ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡಿನ ಖ್ಯಾತ ವೀಣಾ ವಿದುಷಿ ರೇವತಿ ಕಾಮತ್ರವರಿಂದ ನ.೧೦ ರಂದು ಸಂಜೆ ೬ ಗಂಟೆಗೆ ಮಧುವನ ಲೇಔಟ್ನಲ್ಲಿರುವ ಎಂಎಲ್ಆರ್ ಲಯನ್ಸ್ ಸೇವಾ ಭವನದಲ್ಲಿ ಕನ್ನಡ ವೀಣಾ ಎಂಬ ವಿಶೇಷ, ವಿಶಿಷ್ಟ, ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಸಂಸ್ಥೆ ಸಂಯೋಜಕ ಜಿ. ರಮೇಶ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಲಯನ್ಸ್ ಸಂಸ್ಥೆ, ಕಲ್ಕಟ್ಟೆ ಪುಸ್ತಕದ ಮನೆ, ಪೂರ್ವಿ ಸುಗಮಸಂಗೀತ ಅಕಾಡೆಮಿ ಟ್ರಸ್ಟ್ ಇವರುಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ವೀಣಾ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಅಧ್ಯಕ್ಷತೆಯನ್ನು ಲಯನ್ಸ್ ಸಂಸ್ಥೆ ಅಧ್ಯಕ್ಷ ಸಿ.ಎನ್ ಕುಮಾರ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಶಾಸಕ ಹೆಚ್.ಡಿ. ತಮ್ಮಯ್ಯ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ಜೆ.ಪಿ. ಕೃಷ್ಣೇಗೌಡ, ರೇಖಾ ನಾಗರಾಜ್ರಾವ್, ಎಂ.ಎಸ್ ಸುಧೀರ್, ಬಿ.ಎನ್ ವೆಂಕಟೇಶ್, ಕೆ.ಸಿ ಆನಂದ್, ಚರಣ್ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.
ವೀಣಾವಿದುಷಿ ರೇವತಿ ಕಾಮತ್ ಅವರು ಜಿಲ್ಲೆಯ ಶೃಂಗೇರಿಯವರಾಗಿದ್ದು, ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲಯನ್ಸ್ ಸಂಸ್ಥೆ ನಿರ್ವಹಿಸುತ್ತಿರುವ ಸುವರ್ಣ ವನಕ್ಕೆ ನ.೧೧ ರಂದು ಭೇಟಿನೀಡಿ ಅರಣ್ಯಾಭಿವೃದ್ಧಿ ಬಗ್ಗೆ ಪರಿಶೀಲಿಸಲಿದ್ದಾರೆಂದು ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಮಹಿಳೆಯರು ಭಾಗವಹಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಲಯನ್ಸ್ ಅಧ್ಯಕ್ಷ ಸಿ.ಎನ್ ಕುಮಾರ್, ಉಪಾಧ್ಯಕ್ಷ ಟಿ. ನಾರಾಯಣಸ್ವಾಮಿ, ಮುಖಂಡರಾದ ವೆಂಕಟೇಶ್, ಶಿವಣ್ಣ, ಅಣ್ಣಾವೇಲು, ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Kannada Veena at Lions Seva Bhavan on November 10
Leave a comment