Home namma chikmagalur chikamagalur ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಿ ಮೂಕ ವಿಸ್ಮಿತರಾದ ಜಾರಕಿಹೊಳಿ
chikamagalurHomeLatest Newsnamma chikmagalur

ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಿ ಮೂಕ ವಿಸ್ಮಿತರಾದ ಜಾರಕಿಹೊಳಿ

Share
Share

ಮೂಡಿಗೆರೆ : ದಂಬದಹಳ್ಳಿ – ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿಗೆ ಈಗಾಗಲೇ ೪೧೩ ಕೋಟಿ ರೂ ಬಿಡುಗಡೆಯಾಗಿದ್ದು, ಪ್ರಗತಿಯ ಬಗ್ಗೆ ಮಾಹಿತಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡುವಂತೆ ಲೋಕೋಪಯೋಗಿ ಇಲಾಖೆ ಸಚಿವ ಜಾರಕಿಹೊಳಿ ಸೂಚಿಸಿದರು

ಮೂಡಿಗೆರೆ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಾಗುವ ರಸ್ತೆಯಲ್ಲಿರುವ ಕೊಟ್ಟಿಗೆಹಾರದಲ್ಲಿರುವ ತೇಜಸ್ವಿ ಪ್ರತಿಷ್ಠಾನಕ್ಕೆ ಇಂದು ಭೇಟಿ ನೀಡಿ ಪೂಚಂತೇ ಅವರು ಬಳಸುತ್ತಿದ್ದ ಸ್ಕೂಟರ್, ಕ್ಯಾಮರ, ಕುರ್ಚಿ, ಕಂಪ್ಯೂಟರ್ ಗಳು ಸೇರಿದಂತೆ ಹಲವು ಪರಿಕರಗಳನ್ನು ಮತ್ತು ಅಂದಿನ ಕಾಲದಲ್ಲಿ ಬಳಸುತ್ತಿದ್ದ ಅಡುಗೆ ಕೃಷಿ ಉಪಕರಣಗಳನ್ನು ವೀಕ್ಷಿಸಿ ಮೂಕವಿಸ್ಮಿತರಾದರು. ಅಲ್ಲೆ ಅಧಿಕಾರಿಗಳೊಂದಿಗೆ ನೀಲನಕ್ಷೆ ಬಗ್ಗೆ ಚರ್ಚಿಸಿದರು.

ಈಗಾಗಲೇ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪ್ರತಿ ಕ್ಷೇತ್ರಗಳ ಶಾಸಕರುಗಳಿಗೆ ಒಂದು ಕ್ಷೇತ್ರಕ್ಕೆ ೨೫ ಕೋಟಿ ಯಂತೆ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆಗೊಳಿಸಿದ್ದು ಕೆಲಸಗಳು ಪ್ರಗತಿಯಲ್ಲಿವೆ ಎಂದರು.

ಬಹುಜನರ ಬೇಡಿಕೆಯಾದ ಶಿಶಿಲಾ- ಬೈರಾಪುರ ರಸ್ತೆಯ ಬಗ್ಗೆ ಬೆಳೆಗಾರರು ಸಚಿವರ ಗಮನಕ್ಕೆ ತಂದು ಈಗಾಗಲೇ ಪ್ರಸ್ತಾವನೆಗೆ ಸರ್ಕಾರದ ಬಳಿ ಹೋಗಿದೆ ಎಂದಾಗ ಸಚಿವರು ಅದನ್ನು ಪರಿಶೀಲಿಸುವುದಾಗಿ ತಿಳಿಸಿದರು.

ಕೆಜಿಎಫ್ ಮಾಜಿ ಅಧ್ಯಕ್ಷ ಬಿ.ಎಸ್ .ಜೈರಾಂ ಮಾನವ ಮತ್ತು ಆನೆಗಳ ಸಂಘರ್ಷದ ಬಗ್ಗೆ ಶಾಶ್ವತ ಪರಿಹಾರದ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕೆಂದಾಗ ಸಚಿವರು ಅರಣ್ಯ ಮಂತ್ರಿಗಳನ್ನು ಭೇಟಿ ಮಾಡಿ ದಿನಾಂಕ ನಿಗದಿಪಡಿಸಿ ಬೆಳೆಗಾರರು, ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ಕರೆದು ಚರ್ಚಿಸುವುದಾಗಿ ತಿಳಿಸಿದರು.

ಅನಂತರ ಸಚಿವರು ಮೂಡಿಗೆರೆ, ಚಾರ್ಮಾಡಿಘಾಟ್-ಉಜಿರೆವರೆಗಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಅಶ್ವಿನಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್, ಕಿರಿಯ ಅಭಿಯಂತರ ಚನ್ನಕೇಶವ ಬಿ.ಟಿ. ಮಾಜಿ ಸಚಿವರುಗಳಾದ ಮೋಟಮ್ಮ, ಬಿ.ಬಿ.ನಿಂಗಯ್ಯ, ಮುಖಂಡರಾದ ಜಿ.ಹೆಚ್.ಹಾಲಪ್ಪಗೌಡ, ಸುರೇಂದ್ರ ಎಂ.ಎಸ್.ಅನಂತ್, ಸುಬ್ರಹ್ಮಣ್ಯ ಟಿ.ಎಂ., ಸಂತೋಷ್ ಮುಗ್ರಹಳ್ಲಿ, ಬೆಟ್ಟಗೆರೆ ಸಂತೋಷ್, ಉಪಸ್ಥಿತರಿದ್ದರು.

Jarkiholi was left speechless after visiting the Tejaswi Foundation.

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....