Home Political News ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಡೂರು ಶಾಸಕ ಕೆಎಸ್ ಆನಂದ್ ಸಂತಾಪ
Political News

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಡೂರು ಶಾಸಕ ಕೆಎಸ್ ಆನಂದ್ ಸಂತಾಪ

Share
Share

ಚಿಕ್ಕಮಗಳೂರು : ಇಡೀ ಪ್ರಪಂಚವೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದಾಗ ಭಾರತದ ಯಾವುದೇ ಬ್ಯಾಂಕ್ ಗಳು ಮುಚ್ಚದಂತೆ ಮಾಡಿದ್ದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಎಂದು ಕಡೂರು ಶಾಸಕ ಕೆ.ಎಸ್ ಆನಂದ್ ಸ್ಮರಿಸಿದ್ದಾರೆ.

ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಅವರು ಸಿಂಗ್ ನಿಧನ ಕಾಂಗ್ರೆಸ್ ಪಕ್ಷಕ್ಕಷ್ಟೆ ಅಲ್ಲ ದೇಶದ ಎಲ್ಲಾ ಜನತೆಗೆ ದುಖಃಕರ ವಿಷಯವಾಗಿದ್ದು ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇಡೀ ಪ್ರಪಂಚದ ಎಷ್ಟೋ ದೇಶಗಳು ಆರ್ಥಿಕ ಏರುಪೇರು ಎದುರಿಸುತ್ತಿದ್ದರೂ ಭಾರತದ ಯಾವುದೇ ಬ್ಯಾಂಕ್ ಮುಳುಗುವಂತಹ ಒಂದೇ ಒಂದು ಘಟನೆ ಅವರ ಆಡಳಿತದಲ್ಲಿ ನಡೆಯಲಿಲ್ಲ ಎಂದರು.

ಆರ್.ಬಿ ಐ ಗೌರ್ನರ್ ಆಗಿ ದೇಶಕ್ಕೆ ಕೊಡುಗೆ ಕೊಟ್ಟ ಕೀರ್ತಿಯೂ ಮನ ಮೋಹನ್ ಸಿಂಗ್ ರಿಗೆ ಸಲ್ಲಬೇಕು ಗಾಂಧೀಜಿಯವರ ಗ್ರಾಮ ಸ್ವರಾಜ್ಯ ದ ಕನಸು ನನಸು ಮಾಡಿದ್ದು ನರೆಗಾ ದಂತ ಕಾರ್ಯಕ್ರಮ ಕೊಡುವ ಮೂಲಕ ಗ್ರಾಮ ಪಂಚಾಯತಿ ಗಳಿಗೆ ನೇರವಾಗಿ ಅನುದಾನ ಮಾಡಿದ್ದು ಸೇರಿದಂತೆ ಆಧಾರ್ ಆರ್ ಟಿ ಐ ನಂತಹ ಉತ್ತಮ ಯೋಜನೆಗಳನ್ನು ದೇಶಕ್ಕೆ ಕೊಟ್ಟಿದ್ದಾರೆ ಎಂದು ಕೆಎಸ್ ಆನಂದ್ ಹೇಳಿದರು.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...