Home namma chikmagalur chikamagalur ಪಿಎಂಎಸ್‌ವೈಎಂ ಯೋಜನೆಯ ಲಾಭ ಪಡೆಯುವುದು ಅಗತ್ಯ
chikamagalurHomeLatest Newsnamma chikmagalur

ಪಿಎಂಎಸ್‌ವೈಎಂ ಯೋಜನೆಯ ಲಾಭ ಪಡೆಯುವುದು ಅಗತ್ಯ

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ (ಪಿಎಂಎಸ್‌ವೈಎಂ) ವಿಶೇಷ ನೋಂದಣಿ ಅಭಿಯಾನವನ್ನು ಜನವರಿ ೧೫ ರಿಂದ ಮಾರ್ಚ್ ೧೫ರವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲ ಅಸಂಘಟಿತ ಕಾರ್ಮಿಕರು ಹೆಸರು ನೋಂದಾಯಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಸಲಹೆ ನೀಡಿದರು.

ಭಾರತ ಸರ್ಕಾರದ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್ ಯೋಜನೆಗೆ ಒಳಪಡುವ ವಿವಿಧ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಲು ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಂಡಿರುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಎಲ್ಲಾ ಕಾರ್ಮಿಕರಿಗೆ ಒದಗಿಸುತ್ತಿರುವ ಪಿಂಚಣಿ ಯೋಜನೆ ಇದಾಗಿದ್ದು, ಗೃಹ ಆಧಾರಿತ ಕಾರ್ಮಿಕರು, ಸಾರಿಗೆ ಚಾಲಕರು, ಕೈಮಗ್ಗ. ಚರ್ಮೋದ್ಯಮ ಇಟ್ಟಿಗೆ ಬಟ್ಟಿ, ನರೇಗಾ ಕಾರ್ಮಿಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಹಾಗೂ ವಿವಿಧ ರೀತಿಯ ಇತರೆ ಉದ್ಯೋಗ ಮಾಡುತ್ತಿರುವವರು ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

ಫಲಾನುಭವಿಗಳಾಗುವವರು ೧೮ ರಿಂದ ೪೦ ವರ್ಷದೊಳಗಿನ ಅಸಂಘಟಿತ ಕಾರ್ಮಿಕರಾಗಿರಬೇಕು ಹಾಗೂ ಇಎಸ್‌ಐ, ಪಿಎಫ್, ಎನ್‌ಪಿಎಸ್ ಹೊಂದಿರಬಾರದು, ಹಾಗೆಯೇ ಆದಾಯ ತೆರಿಗೆ ಪಾವತಿದಾರರೂ ಆಗಿರಬಾರದು ಎಂದ ಜಿಲ್ಲಾಧಿಕಾರಿಗಳು, ಈ ಯೋಜನೆಯಲ್ಲಿ ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರವಾಗಿ ಕೇಂದ್ರ ಸರ್ಕಾರವು ಪಿಂಚಣಿ ಖಾತೆಗೆ ಹಣ ಪಾವತಿಸುತ್ತದೆ. ೬೦ ವರ್ಷ ಪೂರ್ಣಗೊಂಡ ನಂತರ ಅಂತಹ ಕಾರ್ಮಿಕರು ಮಾಸಿಕ ೩ ಸಾವಿರ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ವಂತಿಕೆಯು ಕನಿಷ್ಠ ೫೫ ರಿಂದ ಗರಿಷ್ಠ ೨೦೦ ರೂ.ಗಳಾಗಿರುತ್ತದೆ. ವಯಸ್ಸಿಗನುವಾಗಿ ವಂತಿಕೆಯನ್ನು ನಿಗದಿಪಡಿಸಲಾಗಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ೪೭೯೦ ಜನ ಕಾರ್ಮಿಕರನ್ನು ನೋಂದಾಯಿಸಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿಯನ್ನು ಕೂಡ ರಚಿಸಲಾಗಿದೆ ಎಂದ ಅವರು, ಸಮಿತಿಯ ಪದಾಧಿಕಾರಿಗಳು ಈ ಬಗ್ಗೆ ಜಿಲ್ಲೆಯಲ್ಲಿ ವ್ಯಾಪಕವಾದ ಜಾಗೃತಿ ಹಾಗೂ ಪ್ರಚಾರವನ್ನು ಕೈಗೊಂಡು ಅಸಂಘಟಿತ ವಲಯದ ಕಾರ್ಮಿಕರಿಗೆ ಈ ಯೋಜನೆಯ ಲಾಭ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಸಿ.ಸುರೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಅಸಂಘಟಿತ ವಲಯದ ಕಾರ್ಮಿಕ ಮುಖಂಡರು ವ್ಯಾಪಾರ, ಉದ್ಯೋಗ ಸಂಘದವರು ಹಾಗೂ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

It is necessary to take advantage of the PMSYM scheme.

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ. ಉಮೇಶ್ ಜಮೀನು ಕೆಲಸಕ್ಕೆ ತೆರಳಿದ್ದ...

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನಯ್ ಬಿ.ಕೆ....

Related Articles

ನಿಗಮದ ಸಾಲದ ಬಡ್ಡಿ ಮನ್ನಾಗೆ ಸಿ.ಟಿ.ರವಿ ಖಂಡನೆ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲದ ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ...

ಜಿಲ್ಲಾಸ್ಪತ್ರೆಗೆ ಎಂಎಲ್ಸಿ ಸಿ.ಟಿ. ರವಿ ಭೇಟಿ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ...

ಸ್ನಾನಕ್ಕೆ ಇಳಿದಿದ್ದ ಯುವಕ ಕೆರೆಯಲ್ಲಿ ನಾಪತ್ತೆ

ಕಳಸ : ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಂಬಾತೀರ್ಥದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಭದ್ರಾ...

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ ಮಹಿಳೆಗೆ ವಂಚನೆ

ಚಿಕ್ಕಮಗಳೂರು : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಅಮಿಷಕ್ಕೆ ಒಳಗಾದ ಮಹಿಳೆಯೊಬ್ಬರು...