Home namma chikmagalur Kadur ಡಿವೈಡರ್ ಮೇಲೆ ಚಲಿಸಿದ ಕೆಎಸ್ಆರ್.ಟಿಸಿ ಅಶ್ವಮೇಧ ಬಸ್ : ಕಂಬಗಳಿಗೆ ಢಿಕ್ಕಿ
Kadur

ಡಿವೈಡರ್ ಮೇಲೆ ಚಲಿಸಿದ ಕೆಎಸ್ಆರ್.ಟಿಸಿ ಅಶ್ವಮೇಧ ಬಸ್ : ಕಂಬಗಳಿಗೆ ಢಿಕ್ಕಿ

Share
Share

ಚಿಕ್ಕಮಗಳೂರು :

ಬೆಳಗಿನ ಜಾವದ ನಸುಕಿನ ನಿದ್ರೆಯ ಗುಂಗಿನಲ್ಲಿದ್ದ ಕೆಎಸ್ ಆರ್.ಟಿ.ಸಿ ಅಶ್ವಮೇಧ ಬಸ್ ನ ಚಾಲಕ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ ಮೇಲೆ ಚಲಿಸಿದ ಘಟನೆ ಇಂದು ಕಡೂರು ಪಟ್ಟಣದಲ್ಲಿ ನಡೆದಿದೆ.

ನಿಯಂತ್ರಣ ತಪ್ಪುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ ಚಾಲಕ ತಕ್ಷಣ ಕೂಡಲೆ ತಹಬದಿಗೆ ತರಲು ಪ್ರಯತ್ನಿಸುತ್ತಾನೆ. ಆದರೂ ಸಹಾ ಡಿವೈಡರ್ ನಲ್ಲಿದ್ದ ಎರಡು ಲೈಟ್ ಕಂಬಗಳಿಗೆ ಡಿಕ್ಕಿ ಹೊಡೆದೇ ಬಿಡುತ್ತದೆ. ಡಿಕ್ಕಿಯಾದ ನಂತರವೂ ಕೊಂಚ ದೂರ ಡಿವೈಡರ್ ಮೇಲೆ ಬಸ್ ಚಲಿಸುತ್ತದೆ. ನಂತರ ಮತ್ತೆ ರಸ್ತೆಗೆ ಬಸ್ ಕೊಂಡೋಯ್ದುವಲ್ಲಿ ಚಾಲಕ ಯಶಸ್ವಿಯಾಗಿದ್ದಾನೆ. ಈ ಅವಘಡ ಇಂದು ಮುಂಜಾನೆ ಕಡೂರು ಪಟ್ಟಣದಲ್ಲಿ ನಡೆದಿದೆ.

ಕಡೂರು ಪಟ್ಟಣದ ಚೆಕ್ ಪೋಸ್ಟ್ ನಿಂದ ಬಸ್ ನಿಲ್ದಾಣದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಡಿವೈಡರ್ ಮೇಲೆ ಬಸ್ ಚಲಿಸುತ್ತಿರುವ ದೃಶ್ಯವು ಸಮೀಪದ ಅಂಗಡಿಯೊಂದರ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ, ಬಸ್ ಯಾವ ಘಟಕಕ್ಕೆ ಸೇರಿದ್ದು ಹಾಗೂ ಚಾಲಕ ಯಾರು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಇಂಧನ ನಿಗಮದ ಅಧ್ಯಕ್ಷರಾಗಿ ಟಿ.ಡಿ.ರಾಜೇಗೌಡರ ಮತ್ತೆ ನೇಮಕ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರನ್ನು ಮುಂದುವರೆಯಲು ಆದೇಶವನ್ನು ನೀಡಲಾಗಿದೆ. ರಾಜೇಗೌಡರನ್ನು 2024 ರಲ್ಲಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಎರಡು ವರ್ಷದ ಅವಧಿಯ ನೇಮಕಾತಿ...

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

Related Articles

ಸೈಬ‌ರ್ ವಂಚನೆಯಿಂದ ಲಕ್ಷಾಂತರ ರೂಪಾಯಿ ವಂಚಕರ ಪಾಲು

ಕಡೂರು: ಸೈಬ‌ರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಲಕ್ಷಾಂತರ ರೂಪಾಯಿ ವಂಚಕರ ಪಾಲಾಗುತ್ತಿದೆ. ಕಡೂರಿನ...

ರೈಲ್ವೆ ಇಲಾಖೆಯ ಉದ್ಯೋಗಿಯ ಮೇಲೆ ಹಲ್ಲೆ

ಕಡೂರು: ತಾಲೂಕಿನ ಚೌಳಹಿರಿಯೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ರೈಲ್ವೆ ಇಲಾಖೆಯ ಉದ್ಯೋಗಿಯ ಮೇಲೆ ಹಲ್ಲೆ ನಡೆದಿದ್ದು, ಈ...

ಪರೀಕ್ಷಾ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ

ಕಡೂರು: ಪರೀಕ್ಷಾ ಭಯ ಹಾಗೂ ಅಧಿಕಾರಿಗಳ ಮಾತಿನಿಂದ ನೊಂದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ...

ಕಳೆದುಹೋಗಿದ್ದ ಮೊಬೈಲ್ ಪತ್ತೆಹಚ್ಚಿದ ಪೊಲೀಸರು

ಕಡೂರು : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಸಂದರ್ಭಗಳಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ಗಳನ್ನು ಸಿಇಐಆರ್ (CEIR)...