Home namma chikmagalur ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ
namma chikmagalurchikamagalurHomeLatest News

ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ

Share
????????????????????????????????????
Share

ಚಿಕ್ಕಮಗಳೂರು:  ಗಾಲ್ಪ್ ಕ್ರೀಡೆ ಶ್ರೀಮಂತರ ಆಟವೆಂಬುದು ತಪ್ಪುಕಲ್ಪನೆ. ಆಸಕ್ತಿ ಯುಳ್ಳ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಜೊತೆಗೆ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಲು ಸದಾಬದ್ಧ ವಾಗಿದ್ದೇವೆ ಎಂದು ಗಾಲ್ಪ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಸಂಜಯ್ ನಾಡಗೌಡ ಹೇಳಿದರು.

ತಾಲ್ಲೂಕಿನ ಅಲ್ಲಂಪುರ ಸಮೀಪದ ಗಾಲ್ಪ್ ಕ್ಲಬ್‌ನಲ್ಲಿ ರಾಜ್ಯ ಗಾಲ್ಪ್ ಅಸೋಸಿಯೇಷನ್ ಹಾಗೂ ಮೈ ಸೂರು ಸ್ಯಾಂಡಲ್ ಸೋಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ಧ ರಾಜ್ಯಮಟ್ಟದ ಗಾಲ್ಪ್ ಕ್ರೀಡಾ ಸ್ಪರ್ಧೆ ಯ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಸಂಜೆ ಭಾಗವಹಿಸಿ ಅವರು ಮಾತನಾಡಿದರು.

ಗಾಲ್ಪ್ ಅಂತರಾಷ್ಟ್ರೀಯ ಕ್ರೀಡೆಯಾಗಿದೆ. ಹೀಗಾಗಿ ಸ್ಥಳೀಯವಾಗಿ ಯುವಜನತೆಗೆ ಕ್ರೀಡೆಯ ಪರಿಚ ಯಿಸಲು ಸಲುವಾಗಿ ವರ್ಷಕ್ಕೊಮ್ಮೆ ರಾಜ್ಯಮಟ್ಟದ ಸ್ಪರ್ಧೆಯನ್ನು ಆಯೋಜಿಸಿ ಕ್ರೀಡೆಗೆ ಪ್ರೋತ್ಸಾಹಿಸಲಾಗು ತ್ತಿದೆ. ಅಲ್ಲದೇ ಬಡವರ್ಗದ ಕ್ರೀಡಾಸಕ್ತ ಯುವಕರಿಗೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಹಕರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ರಾಜ್ಯದಲ್ಲಿ ಸುಮಾರು ೧೬ ಜಿಲ್ಲೆಗಳಲ್ಲಿ ಗಾಲ್ಪ್ ಸಂಸ್ಥೆ ಅಸ್ಥಿತ್ವದಲ್ಲಿದೆ. ಅನೇಕ ಯುವಕರು, ಶಾ ಲಾ ವಿದ್ಯಾರ್ಥಿಗಳಿಗೆ ಗಾಲ್ಪ್ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಲಾಗುತ್ತಿದೆ. ಭಾರತದಲ್ಲಿ ಅತಿಹೆಚ್ಚು ಗಾಲ್ಪ್ ಆಟ ಗಾರರಿದ್ದು ಈ ಕ್ರೀಡಾಪಟುಗಳು ಒಲಂಪಿಕ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜಯ ಸಾಧಿಸುವುದೇ ಅಸೋಸಿ ಯೇಷನ್ ಗುರಿಯಾಗಿದೆ ಎಂದರು.

ಭಾರತದಲ್ಲಿ ಕರ್ನಾಟಕ ಗಾಲ್ಪ್ ಕ್ರೀಡೆಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗಾಲ್ಪ್ ಕ್ರೀಡೆಯಲ್ಲಿ ಕಠಿಣ ಪರಿಶ್ರಮದಿಂದ ತೊಡಗಿಸಿಕೊಳ್ಳುವ ಆಸಕ್ತಿ ಕ್ರೀಡಾಪಟುಗಳಿಗೆ ಸಮಗ್ರ ತರಬೇತಿಗಾಗಿ ಅಸೋಸಿಯೇ ಷನ್ ಕೋಟ್ಯಾಂತರ ಹಣವನ್ನು ಇರಿಸಿದ್ದು ಒಟ್ಟಾರೆ ಗಾಲ್ಪ್ ಕ್ರೀಡೆಯನ್ನು ದೇಶದಲ್ಲಿ ಮುಂಚೂಣಿಗೆ ತರು ವುದೇ ಮೂಲಧ್ಯೇಯ ಎಂದು ತಿಳಿಸಿದರು.

