Home Latest News Jumbo Circus:ನಗರದಲ್ಲಿ ಜಂಬೂ ಸರ್ಕಸ್-ಸಾಹಸ ಚಟುವಟಿಕೆಗಳ ಪ್ರದರ್ಶನ
Latest NewsHomenamma chikmagalur

Jumbo Circus:ನಗರದಲ್ಲಿ ಜಂಬೂ ಸರ್ಕಸ್-ಸಾಹಸ ಚಟುವಟಿಕೆಗಳ ಪ್ರದರ್ಶನ

Share
ಸರ್ಕಸ್ ಫ್ಯಾನ್ಸ್ ಫೇರ್‌ವೆಲ್ ಅಸೋಷಿಯೇಷನ್ ಅಧ್ಯಕ್ಷ ನಾಗೇಶ್ ಸುದ್ದಿಗೋಷ್ಠಿ
ಸರ್ಕಸ್ ಫ್ಯಾನ್ಸ್ ಫೇರ್‌ವೆಲ್ ಅಸೋಷಿಯೇಷನ್ ಅಧ್ಯಕ್ಷ ನಾಗೇಶ್ ಸುದ್ದಿಗೋಷ್ಠಿ
Share

ಚಿಕ್ಕಮಗಳೂರು:  ಏಷ್ಯ ಖಂಡದಲ್ಲೇ ಅತಿ ದೊಡ್ಡ ಸರ್ಕಸ್ ತಂಡವಾದ ಜಂಬೂ ಸರ್ಕಸ್‌ರವರಿಂದ ನಗರದ ಬೈಪಾಸ್ ರಸ್ತೆ, ಕಲ್ಯಾಣ ನಗರದಲ್ಲಿ ಅತ್ಯದ್ಭುತ ಸರ್ಕಸ್ ಪ್ರದರ್ಶನಗೊಳ್ಳುತ್ತಿದ್ದು ಕಲಾಭಿಮಾನಿಗಳೂ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೀಕ್ಷಿಸಿ ಪ್ರೋತ್ಸಾಹಿಸಬೇಕೆಂದು ಸರ್ಕಸ್ ಫ್ಯಾನ್ಸ್ ಫೇರ್‌ವೆಲ್ ಅಸೋಷಿಯೇಷನ್ ಅಧ್ಯಕ್ಷ ನಾಗೇಶ್ ಹೇಳಿದರು

ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಜಂಬೂ ಸರ್ಕಸ್ ತಂಡವೂ ೧೯೭೭ರ ಅಕ್ಟೋಬರ್ ೨ರಂದು ಎಂ.ವಿ ಶಂಕರನ್ ಅವರ ಮಾಲೀಕತ್ವದಲ್ಲಿ ಬಿಹಾರಿನ ದಾನಪುರದಲ್ಲಿ ಪ್ರಾರಂಭವಾಗಿದ್ದು. ಪ್ರಸ್ತುತ ಅವರ ಮಕ್ಕಳಾದ ಅಜಯ್‌ಶಂಕರ್ ಹಾಗೂ ಅಶೋಕ್‌ಶಂಕರ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಈ ತಂಡದಲ್ಲಿ ನೂರು ಜನ ಕಲಾವಿದರು, ಮಹಿಳೆಯರು, ಪುರು?ರು, ಕಚೇರಿ ನೌಕರರು ಇತರ ಸಹಾಯಕ ನೌಕರರು ಸೇರಿದಂತೆ ಒಟ್ಟು ೩೦೦ಕ್ಕೂ ಹೆಚ್ಚು ಜನ ಸರ್ಕಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸರ್ಕಸ್ಸಿನಲ್ಲಿ ಆಫ್ರಿಕಾ, ರಷ್ಯಾದ ವಿದೇಶಿ ಕಲಾವಿದರು ಒಳಗೊಂಡಂತೆ ದೇಶದ ವಿವಿದ ರಾಜ್ಯಗಳ ಕಲಾವಿದರು ಮೈ ಜುಮ್ ಎನಿಸುವಂತಹ ಸಾಹಸಗಳು, ಅಮೆರಿಕನ್ ಸ್ಪೀಡ್ ವೀಲ್, ಡಬಲ್ ರಿಂಗ್ ಅಕ್ರೋಬ್ಯಾಟ್, ಪೀಕಾಕ್ ಡ್ಯಾನ್ಸ್, ಗ್ಲೋಬಲ್ ಡೆತ್ ಇನ್ ಡಾರ್ಕ್‌ನೆಸ್ ಹಾಗೂ ರೊಮ್ಯಾಂಟಿಕ್ ಸ್ಯಾರಿ ಡ್ಯಾನ್ ಸೇರಿದಂತೆ ವಿವಿದ ಸಾಹಸಮಯ ಚಟುಚಟಿಕೆಗಳನ್ನು ಪ್ರದರ್ಶಿಸುತ್ತಾರೆ,

