Home namma chikmagalur Kadur ಡಿವೈಡರ್ ಮೇಲೆ ಚಲಿಸಿದ ಕೆಎಸ್ಆರ್.ಟಿಸಿ ಅಶ್ವಮೇಧ ಬಸ್ : ಕಂಬಗಳಿಗೆ ಢಿಕ್ಕಿ
Kadur

ಡಿವೈಡರ್ ಮೇಲೆ ಚಲಿಸಿದ ಕೆಎಸ್ಆರ್.ಟಿಸಿ ಅಶ್ವಮೇಧ ಬಸ್ : ಕಂಬಗಳಿಗೆ ಢಿಕ್ಕಿ

Share
Share

ಚಿಕ್ಕಮಗಳೂರು :

ಬೆಳಗಿನ ಜಾವದ ನಸುಕಿನ ನಿದ್ರೆಯ ಗುಂಗಿನಲ್ಲಿದ್ದ ಕೆಎಸ್ ಆರ್.ಟಿ.ಸಿ ಅಶ್ವಮೇಧ ಬಸ್ ನ ಚಾಲಕ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ ಮೇಲೆ ಚಲಿಸಿದ ಘಟನೆ ಇಂದು ಕಡೂರು ಪಟ್ಟಣದಲ್ಲಿ ನಡೆದಿದೆ.

ನಿಯಂತ್ರಣ ತಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ ಚಾಲಕ ತಕ್ಷಣ ಕೂಡಲೆ ತಹಬದಿಗೆ ತರಲು ಪ್ರಯತ್ನಿಸುತ್ತಾನೆ. ಆದರೂ ಸಹಾ ಡಿವೈಡರ್ ನಲ್ಲಿದ್ದ ಎರಡು ಲೈಟ್ ಕಂಬಗಳಿಗೆ ಡಿಕ್ಕಿ ಹೊಡೆದೇ ಬಿಡುತ್ತದೆ. ಡಿಕ್ಕಿಯಾದ ನಂತರವೂ ಕೊಂಚ ದೂರ ಡಿವೈಡರ್ ಮೇಲೆ ಬಸ್ ಚಲಿಸುತ್ತದೆ. ನಂತರ ಮತ್ತೆ ರಸ್ತೆಗೆ ಬಸ್ ಕೊಂಡೋಯ್ದುವಲ್ಲಿ ಚಾಲಕ ಯಶಸ್ವಿಯಾಗಿದ್ದಾನೆ. ಈ ಅವಘಡ ಇಂದು ಮುಂಜಾನೆ ಕಡೂರು ಪಟ್ಟಣದಲ್ಲಿ ನಡೆದಿದೆ.

ಕಡೂರು ಪಟ್ಟಣದ ಚೆಕ್ ಪೋಸ್ಟ್ ನಿಂದ ಬಸ್ ನಿಲ್ದಾಣದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಡಿವೈಡರ್ ಮೇಲೆ ಬಸ್ ಚಲಿಸುತ್ತಿರುವ ದೃಶ್ಯವು ಸಮೀಪದ ಅಂಗಡಿಯೊಂದರ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ, ಬಸ್ ಯಾವ ಘಟಕಕ್ಕೆ ಸೇರಿದ್ದು ಹಾಗೂ ಚಾಲಕ ಯಾರು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ತೆಂಗಿನಕಾಯಿ ಕದ್ದ ವ್ಯಕ್ತಿಯ ಮೇಲೆ ಹಲ್ಲೆ- ಚಿಕಿತ್ಸೆ ಫಲಕಾರಿಯಾಗದೆ ಸಾವು

ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ತೆಂಗಿನಕಾಯಿ ಕದ್ದಿದ್ದಾನೆ ಎಂದು ತೆಂಗಿನ ತೋಟದ ಮಾಲೀಕ ವ್ಯಕ್ತಿಯ ಮೇಲೆ ಮಾರಣಾಂತಿಕ...

ನವೀಕೃತ ಕಿತ್ತೂರು ರಾಣಿ ಚನ್ನಮ್ಮ ಆಟೊ ನಿಲ್ದಾಣ ಉದ್ಘಾಟನೆ

ಬೀರೂರು : ‘ಕೊಳಚೆ ನಿರ್ಮೂಲನಾ ಮಂಡಳಿಯಿಂದ ಕೊಳಚೆ ಪ್ರದೇಶಗಳಲ್ಲಿ ನಿರ್ಮಿಸಲಾಗುತ್ತಿದ್ದ ಡಿ.ಡಿ (ಡಿಮ್ಯಾಂಡ್‌ ಡ್ರಾಫ್ಟ್‌) ಮನೆಗಳ...

ಕೋಡಿಬಿದ್ದ ದೇವನೂರು ಕೆರೆಗೆ ಬಾಗಿನ ಅರ್ಪಣೆ

ಚಿಕ್ಕಮಗಳೂರು ಭಾರತ ದೇಶದಲ್ಲಿ ವಿವಿಧ ಧರ್ಮಗಳನ್ನು ಆಚರಣೆ ಮಾಡುಲಾಗುತ್ತದೆ, ನಾವೆಲ್ಲರೂ ಭಾರತೀಯರು, ನಮ್ಮದು ಜಾತ್ಯಾತೀತ ರಾಷ್ಟ್ರ ಎಂಬುದು...

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ

ಚಿಕ್ಕಮಗಳೂರು  ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಚಿರತೆ ದಾಳಿ ಇಬ್ಬರ ಮೇಲೆ ಅಟ್ಯಾಕ್ ಮಾಡಿದ ಚಿರತೆ ಕಡೂರು...