Home ಕಣ್ಣನ್ ಅವಮಾನಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
Homenamma chikmagalurState News

ಕಣ್ಣನ್ ಅವಮಾನಿಸಿದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Share
Share

ಚಿಕ್ಕಮಗಳೂರು :

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಯಿಂದ ಹಿರೇಮಗಳೂರು ಕಣ್ಣನ್ ಕೈ ಬಿಟ್ಟಿರುವುದಕ್ಕೆ ಬಿಜೆಪಿ ಆಕ್ರೋಶ ಹೊರಹಾಕಿದೆ.

ಕನ್ನಡ ನುಡಿ ಸೇವಕ ಹಿರೇಮಗಳೂರು ಕಣ್ಣನ್ ಗೆ ಅವಮಾನಿಸಲಾಗಿದೆ ಎಂದು ಮಾಜಿ ಕ.ಸಾ.ಪ ಅಧ್ಯಕ್ಷ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ನ್ಯೂಸ್ ಕಿಂಗ್ ವೆಬ್ ಸೈಟ್ ನಲ್ಲಿ ಕಣ್ಣನ್ ರನ್ನು ರಾಜ್ಯ ಸರ್ಕಾರ ನಡೆಸಿಕೊಂಡ ಬಗ್ಗೆ ಸುದ್ದಿ ಪ್ರಸಾರ ಮಾಡಿತ್ತು.

ಈ ಬೆನ್ನಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಪುಟ್ಟಸ್ವಾಮಿ ಪ್ರಶಸ್ತಿ ಆಯ್ಕೆ ಸಮಿತಿಯಿಂದ ಕೈ ಬಿಡುವಂತೆ ಸಚಿವರಿಗೆ ಪತ್ರ ಬರೆಯುವ ಮೂಲಕ ಕನ್ನಡ ಪೂಜಾರಿ ಖ್ಯಾತಿಯ ಹಿರೇಮಗಳೂರು ಕಣ್ಣನ್ ರಿಗೆ ಕಾಂಗ್ರೆಸ್ ಎಂಎಲ್.ಸಿ ಮಂಜುನಾಥ ಬಂಡಾರಿ ಪತ್ರ ಬರೆದಿರುವುದನ್ನು ಖಂಡಿಸಿದ್ದು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಅಥವಾ ಬೆರಾವುದೇ ಸಮಿತಿಗೆ ನೇಮಕ ಮಾಡಿ ಎಂದು ಕೇಳುವ ಅಥವಾ ಪ್ರಭಾವ ಬೀರುವ ವ್ಯಕ್ತಿ ಕಣ್ಣನ್ ಮಾಮ ಅವರ ಜಾಯಮಾನದಲ್ಲೇ ಇಲ್ಲ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿರುವ ಬಿಜೆಪಿ ವಕ್ತಾರ ಪುಟ್ಟಸ್ವಾಮಿ ರಾಜ್ಯ ಸರ್ಕಾರದವರೇ ತಮ್ಮ ತೆವಲಿಗೆ ಆಯ್ಕೆ ಮಾಡಿ ಇದೀಗ ಅವಮಾನಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕನ್ನಡ ನಾಡು ನುಡಿ ಸೇವೆಗಾಗಿಯೇ ತಮ್ಮನ್ನು ಸಮರ್ಪಿಸಿಕೊಂಡಿರುವ ಕಣ್ಣನ್ ನಿಜವಾದ ಕನ್ನಡ ನುಡಿ ಸೇವಕ. ಅವರನ್ನು ಸಮಿತಿಯಿಂದ ಕೈ ಬಿಡಬೇಕು ಎಂದು ಕಾಂಗ್ರೆಸ್ ನ ಮಂಜುನಾಥ್ ಭಂಡಾರಿ ಅವರು ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಪತ್ರ ಬರೆಯುವ ಮೂಲಕ ಅವಮಾನಿಸಿರುವುದನ್ನು ಕನ್ನಡಿಗರೆಲ್ಲರೂ ಖಂಡಿಸಬೇಕಾಗಿದೆ ಎಂದು ಪುಟ್ಟಸ್ವಾಮಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ .

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...