Home namma chikmagalur ಜೆಡಿಎಸ್ ಪಕ್ಷದಿಂದ ಧರ್ಮಸ್ಥಳಕ್ಕೆ ಸತ್ಯಯಾತ್ರೆ
namma chikmagalurchikamagalurHomeLatest News

ಜೆಡಿಎಸ್ ಪಕ್ಷದಿಂದ ಧರ್ಮಸ್ಥಳಕ್ಕೆ ಸತ್ಯಯಾತ್ರೆ

Share
Share

ಚಿಕ್ಕಮಗಳೂರು: ಜೆಡಿಎಸ್ ಪಕ್ಷದಿಂದ ಧರ್ಮಸ್ಥಳಕ್ಕೆ ನೂರಾರು ಕಾರ್ಯಕರ್ತರು ಭಾನುವಾರ ನಗರದಿಂದ ಸತ್ಯಯಾತ್ರೆ ಆರಂಭಿಸಿದರು.

ಕಡೂರು, ತರೀಕರೆ ಹಾಗೂ ಚಿಕ್ಕಮಗಳೂರು ತಾಲೂಕಿನಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಕೇಸರಿ ಶಲ್ಯ ಧರಿಸಿ ನಗದ ಜೆಡಿಎಸ್ ಕಚೇರಿ ಮುಂದೆ ಸಮಾವೇಶಗೊಂಡು ಅಲ್ಲಿಂದ ಯಾತ್ರೆ ಆರಂಭಿಸಿದರು.

ಯಾತ್ರೆಗೂ ಮುನ್ನ ಜೆಡಿಎಸ್ ಮುಖಂಡ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ, ನಮ್ಮೆಲ್ಲರ ಆರಾಧ್ಯ ದೈವ ಶ್ರೀಮಂಜುನಾಥ, ಶ್ರೀಅಣ್ಣಪ್ಪಸ್ವಾಮಿ ಹಾಗೂ ಅಲ್ಲಿನ ಖಾವಂದರ ಬಗ್ಗೆ ಅಪಾರ ನಂಬಿಕೆ ಇದೆ. ಖಾವಂದರು ಸಮಾಜ ಸೇವೆಯಲ್ಲಿ ತಮ್ಮನ್ನುತಾವು ತೊಡಗಿಸಿಕೊಂಡು ಸರಕಾರ ಮಾಡದ ಕೆಲಸವನ್ನು ಮಾಡುತ್ತಿದ್ದಾರೆ.

ಅವರನ್ನು ದೈವ ಸ್ವರೂಪದಲ್ಲಿ ನಾವು ನೋಡುತ್ತಿದ್ದೇವೆ. ಇಂತಹವರಿಗೆ , ಧರ್ಮಸ್ಥಳಕ್ಕೆ ಅಪಚಾರ ನಡೆಯುತ್ತಿರುವುದನ್ನುನಾವು ಸಹಿಸುವುದಿಲ್ಲ. ಈ ಸಂದರ್ಭ ಆಖವಂದರ ಮತ್ತು ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಅವರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಧರ್ಮಸ್ಥಳಕ್ಕೆ ಯಾತ್ರೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.

ನಗರಸಭೆ ಸದಸ್ಯ ಎ.ಸಿ.ಕುಮಾರೇಗೌಡ ಮಾತನಾಡಿ, ಚಿಕ್ಕಮಗಳೂರಿನಿಂದ ಧರ್ಮಸ್ಥಳಕ್ಕೆ ಧರ್ಮಯಾತ್ರೆ ಹೊರಟಿದ್ದೇವೆ. ಅಲ್ಲಿ ಆಗಿರುವ ವಿಚಾರಗಳಿಗೆ ನ್ಯಾಯ ದೊರೆಯುವ ಸಮಯ ಸನ್ನಿಹಿತವಾಗುತ್ತಿದೆ. ಧರ್ಮಸ್ಥಳಕ್ಕೆ ಚ್ಯುತಿ ಬರುವ ಕೆಲಸ ಆಗಬಾರದು. ಹೀಗಾಗಿ ನೂರಾರು ಮಂದಿ ಇಂದು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದೇವೆ ಎಂದರು.

ನಗರಸಭೆ ಅಧ್ಯಕ್ಷೆ ಶೀಲಾದಿನೇಶ್, ಸದಸ್ಯ ದಿನೇಶ್, ಮುಖಂಡರಾದ ನಿತೇಶ್ ಬೋಜೇಗೌಡ, ಸೋನಾಲ್‌ಧರ್ಮೇಗೌಡ, , ಸಿ.ಕೆ ಮೂರ್ತಿ, ಆನಂದನಾಯ್ಕ, ಶಿವಾನಂದ , ಚೇತನ್, ಮಂಜು ಮತ್ತಿತರರಿದ್ದರು.

JDS party’s Satya Yatra to Dharmasthala

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...