Home Latest News Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?
Latest NewsHomePolitical News

Ajit Ranjan joins Congress:ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ತೆಕ್ಕೆಗೆ ?

Share
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
ಜಾತ್ಯತೀತ ಜನತಾದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಕಾಂಗ್ರೆಸ್ ಗೆ
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಜಾತ್ಯತೀತ ಜನತಾದಳ ಅಧ್ಯಕ್ಷ ಅಜಿತ್ ರಂಜನ್ ಕುಮಾರ್ ಬಹುತೇಕ ಕಾಂಗ್ರೆಸ್ ಸೇರುವುದು ಖಚಿತ.

ಮೂಡಿಗೆರೆ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಪತ್ನಿ ಗೀತಾರನ್ನು ಕೂರಿಸಲು ಕಾಂಗ್ರೆಸ್ ನವರ ಬೆಂಬಲ ಪಡೆದು ಐದು ತಿಂಗಳ ಹಿಂದೆ ತೀರ್ಮಾನವಾಗಿತ್ತು.

ಗೀತಾ ರಾಜೀನಾಮೆ ನೀಡಿ ಇಂದು ಪಟ್ಟಣ ಪಂಚಾಯತಿ ಸದಸ್ಯರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸುವುದಕ್ಕಿಂತ ಎಲ್ಲರಿಗೂ ತಿಳಿದ ವಿಚಾರ.

ರಂಜನ್ ಬಿಜೆಪಿಯಲ್ಲಿ ಗುರ್ತಿಸಿಕೊಂಡು ನಂತರ ಜಾ,ದಳ ಸೇರ್ಪಡೆಯಾಗಿ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಸ್ಪರ್ಧಿಸಿ ನಂತರ ಜಿಲ್ಲಾ ಜಾ,ದಳದ ಜಿಲ್ಲಾ ಅಧ್ಯಕ್ಷರಾಗಿದ್ದು ಈಗ ಕಾಂಗ್ರೆಸ್ ನವರು ರೆಡ್ ಕಾರ್ಪೆಟ್ ಹಾಕಿ ಸ್ವಾಗತ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.

ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶಾಸಕಿ ನಯನ ಮೋಟಮ್ಮ ಸುಪ್ರೀಂ ಹೀಗಾಗಿ ನಯನ ತೀರ್ಮಾನ ಮಾಡಿದ್ದು ಬಹುತೇಕ ಅಲ್ಲ ಖಚಿತವಾಗಿ ಕಾಂಗ್ರೆಸ್ ಸೇರುವುದು ಗ್ಯಾರಂಟಿ.

ಈ ಬಗ್ಗೆ ನ್ಯೂಸ್ ಕಿಂಗ್ ಅಜಿತ್ ರಂಜನ್ ಕುಮಾರ್ ರವರನ್ನು ಮೊಬೈಲ್ ಮೂಲಕ ಸಂಪರ್ಕ ಮಾಡಿದಾಗ ಸದ್ಯದಲ್ಲಿ ಪತ್ರಿಕಾ ಗೋಷ್ಠಿ ಕರೆದು ತಿಳಿಸುವುದಾಗಿ ಹೇಳಿದ್ದಲ್ಲದೆ ಇಲ್ಲಿದ್ದು ಏನು ಮಾಡುವುದು ಎಂದು ಹೇಳಿದ್ದಾರೆ.

ಜಾ,ದಳದ ಪ್ರಮುಖ ವಿಕೆಟ್ ಪತನವಾಗುವುದು ಖಚಿತ. ಅಜಿತ್ ರಂಜನ್ ಕುಮಾರ್ ಕಾಂಗ್ರೆಸ್ ಸೇರುವುದು ಫಿಕ್ಸ್ ಆಗಿದೆ.

Janata Dal Secular district president Ajit Ranjan joins Congress?

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...