ಗಾಲ್ಪ್ ಕ್ರೀಡಾ ಸ್ಪರ್ಧೆಯಲ್ಲಿ ಮೂರು ವಿಭಾಗಗಳಾಗಿ ವಿಂಗಡಿಸಿದ್ದು ಓಪನ್ ತಂಡದಲ್ಲಿ ಬೆಂಗಳೂರು ಗ್ಲಾಲ್ಪ್ ಕ್ಲಬ್ ಎ ತಂಡ ಪ್ರಥಮ, ಬಿ ತಂಡ ದ್ವೀತಿಯ. ಗಾಲ್ಪ್ ಹ್ಯಾಂಡಿಕ್ರಾಫ್ಟ್ ತಂಡದಲ್ಲಿ ಎಂಇಜಿ ಆರ್ಮಿ ತಂಡ ಪ್ರಥಮ, ಕೆಜಿಎಫ್ ಜಿಮ್‌ಖಾನಾ ದ್ವೀತಿಯ ಹಾಗೂ ಸಿಂಗಲ್ ಸ್ಪರ್ಧೆಯಲ್ಲಿ ಮೈಸೂರು ಶ್ರೀಧರ್ ಸಿಂಗ್ ಪ್ರಥಮ. ಬೆಂಗಳೂರು ಆಯಾನ್‌ಜಂಗ್ ದ್ವೀತಿಯ ಪಡೆದುಕೊಂಡರು.

ಗಾಲ್ಪ್ ಕ್ಲಬ್ ಸಂಸ್ಥಾಪಕ ಸುದರ್ಶನ್ ಮಾತನಾಡಿ ಗಾಲ್ಪ್ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡುವ ಸಲುವಾ ಗಿ ವಿಶಾಲವಾದ ಆಟದ ಮೈದಾನವನ್ನು ನಿರ್ಮಿಸಿ, ಸ್ಪರ್ಧಾಳುಗಳಿಗೆ ಪ್ರೋತ್ಸಾಹಿಸುತ್ತಿದೆ. ಇಂದು ರಾಜ್ಯಾದ್ಯ ಂತ ವಿವಿಧ ಜಿಲ್ಲೆಗಳಿಂದ ಕ್ರೀಡಾಸಕ್ತರು ಜಿಲ್ಲೆಗಾಗಮಿಸಿ ಸ್ಫರ್ಧೆಯಲ್ಲಿ ಭಾಗವಹಿಸಿರುವುದು ಅತ್ಯಂತ ಹೆಮ್ಮೆ ಯ ಸಂಗತಿ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಗಾಲ್ಪ್ ಅಸೋಸಿಯೇಷನ್ ಕಾರ್ಯದರ್ಶಿ ರಾಮ್‌ನಾಗಪ್ಪ, ಚಿಕ್ಕಮಗಳೂ ರು ಗಾಲ್ಪ್ ಕ್ಲಬ್ ನಾಯಕ ರವಿಶಂಕರ್, ಸ್ಪರ್ಧೆ ಆಯೋಜಕರಾದ ಹೆಚ್.ಡಿ.ವಿನಯ್‌ರಾಜ್, ರವಿಮುತ್ತಪ್ಪ, ಹೇಮಂತ್, ಶಿವಪ್ರಕಾಶ್, ಸಿ.ಜೆ.ಗೌತಮ್, ಹೆಚ್.ಕೆ.ಕೃತಿ, ಸ್ಪರ್ಧಾಳುಗಳು ಮತ್ತಿತರರು ಉಪಸ್ಥಿತರಿದ್ದರು.

It is a misconception that golf is a rich man’s sport

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...