Home namma chikmagalur ರಸಗೊಬ್ಬರ ಸರಬರಾಜು ಮಾಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಜೆಡಿಎಸ್ ಮನವಿ
namma chikmagalurchikamagalurHomeLatest News

ರಸಗೊಬ್ಬರ ಸರಬರಾಜು ಮಾಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಜೆಡಿಎಸ್ ಮನವಿ

Share
Share

ಚಿಕ್ಕಮಗಳೂರು:  ರೈತರಿಗೆ ಅಗತ್ಯವಾಗಿ ಬೇಕಾಗಿರುವ ಯೂರಿಯಾ-ಡಿಎಪಿ ರಸಗೊಬ್ಬರವನ್ನು ಅತೀ ಶೀಘ್ರ ವಿತರಣೆ ಮಾಡುವಂತೆ ಆಗ್ರಹಿಸಿ ಇಂದು ಜೆಡಿಎಸ್ ವತಿಯಿಂದ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದ್ದು, ಈ ನಿಟ್ಟಿನಲ್ಲಿ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ರೈತರಿಗೆ ಅಗತ್ಯ ಕೃಷಿ ಪರಿಕರಗಳನ್ನು ಕೂಡಲೇ ಸರಬರಾಜು ಮಾಡುವಂತೆ ಕೃಷಿ ಸಚಿವರನ್ನು ಒತ್ತಾಯಿಸಿದರು.

ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಜೆಡಿಎಸ್ ಹೋರಾಟ ರೂಪಿಸಲಿದೆ. ಕಾಡು ಪ್ರಾಣಿಗಳು, ಮಾನವ ಸಂಘರ್ಷ ಒಂದೆಡೆಯಾದರೆ, ಕಾಡಾನೆಗಳ ದಾಳಿಗೆ ತುತ್ತಾಗುತ್ತಿರುವ ಕಾರ್ಮಿಕರ ರಕ್ಷಣೆ ಮಾಡಬೇಕು, ಜೊತೆಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ರೈತರನ್ನು ಒಕ್ಕಲೆಬ್ಬಿಸುವ ಸಲುವಾಗಿ ಮದಗದ ಕೆರೆ ಬಳಿ ಚಿರತೆ ತಂದುಬಿಟ್ಟು ಅರಣ್ಯ ಇಲಾಖೆ ಆ ಭಾಗದ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಮಲೆನಾಡು ಭಾಗದಲ್ಲಿ ಗಿಡ್ಡ ತಳಿ ಹಸುಗಳನ್ನು ಸಾಕಾಣೆ ಮಾಡಿದ್ದು, ಅರಣ್ಯ ಸಚಿವರು ಅರಣ್ಯದ ಒಳಭಾಗದಲ್ಲಿ ದನಗಳನ್ನು ಮೇಯಿಸಲು ಬಿಡಬಾರದು ಎಂದು ಆದೇಶ ಮಾಡಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ಈ ಆದೇಶವನ್ನು ವಾಪಾಸ್ ಪಡೆಯುವಂತೆ ಹೇಳಿದರು.

ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಸರ್ಕಾರದ ವಿರುದ್ಧ ಜೆಡಿಎಸ್ ಸಧ್ಯದಲ್ಲೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ಲಕ್ಷ್ಮಣ್‌ಗೌಡ, ಮುಖಂಡರಾದ ಜಿ.ಹೆಚ್ ಚಂದ್ರಪ್ಪ, ಸಿ.ಕೆ. ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

JDS appeals to the district administration demanding supply of fertilizer

Share

Leave a comment

Leave a Reply

Your email address will not be published. Required fields are marked *

Don't Miss

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ ವ್ಯಾಪ್ತಿಯ ಅರೆನೂರು ಗ್ರಾಮದಲ್ಲಿ ನಡೆದಿದ್ದು ವಿಷಯ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ. Son...

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ ಅಹಿತಕರ ಘಟನೆ ನಡೆಯುವ ಸಂಭವವಿರುವುದರಿಂದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯವರೆಗೆ ಜುಲೈ ೨೮ ರಿಂದ...

Related Articles

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦...

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ...

ಆ.7-8 ಕ್ಕೆ ಸಿಪಿಐ ಸಮಾವೇಶ-ಬಹಿರಂಗ ಅಧಿವೇಶನ

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ ಪಾರ್ಟಿ ಸ್ಥಾಪನೆಯಾಗಿ ೧೦೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆ.೭ ಮತ್ತು ೮...

ಬೀದಿಗಿಳಿಯದ ಕೆಎಸ್‌ಆರ್‌ಟಿಸಿ ಬಸ್‌ಗಳು-ಜಿಲ್ಲೆಯಾದ್ಯಂತ ಪರದಾಡಿದ ಪ್ರಯಾಣಿಕರು

ಚಿಕ್ಕಮಗಳೂರು: ವೇತನ ಪರಿಷ್ಕರಣೆ, ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು...