Home ಬಿಎಸ್ಪಿ ಕಚೇರಿಯಲ್ಲಿ ಕಾನ್ಸಿರಾಂ 91ನೇ ಜನ್ಮದಿನ ಆಚರಣೆ
HomeLatest Newsnamma chikmagalur

ಬಿಎಸ್ಪಿ ಕಚೇರಿಯಲ್ಲಿ ಕಾನ್ಸಿರಾಂ 91ನೇ ಜನ್ಮದಿನ ಆಚರಣೆ

Share
ಬಿಎಸ್ಪಿ ಕಚೇರಿಯಲ್ಲಿ ಕಾನ್ಸಿರಾಂ 91ನೇ ಜನ್ಮದಿನ ಆಚರಣೆ
ಬಿಎಸ್ಪಿ ಕಚೇರಿಯಲ್ಲಿ ಕಾನ್ಸಿರಾಂ 91ನೇ ಜನ್ಮದಿನ ಆಚರಣೆ
Share

ಚಿಕ್ಕಮಗಳೂರು: ಕೋಮುವಾದಿಗಳಿಂದ ತುಳಿತಕ್ಕೊಳಗಾದ ದಲಿತ ಮತ್ತು ಅಲ್ಪಸಂ ಖ್ಯಾತರ ಪರ ರಾಜಕೀಯ ಚಳವಳಿ ರೂಪಿಸಿ ಕೋಮುವಾದಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಕಾನ್ಸಿರಾಂ ಅವರು ದೇಶ ಕಂಡ ಅತ್ಯುನ್ನತ ರಾಜಕಾರಣಿ ಎಂದು ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಹೇಳಿದರು.

ನಗರದ ಬಿಎಸ್‌ಪಿ ಕಚೇರಿಯಲ್ಲಿ ಬಿಎಸ್ಪಿ ಸಂಸ್ಥಾಪಕ ದಾದಾಸಾಹೇಬ್ ಕಾನ್ಸಿರಾಮ್ ೯೧ನೇ ಜನ್ಮದಿನಾ ಚರಣೆ ಅಂಗವಾಗಿ ಶನಿವಾರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ದೇಶದ ಬಡವರಿಗಾಗಿ ಸಾವಿರಾರು ಯೋಜನೆಗಳು ಬಂದರೂ ದಲಿತರು ಮತ್ತು ಅಲ್ಪಸಂಖ್ಯಾತರ ಸ್ಥಿತಿ ಬದಲಾಗದಿರುವುದರಿಂದ ಕಾನ್ಸಿರಾಂ ಅವರು ಇದರ ಬಗ್ಗೆ ಚಳವಳಿಯನ್ನೇ ರೂಪಿಸಿ, ಪಕ್ಷ ಸಂಘಟನೆ ಮಾ ಡಿದ್ದರು. ತುಳಿತಕ್ಕೊಳಗಾದವರ ಪರ ನಿಂತು ಅವರನ್ನು ಮೇಲೆತ್ತುವ ಪ್ರಯತ್ನದಲ್ಲಿ ತೊಡಗಿದ್ದರು ಎಂದು ತಿಳಿಸಿದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಮಾತನಾಡಿ ಕಾನ್ಶಿರಾಂ ಶೋಷಿತ ಸಮುದಾ ಯಗಳನ್ನು ಒಗ್ಗೂಡಿಸಿ ರಾಜಕೀಯ ಶಕ್ತಿಯನ್ನಾಗಿ ರೂಪಿಸಲು ಶ್ರಮಿಸಿದರು. ದೇಶದ ಆಡಳಿತ ಬಹುಜನ ಕೈಗೆ ಬಂದಾಗ ಮಾತ್ರ ಪ್ರಜಾ ಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂಬುದನ್ನು ಕೊನೆಯವರವಿಗೂ ಪ್ರತಿ ಪಾದಿಸಿದ್ದು ಅವರ ಕನಸುಗಳನ್ನು ಸಾಕಾರಗೊಳಿಸುವ ಕಾರ್ಯ ಮಾಡಲು ಮುಂದಾಗಬೇಕು ಎಂದರು.

