Home namma chikmagalur ಕನಕದಾಸರ ಕೀರ್ತನೆಗಳು ಈಗಲೂ ಅಷ್ಟೇ ಪ್ರಸ್ತುತ
namma chikmagalurchikamagalurHomeLatest News

ಕನಕದಾಸರ ಕೀರ್ತನೆಗಳು ಈಗಲೂ ಅಷ್ಟೇ ಪ್ರಸ್ತುತ

Share
Share

ಚಿಕ್ಕಮಗಳೂರು: ‘500 ವರ್ಷಗಳ ಹಿಂದೆ ಕನಕದಾಸರ ಕೀರ್ತನೆಗಳು ಎಷ್ಟು ಪ್ರಸ್ತುತವಾಗಿದ್ದವೋ ಈಗಲೂ ಅಷ್ಟೇ ಪ್ರಸ್ತುತವಾಗಿವೆ’ ಎಂದು ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

ತಾಲ್ಲೂಕಿನ ಸಾದರಹಳ್ಳಿ ಗ್ರಾಮದಲ್ಲಿ ಕನಕದಾಸರು, ಬಿ.ಆರ್.ಅಂಬೇಡ್ಕರ್ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗಳ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿದ್ದ ಮಹಿಳೆಯನ್ನು ಜಾತಿ ಕಾರಣದಿಂದ ಸಮುದಾಯ ಭವನದ ಒಳಗೆ ಬಿಟ್ಟುಕೊಳ್ಳಲು ಹಿಂಜರಿಯುತ್ತಿರುವ ಪ್ರವೃತ್ತಿ ಇನ್ನೂ ಉಳಿದಿದೆ. ಆದ್ದರಿಂದ ಕನಕರ ಕೀರ್ತನೆಗಳು ಈಗಲೂ ಪ್ರಸ್ತುತ ಎಂಬುದು ಗೊತ್ತಾಗುತ್ತದೆ ಎಂದರು.

‘ಗ್ರಾಮೀಣ ಸೊಗಡಿನ ಭಾಷೆಯಲ್ಲಿ ಆಗಿನ ಸಮಾಜದ ಅಂಕು ಡೊಂಕನ್ನು ಅವರು ತಿಳಿಸಿಕೊಟ್ಟಿದ್ದರು. ಆದರೆ, ಈಗ ನಾವು ಕಾನೂನಿನ ಮೂಲಕ ಜಾತಿ ವ್ಯವಸ್ಥೆ ತಿದ್ದಲು ಮುಂದಾಗುತ್ತಿದ್ದೇವೆ. ಅಂಬೇಡ್ಕರ್ ಅವರು ಸಂವಿಧಾನ ನೀಡದಿದ್ದರೆ ಇಷ್ಟೊಂದು ಬದಲಾವಣೆ ಆಗುತ್ತಿರಲಿಲ್ಲ. ಇನ್ನೂ ಮನಃಸ್ಥಿತಿ ಬದಲಾಗಬೇಕು. ಅಂಬೇಡ್ಕರ್ ಕರೆ ನೀಡಿರುವಂತೆ ವಿದ್ಯೆ, ಸಂಘಟನೆ ಮತ್ತು ಹೋರಾಟದಿಂದ ಅದು ಸಾಧ್ಯ’ ಎಂದು ಪ್ರತಿಪಾದಿಸಿದರು.

ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ಮಾತನಾಡಿ, ‘ಪ್ರತಿಮೆಗಳನ್ನು ಇಟ್ಟುಕೊಂಡು ಹೊಡೆದಾಡಿಸಿದವರಿಗೆ, ಭಾಷೆಯ ಜಗಳ ಹುಟ್ಟು ಹಾಕಿದವರಿಗೆ, ರಾಜ್ಯ ರಾಜ್ಯಗಳ ನಡುವೆ ಸಂಘರ್ಷ ಹುಟ್ಟು ಹಾಕಿದ ಜನರಿಗೆ ಸಾದರಹಳ್ಳಿ ಗ್ರಾಮದಲ್ಲಿ ಮೂರೂ ಪ್ರತಿಮೆಗಳ ಅನಾವರಣದ ಮೂಲಕ ಪ್ರೀತಿ, ಭಾವೈಕ್ಯದ ಸಂದೇಶ ಹೋಗಬೇಕು’ ಎಂದರು.

