Home Latest News Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?
Latest NewsHomePolitical News

Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?

Share
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷ ಅಜಿತ್ ರಂಜನ್ ಕುಮಾರ್ ಬಹುತೇಕ ಕಾಂಗ್ರೆಸ್ ಸೇರುವುದು ಖಚಿತ.

ಮೂಡಿಗೆರೆ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಪತ್ನಿ ಗೀತಾರನ್ನು ಕೂರಿಸಲು ಕಾಂಗ್ರೆಸ್ ನವರ ಬೆಂಬಲ ಪಡೆದು ಐದು ತಿಂಗಳ ಹಿಂದೆ ತೀರ್ಮಾನವಾಗಿತ್ತು.

ಗೀತಾ ರಾಜೀನಾಮೆ ನೀಡಿ ಇಂದು ಪಟ್ಟಣ ಪಂಚಾಯತಿ ಸದಸ್ಯರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸುವುದಕ್ಕಿಂತ ಎಲ್ಲರಿಗೂ ತಿಳಿದ ವಿಚಾರ.

ರಂಜನ್ ಬಿಜೆಪಿಯಲ್ಲಿ ಗುರ್ತಿಸಿಕೊಂಡು ನಂತರ ಜಾ,ದಳ ಸೇರ್ಪಡೆಯಾಗಿ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಸ್ಪರ್ಧಿಸಿ ನಂತರ ಜಿಲ್ಲಾ ಜಾ,ದಳದ ಜಿಲ್ಲಾ ಅಧ್ಯಕ್ಷರಾಗಿದ್ದು ಈಗ ಕಾಂಗ್ರೆಸ್ ನವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶಾಸಕಿ ನಯನ ಮೋಟಮ್ಮ ಸುಪ್ರೀಂ ಹೀಗಾಗಿ ನಯನ ತೀರ್ಮಾನ ಮಾಡಿದ್ದು ಬಹುತೇಕ ಅಲ್ಲ ಖಚಿತವಾಗಿ ಕಾಂಗ್ರೆಸ್ ಸೇರುವುದು ಗ್ಯಾರಂಟಿ.

ಈ ಬಗ್ಗೆ ನ್ಯೂಸ್ ಕಿಂಗ್ ಅಜಿತ್ ರಂಜನ್ ಕುಮಾರ್ ರವರನ್ನು ಮೊಬೈಲ್ ಮೂಲಕ ಸಂಪರ್ಕ ಮಾಡಿದಾಗ ಸದ್ಯದಲ್ಲಿ ಪತ್ರಿಕಾ ಗೋಷ್ಠಿ ಕರೆದು ತಿಳಿಸುವುದಾಗಿ ಹೇಳಿದ್ದಲ್ಲದೆ ಇಲ್ಲಿದ್ದು ಏನು ಮಾಡುವುದು ಎಂದು ಹೇಳಿದ್ದಾರೆ.

ಜಾ,ದಳದ ಪ್ರಮುಖ ವಿಕೆಟ್ ಪತನವಾಗುವುದು ಖಚಿತ. ಅಜಿತ್ ರಂಜನ್ ಕುಮಾರ್ ಕಾಂಗ್ರೆಸ್ ಸೇರುವುದು ಫಿಕ್ಸ್ ಆಗಿದೆ.

Janata Dal Secular district president Ajit Ranjan joins Congress?

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...