಅನೇಕ ಯುವಕರು, ಶಾ ಲಾ ವಿದ್ಯಾರ್ಥಿಗಳಿಗೆ ಗಾಲ್ಪ್ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಲಾಗುತ್ತಿದೆ. ಭಾರತದಲ್ಲಿ ಅತಿಹೆಚ್ಚು ಗಾಲ್ಪ್ ಆಟ ಗಾರರಿದ್ದು ಈ ಕ್ರೀಡಾಪಟುಗಳು ಒಲಂಪಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜಯ ಸಾಧಿಸುವುದೇ ಅಸೋಸಿ ಯೇಷನ್ ಗುರಿಯಾಗಿದೆ ಎಂದರು.

ಭಾರತದಲ್ಲಿ ಕರ್ನಾಟಕ ಗಾಲ್ಪ್ ಕ್ರೀಡೆಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗಾಲ್ಪ್ ಕ್ರೀಡೆಯಲ್ಲಿ ಕಠಿಣ ಪರಿಶ್ರಮದಿಂದ ತೊಡಗಿಸಿಕೊಳ್ಳುವ ಆಸಕ್ತಿ ಕ್ರೀಡಾಪಟುಗಳಿಗೆ ಸಮಗ್ರ ತರಬೇತಿಗಾಗಿ ಅಸೋಸಿಯೇ ಷನ್ ಕೋಟ್ಯಾಂತರ ಹಣವನ್ನು ಇರಿಸಿದ್ದು ಒಟ್ಟಾರೆ ಗಾಲ್ಪ್ ಕ್ರೀಡೆಯನ್ನು ದೇಶದಲ್ಲಿ ಮುಂಚೂಣಿಗೆ ತರು ವುದೇ ಮೂಲಧ್ಯೇಯ ಎಂದು ತಿಳಿಸಿದರು.

ಗಾಲ್ಪ್ ಕ್ರೀಡಾ ಸ್ಪರ್ಧೆಯಲ್ಲಿ ಮೂರು ವಿಭಾಗಗಳಾಗಿ ವಿಂಗಡಿಸಿದ್ದು ಓಪನ್ ತಂಡದಲ್ಲಿ ಬೆಂಗಳೂರು ಗ್ಲಾಲ್ಪ್ ಕ್ಲಬ್ ಎ ತಂಡ ಪ್ರಥಮ, ಬಿ ತಂಡ ದ್ವೀತಿಯ. ಗಾಲ್ಪ್ ಹ್ಯಾಂಡಿಕ್ರಾಫ್ಟ್ ತಂಡದಲ್ಲಿ ಎಂಇಜಿ ಆರ್ಮಿ ತಂಡ ಪ್ರಥಮ, ಕೆಜಿಎಫ್ ಜಿಮ್‌ಖಾನಾ ದ್ವೀತಿಯ ಹಾಗೂ ಸಿಂಗಲ್ ಸ್ಪರ್ಧೆಯಲ್ಲಿ ಮೈಸೂರು ಶ್ರೀಧರ್ ಸಿಂಗ್ ಪ್ರಥಮ. ಬೆಂಗಳೂರು ಆಯಾನ್‌ಜಂಗ್ ದ್ವೀತಿಯ ಪಡೆದುಕೊಂಡರು.

ಗಾಲ್ಪ್ ಕ್ಲಬ್ ಸಂಸ್ಥಾಪಕ ಸುದರ್ಶನ್ ಮಾತನಾಡಿ ಗಾಲ್ಪ್ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡುವ ಸಲುವಾ ಗಿ ವಿಶಾಲವಾದ ಆಟದ ಮೈದಾನವನ್ನು ನಿರ್ಮಿಸಿ, ಸ್ಪರ್ಧಾಳುಗಳಿಗೆ ಪ್ರೋತ್ಸಾಹಿಸುತ್ತಿದೆ. ಇಂದು ರಾಜ್ಯಾದ್ಯ ಂತ ವಿವಿಧ ಜಿಲ್ಲೆಗಳಿಂದ ಕ್ರೀಡಾಸಕ್ತರು ಜಿಲ್ಲೆಗಾಗಮಿಸಿ ಸ್ಫರ್ಧೆಯಲ್ಲಿ ಭಾಗವಹಿಸಿರುವುದು ಅತ್ಯಂತ ಹೆಮ್ಮೆ ಯ ಸಂಗತಿ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಗಾಲ್ಪ್ ಅಸೋಸಿಯೇಷನ್ ಕಾರ್ಯದರ್ಶಿ ರಾಮ್‌ನಾಗಪ್ಪ, ಚಿಕ್ಕಮಗಳೂ ರು ಗಾಲ್ಪ್ ಕ್ಲಬ್ ನಾಯಕ ರವಿಶಂಕರ್, ಸ್ಪರ್ಧೆ ಆಯೋಜಕರಾದ ಹೆಚ್.ಡಿ.ವಿನಯ್‌ರಾಜ್, ರವಿಮುತ್ತಪ್ಪ, ಹೇಮಂತ್, ಶಿವಪ್ರಕಾಶ್, ಸಿ.ಜೆ.ಗೌತಮ್, ಹೆಚ್.ಕೆ.ಕೃತಿ, ಸ್ಪರ್ಧಾಳುಗಳು ಮತ್ತಿತರರು ಉಪಸ್ಥಿತರಿದ್ದರು.

It is a misconception that golf is a rich man’s sport

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...