ಬಿಎಂಟಿಸಿ ಉಪಾಧ್ಯಕ್ಷ ನಿಖಿತ್‌ರಾಜ್ ಮೌರ್ಯ, ‘ಅಂಬೇಡ್ಕರ್, ಬಸವಣ್ಣ, ಕನಕದಾಸ, ರಾಯಣ್ಣ, ಕುವೆಂಪು ನಮಗೆ ಬೇರೆ ವ್ಯಕ್ತಿಗಳಂತೆ ಕಂಡರೂ ಅವರೆಲ್ಲರ ಚಿಂತನೆ ಮತ್ತು ವಿಚಾರಧಾರೆ ಒಂದೇ’ ಎಂದು ಹೇಳಿದರು.

ಆದರ್ಶ ಇಟ್ಟುಕೊಂಡು ಬದುಕಿದರು. ಕನಕದಾಸರಿಗೆ ರಾಜಾಶ್ರಯ ಇಲ್ಲದಿದ್ದರೂ, ಅವರು ಬರೆದಿರುವ ಸಾಹಿತ್ಯ ಮತ್ತು ಕೀರ್ತನೆಗಳು ಉಳಿದಿವೆ. ಇದಕ್ಕೆ ಕಾರಣ ಇತರೆ ಹಿಂದುಳಿದ ಜನ ಬಾಯಿಂದ ಬಾಯಿಗೆ ಹರಡಿಸಿದ್ದಾರೆ ಎಂದು ಹೇಳಿದರು.

ಒಂದೇ ವೇದಿಕೆಯಲ್ಲಿ ಎಲ್ಲರೂ ಒಟ್ಟಿಗೆ ಕುಳಿತುಕೊಳ್ಳುವ ಪರಿಸ್ಥಿತಿ 75 ವರ್ಷಗಳ ಹಿಂದೆ ಇರಲಿಲ್ಲ. 4 ಸಾವಿರ ವರ್ಷಗಳಿಂದ ಭಾರತದಲ್ಲಿ ಈ ವ್ಯವಸ್ಥೆ ಇತ್ತು. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಸಮಾನತೆ ಬಂದಿದೆ. ತಳ ಸಮುದಾಯದವರೂ ಶಿಕ್ಷಣ ಮತ್ತು ಉನ್ನತ ಹುದ್ದೆಗಳ ಬಗ್ಗೆ ಮಾತನಾಡುವಂತೆ ಸಂವಿಧಾನ ಮಾಡಿದೆ ಎಂದು ಹೇಳಿದರು.

ಶಾಸಕ ಜಿ.ಎಚ್. ಶ್ರೀನಿವಾಸ್, ಬಿಎಸ್‌ಪಿ ಮುಖಂಡ ಕೆ.ಟಿ. ರಾಧಾಕೃಷ್ಣ, ಉದ್ಯಮಿ ಎಸ್.ಎನ್. ರಮೇಶ್, ಮುಖಂಡರಾದ ರೇಖಾ ಹುಲಿಯಪ್ಪಗೌಡ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್, ರಾಜು ಮಣೇನಹಳ್ಳಿ, ಕೆಂಗೇಗೌಡ, ಎಸ್.ಬಿ. ಮಲ್ಲೇಗೌಡ, ಮಂಜುಳಾ, ವಿಶಾಲಾಕ್ಷಿ, ರೇಣುಕಾ, ಬೀರೇಗೌಡ ಭಾಗವಹಿಸಿದ್ದರು.

Kanakadasa’s hymns are still as relevant today

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ...

Related Articles

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...