Home namma chikmagalur chikamagalur ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು
chikamagalurHomeLatest Newsnamma chikmagalur

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

Share
Share

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು.

ಸಾವಯವ ರೈತರ ಬಳಗದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ಏರ್ಪಡಿಸಿದ್ದ ಸಾವಯವ ಕೃಷಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ ಕೃಷಿ ಬೇಕಾದ ತನ್ನದೇ ಆದ ಪೋಷಕಾಂಶಗಳನ್ನು ಮಣ್ಣು ಹೊಂದಿತ್ತು. ಪ್ರಾಣಿ, ಪಕ್ಷಿಗಳು ಮತ್ತು ಜಾನುವಾರುಗಳ ಕೃಷಿಯ ಅವಿಭಾಜ್ಯ ಅಂಗವಾಗಿದ್ದವು. ಈಗ ಅವುಗಳಿಂದ ರೈತರು ಕ್ರಮೇಣ ದೂರವಾಗುತ್ತಿದ್ದಾರೆ. ಮಣ್ಣನ್ನು ಪೋಷಣೆ ಮಾಡುವ ಬದಲು ಶೋಷಣೆ ಮಾಡಲಾಗುತ್ತಿದೆ. ರಾಸಾಯನಿಕ ಗೊಬ್ಬರ ಬಳಕೆ ಹೆಚ್ಚಳದಿಂದ ಮಣ್ಣು ರೋಗಯುಕ್ತವಾಗಿದೆ. ಅದನ್ನು ಮತ್ತೆ ಆರೋಗ್ಯಯುಕ್ತ ಮಾಡಬೇಕಾಗಿದೆ ಎಂದರು.

ಸಾವಯವ ಕೃಷಿಯಲ್ಲಿ ಮಣ್ಣು, ಗೊಬ್ಬರ, ನೀರು ಮತ್ತು ಜೀವಾಣುಗಳು ಸದೃಢವಾಗಿದ್ದರೆ ಬೆಳೆ ಸಮೃದ್ದವಾಗಿ ಬರಲಿದೆ. ರಾಸಾಯನಿಕದಿಂದ ಬರಡಾಗಿರುವ ಮಣ್ಣಿಗೆ ಮತ್ತೊಂದು ಬಾರಿ ಜೀವ ತುಂಬುವ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಮೊದಲನೆಯದಾಗಿ ಮಣ್ಣಿಗೆ ಉಪಚಾರ ಮಾಡುವ ಅಗತ್ಯವಿದ್ದು, ಬೆಳೆಗೆ ಉಪಚಾರ ಮಾಡಿ ಪ್ರಯೋಜನವಿಲ್ಲ. ಮಣ್ಣಿಗೆ ಬೇಕಾದ ಜೀವಾಣುಗಳನ್ನು ಹೆಚ್ಚಿಸುವ ಕೆಲಸ ಆಗಬೇಕಿದೆ. ಆ ಮೂಲಕ ಬಡವಾಗಿರುವ ಮಣ್ಣನ್ನು ಮತ್ತೆ ಸಿರಿವಂತಗೊಳಿಸಬೇಕಾಗಿದೆ ಎಂದರು.

ರೈತರೇ ತಯಾರಿಸಬಹುದಾದ ರಂಜಕ, ಯೂರಿಯಾ, ಪೊಟ್ಯಾಷಿಯಂ, ಗಂಧಕ, ಸಾರಜನಕದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಸ್ವಾಮೀಜಿ ವಿವರಿಸಿದರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಪೀಠದ ನಿಶ್ಚಲಾನಂದನಾಥಸ್ವಾಮೀಜಿ ಮಾತನಾಡಿ, ‘ರಾಸಾಯನಿಕ ಗೊಬ್ಬರ ಬಳಕೆಯಿಂದ ಆಗುತ್ತಿರುವ ಅನಾಹುತಗಳನ್ನು ರೈತರು ನಿಧಾನಕ್ಕೆ ಅರಿಯುತ್ತಿದ್ದಾರೆ. ಮಂಡ್ಯ ಜಿಲ್ಲೆಯ ರೈತರು ಸಾವಯವ ಕೃಷಿ ಕಡೆ ಹೊರಳುತ್ತಿದ್ದಾರೆ. ಸಾವಯವ ಕೃಷಿಯಿಂದ ಉತ್ಪಾದನಾ ವೆಚ್ಚ ಕಡಿಮೆಯಾಗಲಿದ್ದು, ಗುಣಮಟ್ಟದ ಆಹಾರ ಉತ್ಪಾದನೆ ಸಾಧ್ಯ. ಇದಕ್ಕೆ ಪೂರಕವಾಗಿ 300 ದೇಶಿಯ ಹಸುಗಳನ್ನು ಹಾಸನ, ಮಂಡ್ಯ ಜಿಲ್ಲೆಯ ರೈತರಿಗೆ ಮಠದಿಂದ ನೀಡಲಾಗಿದೆ’ ಎಂದು ಹೇಳಿದರು.

ಸಾವಯವ ರೈತರ ಬಳಗದ ಚಂದ್ರಶೇಖರ ನಾರಣಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಮಂಜೇಗೌಡ, ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್‌, ನಗರಸಭೆ ಅಧ್ಯಕ್ಷೆ ಭವ್ಯಾ ಮಂಜುನಾಥ್ ಭಾಗವಹಿಸಿದ್ದರು.

It is essential to maintain soil fertility which increases microbial activity.

Share

Leave a comment

Leave a Reply

Your email address will not be published. Required fields are marked *

Don't Miss

ರಸ್ತೆಯಲ್ಲಿ ದುಡುಕಿನಿಂದ ಚಾಲನೆ – ಪ್ರಕರಣ ದಾಖಲು

ಮೂಡಿಗೆರೆ: ಇನ್‌ಸ್ಟಾಗ್ರಾಮ್‌ನಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ಗಾಗಿ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ರೀಲ್ಸ್ ಮಾಡಿದ್ದ ಮೂಡಿಗೆರೆ ಮೂಲದ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ರಾಜು ಪಿ.ಕೆ...

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಯುವಕ ಬಂಧನ

ಶೃಂಗೇರಿ:  ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ ಎಂಬಾತ ತನ್ನ ಅಂಗಡಿ ಬಳಿ ಬಂದಿದ್ದ ಅಪ್ರಾಪ್ತ ಬಾಲಕಿಯ ಖಾಸಗಿ...

Related Articles

ಆರ್.ಎಸ್.ಎಸ್. ಲೆಕ್ಕ ಕೇಳಲು ನೀವ್ಯಾರು ?

ಮೂಡಿಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಹಾಗೂ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಕಳ್ಳತನ ಆರೋಪಿ ಬಂಧನ-₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಅಲ್ಲೂರು: ಬಸರವಳ್ಳಿ ಗ್ರಾಮದ ಮಂಜುನಾಥ್ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು...

ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಕನ್ನೇರಿ ಸ್ವಾಮೀಜಿ ವಿರುದ್ಧ ಆಕ್ರೋಶ

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕನ್ನೇರಿ...