ಬಹು ಭಾಷಾ ಚಿತ್ರಗಳಲ್ಲಿ ಈ ಸರ್ಕಸ್‌ನ ಬಳಸಿ ಹಲವಾರು ಚಿತ್ರಗಳನ್ನು ಚಿತ್ರಿಸಲಾಗಿದೆ. ನೆಹರು, ಇಂದಿರಾಗಾಂಧಿ, ವಿದೇಶಿ ಗಣ್ಯರು, ಅಮಿತಾ ಬಚ್ಚನ್, ಧಮೇಂದ್ರ ರಾಜೇಶ್ ಖನ್ನ, ಹೇಮಮಾಲಿನಿ ಸೇರಿದಂತೆ ಇನ್ನೂ ಅನೇಕ ಚಲನಚಿತ್ರ ನಟ-ನಟಿಯರು ಸರ್ಕಸ್ ವೀಕ್ಷಿಸಿ ಅಚ್ಚರಿ ವ್ಯಕ್ತಪಡಿಸಿ ಹೆಮ್ಮೆಯಿಂದ ಬೆನ್ನು ತಟ್ಟಿದ್ದಾರೆ ಎಂದರು.

ಸರ್ಕಸ್‌ನ ಕಲಾವಿದರು ವ?ವಿಡಿ ಭಾರತದ ಉದ್ದಗಲಕ್ಕು ಸಂಚರಿಸಿ ಜನರನ್ನು ರಂಜಿಸಿ ಮೆಚ್ಚಿಸಿದ್ದಾರೆ. ಇದೀಗ ಚಿಕ್ಕಮಗಳೂರಿನಲ್ಲಿ ಪ್ರಾರಂಭಿಸಿದ್ದು ಮಧ್ಯಾಹ್ನ ೧ ಗಂಟೆ, ಸಂಜೆ ೪ ಗಂಟೆ ಹಾಗೂ ರಾತ್ರಿ ೭ ಗಂಟೆಗೆ ಪ್ರತಿ ದಿನ ೩ ಆಟಗಳು ಪ್ರದರ್ಶಿಸಲಾಗುತ್ತಿದೆ ಎಂದು ತಿಳಿಸಿದರು.

ಪದರ್ಶನಕ್ಕೆ ಮುಂಗಡ ಬುಕಿಂಗ್ ಸೌಲಭ್ಯವಿದ್ದು  ದೂ.ಸಂ ೬೨೩೮೩೪೭೦೦೬, ೮೨೮೧೬೦೬೮೯೨ ಅಥವಾ ೮೮೦೯೦೦೦೧೭೫.ಗೆ ಕರೆ ಮಾಡಿ ಬುಕಿಂಗ್ ಮಾಡಿಕೊಳ್ಳಬಹುದು ಎಂದರು. ಈ ಸಂದರ್ಭದಲ್ಲಿ ರಾಜೀವ್, ವರ್ಗೀಸ್, ಅಂಥೋಣಿ, ಮೂರ್ತಿ ಉಪಸ್ಥಿತರಿದ್ದರು.

Jumbo Circus-Adventure activities show in the city

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...