Home namma chikmagalur chikamagalur ಕುವೆಂಪು ಕಲಾಮಂದಿರದ ಕಾಂಪೌಂಡ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ
chikamagalurHomeLatest Newsnamma chikmagalur

ಕುವೆಂಪು ಕಲಾಮಂದಿರದ ಕಾಂಪೌಂಡ್‌ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ

Share
Share
ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ರಾತ್ರಿ 9.30ರ ಸುಮಾರಿಗೆ ಪ್ರಯಾಣಿಕರನ್ನೆಲ್ಲ ಇಳಿಸಿದ ಬಳಿಕ ಬಸ್ ಅನ್ನು ಆಲ್ಟಿಂಗ್ ಮಾಡಲು ತೆರಳುತ್ತಿದ್ದ ವೇಳೆ ಕಡೂರು–ಚಿಕ್ಕಮಗಳೂರು ನಾನ್‌ಸ್ಟಾಪ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಕುವೆಂಪು ಕಲಾಮಂದಿರದ ಕಾಂಪೌಂಡ್‌ಗೆ ಗುದ್ದಿದ ಘಟನೆ ನಡೆದಿದೆ.

ಚಾಲಕನ ಹೇಳಿಕೆಯ ಪ್ರಕಾರ ಬ್ರೇಕ್ ಫೇಲ್ ಆದ ಕಾರಣ ಬಸ್ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಅಪಘಾತದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ.

ಇನ್ನೊಂದು ಪ್ರಮುಖ ಸಂಗತಿ ಎಂದರೆ, ರಾತ್ರಿ ವೇಳೆ ಆಲ್ಟಿಂಗ್‌ಗೆ ಬರುವ ಕೆಲ ಬಸ್ ಚಾಲಕರು ಮತ್ತು ನಿರ್ವಾಹಕರು ಇದೇ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ. ಸದ್ಯ ಘಟನೆ ನಡೆದ ಸಮಯದಲ್ಲಿ ಅಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

ಸ್ಥಳೀಯರು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

KSRTC bus crashes into Kuvempu Kalamandira compound

Share

Leave a comment

Leave a Reply

Your email address will not be published. Required fields are marked *

Don't Miss

ರೈತರು-ಹೋರಿಗಳಿಗೂ ಅವಿನಾಭಾವ ಸಂಬಂಧ

ಚಿಕ್ಕಮಗಳೂರು:  ರೈತನಿಗೂ ಹಾಗೂ ಹೋರಿಗಳಿಗೂ ಅವಿನಾವಭಾವ ಸಂಬಂಧವಿದೆ. ಜೋಡೆತ್ತಿನ ಓಟದ ಸ್ಪರ್ಧೆ ರೈತರಿಗೆ ಮನರಂಜನೆ ಜೊತೆಗೆ ಕ್ರೀಡಾಸ್ಪೂರ್ತಿ ನೀಡುತ್ತಿದ್ದು ಯುವಜನತೆ ಹೆಚ್ಚು ಗ್ರಾಮೀಣ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಡಿಎ ಮಾಜಿ ಅಧ್ಯಕ್ಷ...

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪೋಷಕರು, ಗ್ರಾಮಸ್ಥರು ಹಾಗೂ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಕಟ್ಟುವ ಮುಖಾಂತರ...

Related Articles

ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು

ಚಿಕ್ಕಮಗಳೂರು: ಪ್ರತಿಯೋಬ್ಬರು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಿ ಪ್ರತಿನಿತ್ಯ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಹಾಗೂ...

ಮೇ 23 ಕ್ಕೆ ಮೂಡಿಗೆರೆಯಲ್ಲಿ ರೈತರಿಗಾಗಿ “ನಮ್ಮ ಭೂಮಿ ನಮ್ಮ ಹಕ್ಕು” ಸಮಾವೇಶ. 

ಕಡೂರು:  ರೈತರ ಪರವಾಗಿ ಇರಬೇಕಾದ ಸರ್ಕಾರ ಅವರ ಬೆನ್ನೆಲುಬನ್ನೇ ಮುರಿಯಲು ಹೊರಟಂತಿದೆ, 2010 ರಿಂದ 2023...

ಬಿದರೆ ಗ್ರಾಮದ ಕೋಳಿ ಗೂಡಿನಲ್ಲಿ ಮೂರು ನಾಗರಹಾವು ಪತ್ತೆ

ಚಿಕ್ಕಮಗಳೂರು: ಅತಿಯಾದ ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಹಾಗೂ ಆಹಾರದ ಹುಡುಕಾಟದಲ್ಲಿದ್ದ ಮೂರು ನಾಗರ ಹಾವುಗಳು ಒಂದೇ...

ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನೆಡೆದಿರುವ ಚುನಾವಣಾ ಅಕ್ರಮ ದೇಶದ ಇತಿಹಾಸದಲ್ಲಿ ಹಾಗೂ ಭವಿಷ್ಯದಲ್ಲಿ ಹಿಂದೆಂದಿಗೂ...