Home ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ
HomeKadurLatest Newsnamma chikmagalur

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ

Share
Share

ಕಡೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವವನ್ನು ಪ್ರಶ್ನಿಸುವವವರಿಗೆ ಜನರೇ ಮುಂದಿನ ದಿನಗಳಲ್ಲಿ ಉತ್ತರ ನೀಡಲಿದ್ದು, ಜನರ ಆಶೀರ್ವಾದ ಮತ್ತು ಸ್ವಾಭಿಮಾನಿ ಕಾರ್ಯಕರ್ತರ ಶ್ರಮದಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಕಡೂರು ಎಪಿಎಂಸಿ ಆವರಣದಲ್ಲಿ ಭಾನುವಾರ ಜೆಡಿಎಸ್ ಪಕ್ಷವು ಆಯೋಜಿಸಿದ್ದ ‘ಜನರೊಂದಿಗೆ ಜನತಾದಳ, ಕಾರ್ಯಕರ್ತರ ಸಭೆ ಮತ್ತು ಪಕ್ಷದ ಸದಸ್ಯತ್ವ ನೋಂದಣಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಚೇತನ್ ಕೆಂಪರಾಜ್ ಅವರು ಜಿಲ್ಲೆಯಲ್ಲಿ ವೈ.ಎಸ್.ವಿ.ದತ್ತ ಮತ್ತು ಎಸ್.ಎಲ್. ಭೋಜೇಗೌಡರ ಮಾರ್ಗದರ್ಶನದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲಿ ಎಂದರು.

‘ಕಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕರ ಸೂಚನೆಯಂತೆ ನಮ್ಮ ಪಕ್ಷದ ಕಾರ್ಯಕರ್ತರಿಗೆ ಮತ್ತು ಚೇತನ್ ಅವರಿಗೆ ಪೊಲೀಸ್ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಚೇತನ್ ಹೇಳಿದ್ದರು. ಪೊಲೀಸರು ಮತ್ತು ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಎಚ್ಚರಿಸಿದರು.

ಜೆಡಿಎಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷವನ್ನು ಬೆಳಸಿ ಸಂಘಟನೆ ಮಾಡಿ ಎಂದರು. ಜೆಡಿಎಸ್ ಕೋರ್ ಸಮಿತಿ ಅಧ್ಯಕ್ಷ ಕೆ.ಸಿ.ಕೃಷ್ಣಾರೆಡ್ಡಿ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಸುಳ್ಳಿನ ಗೋಪುರವನ್ನು ಕಟ್ಟಿದೆ. ಎಚ್.ಡಿ.ಕುಮಾರಸ್ವಾಮಿ ಅವರು 2028ರಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದರು.

ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ ದತ್ತ ಮಾತನಾಡಿ, ಚೇತನ್ ಕೆಂಪರಾಜ್ ಆರೋಪಿಸಿದಂತೆ ಶಾಸಕರಿಂದ ದ್ವೇಷದ ರಾಜಕಾರಣ, ಕಿರುಕುಳ ನಡೆಯುತ್ತದೆ ಎಂಬುದು ಸತ್ಯ. ನನಗೂ 20 ವರ್ಷಗಳ ಹಿಂದೆಯೇ ಅನುಭವ ಆಗಿತ್ತು ಎಂದರು.

ಜೆಡಿಎಸ್ ಯುವ ಮುಖಂಡ ಚೇತನ್ ಕೆಂಪರಾಜ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ದ್ವೇಷ ರಾಜಕಾರಣ ಹೆಚ್ಚಾಗಿದೆ. ನಮ್ಮ ತಂಟೆಗೆ ಬಂದರೆ ಯಾರನ್ನೂ ಬಿಡುವುದಿಲ್ಲ ಎಂದರು.

ಶ್ರವಣಬೆಳಗೊಳದ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಜೆಡಿಎಸ್ ಪಕ್ಷವು ಬೆಳೆದು ಬಂದ ಹಾದಿ ಹಾಗೂ ಸಂಘಟನೆಗಾಗಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಅವರ ಹೋರಾಟದ ಬಗ್ಗೆ ವಿವರಿಸಿದರು.

ಸಭೆಯಲ್ಲಿ ಹಾಸನ ಶಾಸಕ ಸ್ವರೂಪ್ ಪ್ರಕಾಶ್, ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ, ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜುನಾಥ್, ಜಿಲ್ಲೆಯ ರಂಜನ್ ಅಜಿತ್‌ಕುಮಾರ್, ಬಿ.ಟಿ.ಗಂಗಾಧರನಾಯ್ಕ, ಬಿದರೆ ಜಗ ದೀಶ್, ಕೋಡಿಹಳ್ಳಿ ಮಹೇಶ್, ಹಳೆಹಟ್ಟಿ ಆನಂದನಾಯ್ಕ, ಪ್ರೇಮಕುಮಾರ್, ಎರೆಹಳ್ಳಿ ರಘು ಇದ್ದರು.

JDS will come to power in the state with the blessings of the people

Share

Leave a comment

Leave a Reply

Your email address will not be published. Required fields are marked *

Don't Miss

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್.ಆರ್.ಪುರ ಪ್ರವಾಸಿ...

ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು

ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯ ಕುನ್ನಳ್ಳಿ ಗ್ರಾಮದ ವಿನೋದ್ (28) ಅವರು ಕೂಲಿ...

Related Articles

ಜಾತ್ಯತೀತ ಜನತಾದಳ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ

ಚಿಕ್ಕಮಗಳೂರು : ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ...

ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು: ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ...

ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ

ಅಜ್ಜಂಪುರ: ರೈತರೊಬ್ಬರ ಎತ್ತಿನ ಗಾಡಿ ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ...

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

ಶೃಂಗೇರಿ: ತಾಲೂಕಿನ ಕಿಗ್ಗಾ ಸಮೀಪದ ಯಡದಳ್ಳಿ ಗ್ರಾಮದ ಕೊಚ್ಚಾರಿನಲ್ಲಿರುವ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ...