Home Latest News ಐ.ಟಿ.ರೈಡ್ – ನಲುಗಿರುವ ಲೈಫ್ ಲೈನ್ ಫೀಡ್ಸ್ ?
Latest NewschikamagalurHomenamma chikmagalur

ಐ.ಟಿ.ರೈಡ್ – ನಲುಗಿರುವ ಲೈಫ್ ಲೈನ್ ಫೀಡ್ಸ್ ?

Share
Share

ಚಿಕ್ಕಮಗಳೂರು: ಸತ್ಯ ಹೇಳಲು ಎದೆಗಾರಿಕೆ ಬೇಕು ಸುಳ್ಳು ಹೇಳುವುದಕ್ಕೆ ಬುಕಿಟ್ ಇದ್ದರೆ ಸಾಕು.ಕಳೆದ ವಾರ ಲೈಫ್ ಲೈನ್ ಫೀಡ್ಸ್ ನ ಕಿಶೋರ್ ಕುಮಾರ್ ಹೆಗ್ಡೆ ಮನೆ,ಕಛೇರಿ ಮತ್ತು ಗೆಸ್ಟ್ ಹೌಸ್ ಸೇರಿದಂತೆ ಹಲವು ಕಡೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ ಸತತ ಐದು ದಿನಗಳು ಜಾಲಾಡಿದ ಸುದ್ದಿ “ಗುಮ್ಮ” ನಂತೆ ಇರುವುದು ಏಕೆ ಈ ಬಗ್ಗೆ ನಿಗೂಢವಾಗಿರುವುದು ಏಕೆ ?ಎಂದು ಹಲವು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಇಪ್ಪತ್ತೈದು ವರ್ಷಗಳ ಹಿಂದೆ ಸಣ್ಣದಾದ ಉದ್ಯಮ ಪ್ರಾರಂಭಿಸಿ ಇಂದು ಬೃಹತ್ ಉದ್ಯಮವಾಗಿ ರೂಪಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕೋಟ್ಯಂತರ ವಹಿವಾಟು ನಡೆಸುವ ಹೆಗ್ಡೆ ಬೃಹತ್ ಫ್ಯಾಕ್ಟರಿ ಸೇರಿದಂತೆ ಜಮೀನು ಖರೀದಿಸಿದ್ದಾರೆ ನೂರಾರು ವಾಹನಗಳು ಬೆಲೆ ಬಾಳುವ ವಸ್ತುಗಳ ಮಾಲೀಕರಾಗಿದ್ದಾರೆ.ಅವರಾಯಿತು ಅವರ ಉದ್ಯಮವಾಯಿತು ಎಂಬಂತೆ ಇದ್ದವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದವರ ಮೇಲೆ ಏಕಾ,ಏಕಿ ರೈಡ್ ನಡೆದಿರುವ ಉದ್ದೇಶ ಗೊತ್ತಾಗುತ್ತಿಲ್ಲಾ ಎನ್ನುತ್ತಾರೆ.

ಪ್ರತಿಯೊಂದು ವ್ಯವಹಾರ ಲೆಕ್ಕಾಚಾರವಾಗಿ ಮಾಡುತ್ತಿದ್ದರು ಎಂದರೆ ಐದು ದಿನ ಹಗಲು ರಾತ್ರಿ ನಡೆಸಿರುವ ತನಿಖೆಯಾದರು ಏನು. ಆದಾಯ ತೆರಿಗೆ ಇಲಾಖೆಯವರು ಕಳೆದ ಕೆಲ ವರ್ಷಗಳಿಂದ ಇವರ ವ್ಯವಹಾರ ಮೇಲೆ ಹದ್ದಿನ ಕಣ್ಣು ಇಟ್ಟು ಮೊನ್ನೆ ಹೆಗ್ಡೆ ಸೇರಿದಂತೆ ಅವರ ನೌಕರ ವರ್ಗದವರಿಗೆ ನಲವತ್ತಕ್ಕೂ ಹೆಚ್ಚು ಅಧಿಕಾರಿಗಳು ತೀವ್ರ ತನಿಖೆ ನಡೆಸಿ ಇಂಚು,ಇಂಚು ಮಾಹಿತಿ ಸಂಗ್ರಹಿಸಿದ್ದಾರೆ ಜೊತೆಗೆ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗುತ್ತಿದೆ.ತನಿಖೆಯ ಸಮಯದಲ್ಲಿ ಮಾನಸಿಕ ದೈಹಿಕ ಹಿಂಸೆ ಅನುಭವಿಸಿದವರು ಅಲ್ಲಿ ಇಲ್ಲಿ ಮಾತನಾಡುತ್ತಿದ್ದಾರೆ.

ಆದಾಯ ತೆರಿಗೆ ಇಲಾಖೆ ತನಿಖೆಯಿಂದ ವ್ಯವಹಾರದ ಮೇಲೆ ಪೆಟ್ಟು ಬೀಳುವುದರಲ್ಲಿ ಅನುಮಾನವಿಲ್ಲ ಎಂದು ಪರಿಣಿತರ ಅಭಿಪ್ರಾಯವಾಗಿದೆ.ಇಷ್ಟೆಲ್ಲಾ ನಡೆದರೂ ಪತ್ರಿಕೆಗಳಲ್ಲಿ ಸುದ್ದಿ ಆಗದಿರುವುದರ ಹಿಂದೆ ಆದಾಯ ಇಲಾಖೆಯವರ ಭಯವೋ ಅಥವಾ ಹೆಗ್ಡೆ ಮೇಲಿನ ಪ್ರೀತಿಯೋ ಎಂದು ಹಲವರು ಪ್ರಶ್ನೆ ಮಾಡುತ್ತಿದ್ದಾರೆ.

IT Raid – Lifeline Feeds in the Middle?

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...