Home namma chikmagalur ಕಸಬಾ-3 ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
namma chikmagalurchikamagalurHomeLatest News

ಕಸಬಾ-3 ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

Share
Share

ಚಿಕ್ಕಮಗಳೂರು: ಕ್ರೀಡಾಸಕ್ತಿ ಕೇವಲ ಶಾಲಾವಧಿಯಲ್ಲಿ ಮಾತ್ರ ಇರದೆ ಜೀವನ ಪರ್ಯಂತ ಇರಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಕರೆನೀಡಿದರು.

ಅವರು ಇಂದು ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ದಂಟರಮಕ್ಕಿ ಇವರುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಕಸಬಾ-೩ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ೨೦೨೫-೨೬ ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಕ್ರೀಡೆಗಳಾದ ಕಬ್ಬಡ್ಡಿ, ಖೋಖೋ ಮುಂತಾದ ದೈಹಿಕ ಶ್ರಮದ ಆಟಗಳನ್ನು ಆಡುವುದರಿಂದ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದ ಅವರು, ಎಲ್ಲಾ ಕ್ರೀಡಾಪಟುಗಳು ಈ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಕ್ರೀಡಾಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆನೀಡಿದರು.

ಮಗು ಊಟ ಮಾಡುವುದಿಲ್ಲವೆಂದು ವೈದ್ಯರ ಬಳಿ ದೂರು ಹೇಳುವವರು ಹೆಚ್ಚಾಗಿದ್ದಾರೆ. ನಾವು ಚಿಕ್ಕವರಾಗಿದ್ದಾಗ ಊಟ ಹಾಕಿಕೊಟ್ಟರೆ ಸಾಕು ಎಂದು ಖಾಲಿಮಾಡಿ ತಟ್ಟೆ ಬಡಿಯುತ್ತಿದ್ದೆವು. ಕಾರಣ ಬೆಳಗ್ಗೆ ಎದ್ದು ಕೃಷಿ ಚಟುವಟಿಕೆಯಲ್ಲಿ ಭಾಗವಹಿಸಿ ದೈಹಿಕ ಶ್ರಮದ ಕೆಲಸ ಮಾಡುತ್ತಿದ್ದೆವು ಎಂದು ಹಿಂದಿನ ವಿದ್ಯಾರ್ಥಿ ಜೀವನದ ಮೆಲುಕು ಹಾಕಿದರು.

ದೈಹಿಕ ಶ್ರಮದ ಕೆಲಸವನ್ನು ಮಾಡುವ ಮೂಲಕ ಹೆಚ್ಚು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದ ಅವರು, ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ಆಯೋಜಕರಿಗೆ ಈ ಸಂದರ್ಭದಲ್ಲಿ ಕೃತಜ್ಞತೆಗಳನ್ನು ಸಲ್ಲಿಸಿದರು.

ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ, ೧ ರಿಂದ ೧೧ ವಲಯ ಮಟ್ಟದ ಕ್ರೀಡಾಪಟುಗಳಿಗೆ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಸಹಕಾರ ನೀಡಿದ್ದಾರೆ. ಬಿಇಓ ಮತ್ತು ಶಿಕ್ಷಣ ಸಂಯೋಜಕರು ತುಂಬಾ ಬೆಂಬಲ ನೀಡಿ ಬೆನ್ನು ತಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಪ್ರತಿದಿನ ಚಟುವಟಿಕೆ ಮತ್ತು ಸಂತಸದಿಂದ ಇದ್ದಾಗ ಮಾತ್ರ ಎಲ್ಲರೂ ದೈಹಿಕವಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ಹೇಳಿದ ಅವರು, ಈ ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.

ದೈಹಿಕ ಶಿಕ್ಷಕರು ಮಳೆ, ಚಳಿ ಎನ್ನದೆ ಕ್ರೀಡಾಕೂಟ ಆಯೋಜನೆ ಮಾಡಿ ಪರಿಶ್ರಮ ವಹಿಸುತ್ತಿರುವುದು ಆರೋಗ್ಯಕರ ಬೆಳವಣಿಗೆ ಜೊತೆಗೆ ಇಲಾಖೆಗೆ ಶ್ರೇಯೋಭಿವೃದ್ಧಿ ಎಂದು ಶ್ಲಾಘಿಸಿದರು.

ಈ ಸಂದರ್ಭದಲ್ಲಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಜ್ಜಯ್ಯ, ಕಾರ್ಯದರ್ಶಿ ರವಿ, ರಾಜ್ಯ ಸರ್ಕಾರಿ ನೌಕರರ ಸಂಘದ ಕಾಯಾಧ್ಯಕ್ಷ ಸುಂದರೇಶ್, ಕಿರಣ್ ಕುಮಾರ್, ಜಾನಕಮ್ಮ, ಸುಂದರೇಶ್, ಅರಸು, ಪೂರ್ಣೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ಪ, ಮುಖ್ಯ ಶಿಕ್ಷಕಿ ರುಕ್ಸಾನ ಉಪಸ್ಥಿತರಿದ್ದರು. ಶಂಕರ್ ಸ್ವಾಗತಿಸಿ ಕುಮಾರ ಸ್ವಾಮಿ ವಂದಿಸಿದರು.

Kasaba-3 Zone Level Higher Primary Schools Sports Meet

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...