ಕಾನ್ಷಿರಾಂ ಅವರು ಶೋಷಿತರು ಹಾಗೂ ಹಿಂದುಳಿದ ಸಮುದಾಯಗಳ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಸದಢವಾಗಲು ಅವಿರತವಾಗಿ ಶ್ರಮಿಸಿದ್ದರು. ದಲಿತರು ಹಾಗೂ ಅಲ್ಪಸಂಖ್ಯಾತರು ಇಂ ದಿಗೂ ಮೇಲೇಳುವ ಬಗ್ಗೆ ಗಂಭೀರ ಚಿಂತನೆ ನಡೆಸಿಲ್ಲ ಶೋಚನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಪಿ.ಪರಮೇಶ್ ಸರಕಾರದ ಸವಲ ತ್ತುಗಳು ಅರ್ಹ ಫಲಾನುಭವಿಗಳಿಗೆ ಸಿಗಬೇಕಾದರೆ ಶೋಷಿತ ಸಮುದಾಯಗಳಿಗೆ ರಾಜಕೀಯ ಅಧಿಕಾರ ಸಿಗಬೇಕು ಎಂಬುದು ಅವರ ಕನಸಾಗಿತ್ತು. ಅವರ ಕನಸು ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ ಎಂದು ಹೇ ಳಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ ಬಿ ಸುಧಾ, ಜಿಲ್ಲಾ ಉಪಾಧ್ಯಕ್ಷ ಶ್ರೀಮತಿ ಕೆ ಎಸ್ ಮಂಜುಳಾ, ಅಸ್ಸೆಂಬ್ಲಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

Kansi Ram’s 91st birthday celebrated at BSP office

Share

Leave a comment

Leave a Reply

Your email address will not be published. Required fields are marked *

Don't Miss

ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಮೃತಪಟ್ಟ...

ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ -ಮೂಳೆಗಳು ಪತ್ತೆ

ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟವೊಂದರಲ್ಲಿ ಮನುಷ್ಯನನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಎಲ್ಲೋ ಬಿನ್ ಅವರಚ್ಚನ್ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ...

Related Articles

ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಇದೇ ಏ.30 ರಿಂದ ಆರಂಭಗೊಳ್ಳುತ್ತಿರುವುದರಿಂದ ಪರೀಕ್ಷಾ ತಯಾರಿ ಕುರಿತು...

ಸಂವಿಧಾನದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಸಾವಿರ ಸಿದ್ದಾಂತಗಳನ್ನು ನೀಡಿದ್ದಾರೆ

ಚಿಕ್ಕಮಗಳೂರು: ಇತ್ತೀಚಿನ ವರ್ಷಗಳಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಬದಲಾಯಿಸುತ್ತೇವೆಂಬ ಮಾತುಗಳು ಕೇಳಿ ಬರುತ್ತಿದೆ. ಇಂತಹ...

ಇಂದು ಕೈವಾರ ತಾತಯ್ಯನವರ ದೇವಾಲಯ ಉದ್ಘಾಟನೆ

ಚಿಕ್ಕಮಗಳೂರು: ತಾಲೂಕಿನ ಸಗನಿಪುರ ರಸ್ತೆಯ ಕೈವಾರ ಗಿರಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀಯೋಗಿನರೇಯಣ ಯತೀಂದ್ರ ಕೈವಾರ...

ಕಾಂಗ್ರೆಸ್ – ಮಿತ್ರ ಪಕ್ಷದಿಂದ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ

ಚಿಕ್ಕಮಗಳೂರು:ಸಂಸತ್ತಿನಲ್ಲಿ ನಾರಿಶಕ್ತಿ ಮಹಿಳಾ ಮೀಸಲಾತಿ ವಿರುದ್ಧ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಮತಚಲಾಯಿಸುವ ಮೂಲಕ...