Home namma chikmagalur chikamagalur ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ
chikamagalurCrime NewsHomeLatest Newsnamma chikmagalur

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

Share
Share

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ ಕರಾರು ಒಪ್ಪಂದದಲ್ಲಿ ನಕಲಿ ಛಾಪಾ ಕಾಗದಗಳನ್ನು ಬಳಸಿ ಸರ್ಕಾರಕ್ಕೆ ವಂಚಿಸಿರುವ ಎರಡು ಪ್ರತ್ಯೇಕ ಹಗರಣಗಳು ಶೃಂಗೇರಿ ಮತ್ತು ಕೊಪ್ಪ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರು ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಗುತ್ತಿಗೆದಾರರು ಕೊರೆದಿರುವ ಕೊಳವೆ ಬಾವಿಗಳಿಗೆ ನಕಲಿ ಛಾಪಾ ಕಾಗದಗಳನ್ನು ನೀಡಿ ಕರಾರು ಒಪ್ಪಂದ ಮಾಡಿಕೊಂಡಿರುವ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿದ್ದರು.

ಇದರ ಬೆನ್ನಲ್ಲೇ ಎಚ್ಚೆತ್ತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಚಿಕ್ಕಮಗಳೂರು ಕಚೇರಿಯಲ್ಲಿ ಕರಾರು ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಶೃಂಗೇರಿ ಮತ್ತು ಕೊಪ್ಪ ತಾಲೂಕುಗಳೆರಡರಲ್ಲೂ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ದೃಢಪಟ್ಟಿದೆ. ಅಲ್ಲದೆ ಕೆಡಿಪಿ ಪೂರ್ವಭಾವಿ ಸಭೆಯಲ್ಲೂ ಈ ನಕಲಿ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಸೂಚನೆ ನೀಡಲಾಗಿತ್ತು.

ಶೃಂಗೇರಿ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ: ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಬೋರ್‌ವೆಲ್ ಕಾಮಗಾರಿಗಳ ಒಪ್ಪಂದಕ್ಕಾಗಿ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ರೌದ್ ಕುಂಡ್ ನಿವಾಸಿಯಾದ ಗುತ್ತಿಗೆದಾರ ಯು. ನಾಗರಾಜ್ ಎಂಬುವರು ಇಲಾಖೆಗೆ ಸಲ್ಲಿಸಿದ್ದ ಕರಾರು ಪತ್ರದಲ್ಲಿ ಒಂದು ಛಾಪಾ ಕಾಗದವು ಪುನರಾವರ್ತನೆಯಾಗಿರುವುದು ಪತ್ತೆಯಾಗಿದೆ.

ಎನ್.ಆ‌ರ್. ಪುರ ಪೇಟೆಯ ‘ಆಯಿರಾ ಡಿಜಿಟಲ್’ (AAIRA DIGITAL) ಸಂಸ್ಥೆಯೊಂದಿಗೆ ಸೇರಿ ನಕಲಿ ಛಾಪಾ ಕಾಗದವನ್ನು ಸುಳ್ಳು ಸೃಷ್ಟಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿರುವ ಹಿನ್ನೆಲೆಯಲ್ಲಿ, ಶೃಂಗೇರಿ ಗ್ರಾಮೀಣ ಕುಡಿಯುವ ನೀರು ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಶಾಲತ ಬಿ.ಎಸ್. ಅವರು ನೀಡಿದ ದೂರಿನ ಮೇರೆಗೆ ಗುತ್ತಿಗೆದಾರ ಯು. ನಾಗರಾಜ್ ಮತ್ತು ಆಯಿರಾ ಡಿಜಿಟಲ್ ಸಂಸ್ಥೆಯ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಹೂಡಲಾಗಿದೆ.

ಕೊಪ್ಪ ಠಾಣೆಯಲ್ಲಿ ಮೂವರ ವಿರುದ್ಧ ಮತ್ತೊಂದು ಕೇಸ್: ಇದೇ ಮಾದರಿಯಲ್ಲಿ ಕೊಪ್ಪ ತಾಲೂಕಿನ ಉಪವಿಭಾಗದ ವ್ಯಾಪ್ತಿಯಲ್ಲೂ ಬೋರ್‌ವೆಲ್ ಕಾಮಗಾರಿಗಳ ಒಪ್ಪಂದಕ್ಕಾಗಿ ನಕಲಿ ಛಾಪಾ ಕಾಗದಗಳನ್ನು ಬಳಸಿ ಸರ್ಕಾರಕ್ಕೆ ವಂಚಿಸಿರುವುದು ಬೆಳಕಿಗೆ ಬಂದಿದೆ.

ಎನ್.ಆರ್. ಪುರದ ಎಂ/ಎಸ್ ಎಸ್.ಕೆ.ಪಿ ಕ ‌ಕ್ಷನ್ಸ್ ಅಂಡ್ ಬೋರ್‌ವೆಲ್ಸ್‌ನ ದಸ್ತಗೀ‌ರ್, ಕೊಪ್ಪಳ ಜಿಲ್ಲೆ ಕುಷ್ಟಗಿಯ ದೇವೇಂದ್ರ ಪಾಟೀಲ್ ಮತ್ತು ರಾಯಚೂರು ಜಿಲ್ಲೆ ಸಿಂಧನೂರಿನ ನಾಗರಾಜು ಎಂಬ ಮೂವರು ಗುತ್ತಿಗೆದಾರರು ಎನ್.ಆರ್. ಪುರದ ‘ಆಯಿರಾ ಡಿಜಿಟಲ್’ ಸಂಸ್ಥೆಯಲ್ಲಿ ನಕಲಿ ಒಪ್ಪಂದ ಪತ್ರಗಳನ್ನು ಹಾಗೂ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಇಲಾಖೆಗೆ ಸಲ್ಲಿಸಿದ್ದರು.

ಚಿಕ್ಕಮಗಳೂರು ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ಗಳ ಸೂಚನೆಯ ಮೇರೆಗೆ ಕೊಪ್ಪ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಪ್ರಭಾರ) ಸುನೀಲ್ ಕುಮಾರ್ ಅವರು ಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಗುತ್ತಿಗೆದಾರರು ಹಾಗೂ ನಕಲಿ ದಾಖಲೆ ಸೃಷ್ಟಿಸಿಕೊಟ್ಟ ಸಂಸ್ಥೆಯ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗಿದೆ

JJM defrauds government by using fake printing paper

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ...