ತರೀಕೆರೆ: ತರೀಕೆರೆಯ ಸಮೀಪದ ಅತ್ತಿಗನಾಳ್ ಗ್ರಾಮದ ಯುವಕ ಮಂಜುನಾಥ್(23) ಎಂಬುವನಿಗೆ ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ.
ಕೊಲೆಯಾದ ಮಂಜುನಾಥ್ ನಿಶ್ಚಿತಾರ್ಥವಾಗಿದ್ದ ಹುಡುಗಿಗೆ ಪದೆ,ಪದೇ ಮೊಬೈಲ್ ಮೂಲಕ ಮೆಸೇಜ್ ಮಾಡಿ ಕಿರಿ,ಕಿರಿ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಕುಪಿತಗೊಂಡ ಹುಡುಗಿಯ ಅಣ್ಣಾ ಕಿರಣ್,ವೇಣು ಮತ್ತಿತರರು ಸೇರಿ ರಾತ್ರಿ 7.30ರ ಸುಮಾರಿಗೆ ಮಂಜುನಾಥ್ ಗೆ ಚಾಕುವಿನಿಂದ ಇರಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಎನ್ನಲಾಗಿದೆ.
ಮಂಜುನಾಥ್ ನಿಗೆ ತರೀಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು .ಚಿಕಿತ್ಸೆಗೆ ಸ್ಪಂದಿಸದೇ ಕೊನೆ ಉಸಿರು ಎಳೆದಿದ್ದಾನೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ತಕ್ಷಣವೇ ತರೀಕೆರೆ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಿಬ್ಬಂದಿ ವರ್ಗ ಗಾಯಳು ಮಂಜುನಾಥ್ ನನ್ನು ಶಿವಮೊಗ್ಗದ ಆಸ್ಪತ್ರೆಗೆ ಸಾಗಿಸಿದ್ದಾರೆ.
ಕೊಲೆ ಆರೋಪದಲ್ಲಿ ಕಿರಣ್ ಮತ್ತು ವೇಣು ಎಂಬುವರನ್ನು ವಶಕ್ಕೆ ಪಡೆದಿದ್ದು ಇನ್ನಿಬ್ಬರು ಆರೋಪಿಗಳಾದ ಮನು ಮತ್ತು ಅಪ್ಪುಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Kirik Manjunath Murder of a Girl
Leave a comment