Home namma chikmagalur chikamagalur ಬಿಡದಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕಿಸಾನ್ ಸಂಘ ಆಗ್ರಹ
chikamagalurHomeLatest Newsnamma chikmagalur

ಬಿಡದಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕಿಸಾನ್ ಸಂಘ ಆಗ್ರಹ

Share
oplus_161480704
Share

ಚಿಕ್ಕಮಗಳೂರು : ಬಿಡದಿ ವ್ಯಾಪ್ತಿ ಪ್ರದೇಶದಲ್ಲಿ ಪ್ರಸ್ತಾವಿತ ಟೌನ್‌ಷಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡುವಂತೆ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಮತ್ತಾವರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು ಭೂಸ್ವಾಧೀನ ಪ್ರಕ್ರಿಯೆ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ರೈತರ ವಿರುದ್ದ ದಾಖಲಿಸಿರುವ ಕೊಲೆಯತ್ನ ಪ್ರಕರಣ ಸೇರಿದಂತೆ ಎಲ್ಲಾ ಕೇಸುಗಳನ್ನು ಬೇಷರತ್ತಾಗಿ ಹಿಂಪಡೆಯಬೇಕೆಂದು ಆಗ್ರಹಿಸಿದರು.

ರೈತರ ಬದುಕು ಕೃಷಿ ಹಾಗೂ ರಾಜ್ಯದ ಆಹಾರ ಭದ್ರತೆಯನ್ನು ಕಾಪಾಡುವುದು ಸರ್ಕಾರದ ಮೊದಲ ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಬಿಡದಿಯ ಪ್ರಸ್ತಾವಿತ ಟೌನ್‌ಷಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿ ಭೂಸ್ವಾಧೀನ ಪಡಿಸಿಕೊಳ್ಳುವುದರಿಂದ ಸಾವಿರಾರು ರೈತ ಕುಟುಂಬಗಳ ಮೇಲೆ ಗಂಭೀರ ಪರಿಣಾಮ ಬೀರುವ ಬೆಳವಣಿಗೆಯಾಗಿದೆ. ತಲೆಮಾರುಗಳಿಂದ ಕೃಷಿಯನ್ನೇ ನಂಬಿ ಬದುಕುವ ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ ಅದು ಅವರ ಜೀವನೋಪಾಯ ಮತ್ತು ಮುಂದಿನ ಪೀಳಿಗೆಯ ಭದ್ರತೆಯಾಗಿದೆ ಎಂದರು.

ಈ ಭಾಗದ ರೈತರು ಪ್ರತಿನಿತ್ಯ ಬೆಂಗಳೂರು ಮಹಾನಗರಕ್ಕೆ ಅಗತ್ಯವಿರುವ ತರಕಾರಿ, ಒಪ್ಪ, ತೆಂಗಿನಕಾಯಿ ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ಹಾಗೂ ಪ್ರತಿನಿತ್ಯ ಲಕ್ಷಾಂತರ ಲೀಟರ್ ಹಾಲನ್ನು ಪೂರೈಸುತ್ತಿದ್ದಾರೆ. ಟೌನ್ ಷಿಪ್ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ನಾಶ ಪಡಿಸಿದರೆ ನಾಗರೀಕರ ಆಹಾgದ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ರಾಜ್ಯದ ಅಭಿವೃದ್ದಿಯನ್ನು ಕಟ್ಟಡಗಳ ಎತ್ತರದಿಂದ ಅಳೆಯುವುದಲ್ಲ. ಅನ್ನದಾತನಿಗೆ ನೀಡುವ ನ್ಯಾಯದ ಅಳತೆಯಾಗಿದೆ. ಕೃಷಿಭೂಮಿಯನ್ನು ಉಳಿಸುವುದು ಮತ್ತು ರೈತರ ಗೌರವ ಕಾಪಾಡುವುದು ಅಭಿವೃದ್ದಿಗಿಂತ ದೊಡ್ಡ ಜವಾಬ್ದಾರಿಯಾಗಿದೆ ಎಂದ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನ್ಯಾಯ ಸಮ್ಮತ ಹಾಗೂ ಜನಪರ ನಿರ್ಧಾರ ಕೈಗೊಂಡು ರೈತ ಸಮುದಾಯದ ವಿಶ್ವಾಸ ಉಳಿಸುವಂತೆ ಮನವಿ ಮಾಡಿದರು.

ರೈತರ ಬುದುಕು ಕೃಷಿ ಮತ್ತು ರಾಜ್ಯದ ಆಹಾರ ಭದ್ರತೆಯನ್ನು ಕಾಪಾಡುವ ಐತಿಹಾಸಿಕ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಸಂಚಾಲಕ ಶ್ರೀನಿವಾಸಗೌಡ, ಮುಖಂಡರುಗಳಾದ ಸ್ವಾಗತ್, ಅವಿನ್, ಪ್ರಮೊದ್ ಎಂ.ಕೆ., ಉಲ್ಲಾಸ್ ಗೌಡ, ನಕುಲ್ ಪ್ರಧಾನ್, ಸುನಿಲ್, ತನುಷ್, ದರ್ಶನ್, ರಕ್ಷಿತ್, ಉದಯ್ ಉಪಸ್ಥಿತರಿದ್ದರು.

Kisan Sangh demands abandonment of Bidadi land acquisition process

Share

Leave a comment

Leave a Reply

Your email address will not be published. Required fields are marked *

Don't Miss

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ ಭಕ್ತರನ್ನು ಘಾಸಿಗೊಳಿಸಿದೆ. ಕಡುಭ್ರಷ್ಟ ರಸಿಕ ಭೂಸೇನ ನಿಗಮದ ತಿಪ್ಪಾರೆಡ್ಡಿ ದಾನವಾಗಿ ವಿಗ್ರಹ ಕೊಟ್ಟ ಮೇಲೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ ಮೇವು ಹಾಗೂ ರೈತರ ಪರಿಸ್ಥಿತಿಯನ್ನು ಪರಿಶೀಲಿಸಲು ಜುಲೈ 17ರಿಂದ ಹೋಬಳಿವಾರು ಅಧ್ಯಯನ ಪ್ರವಾಸ ಕೈಗೊಳ್ಳಲಾಗುವುದು...

Related Articles

ರೈತ ಸಂಘ-ಹಸಿರು ಸೇನೆಯಿಂದ ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧದ ಪ್ರತಿಭಟನೆ

ಚಿಕ್ಕಮಗಳೂರು: ತತ್ವ ಸಿದ್ದಾಂತ, ವಿಚಾರಗಳನ್ನು ಬಲಿಕೊಡದೆ ಸಂಘಟನೆಯನ್ನು ಬೆಳೆಸಬೇಕು. ಯುವ ಪೀಳಿಗೆ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕು ಎಂದು...

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ...

ಜಿಲ್ಲೆಯ 3 ಪತ್ರಕರ್ತರಿಗೆ ವಿಶೇಷ ಪ್ರಶಸ್ತಿಗೆ ಆಯ್ಕೆ

ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಾಧನೆ ಗೈದ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ದತ್ತಿನಿಧಿ ಹಾಗೂ...