Home namma chikmagalur chikamagalur ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ
chikamagalurHomeLatest Newsnamma chikmagalur

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

Share
Share

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪಿಳ್ಳೇನಹಳ್ಳಿಯಲ್ಲಿ ಸುಮಾರು ೬೫ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗೆ ಆದ್ಯತೆ. ಈ ಕರ್ತವ್ಯವನ್ನು ಎಷ್ಟರಮಟ್ಟಿಗೆ ನಿಭಾಯಿಸುತ್ತೇವೆಯೋ ಆಗ ಜನರು ನಮ್ಮನ್ನು ಗುರುತು ಮಾಡುತ್ತಾರೆ ಎಂದರು.

ಶಿಕ್ಷಣಕ್ಕೆ ಆದ್ಯತೆ ನೀಡಿ ಹೋಬಳಿ ಮಟ್ಟದಲ್ಲಿ ಕೆಪಿಎಸ್ ಶಾಲೆಗಳ ತೆರೆಯಬೇಕೆಂದು ಈಗಾಗಲೇ ಸಖರಾಯಪಟ್ಟಣದಲ್ಲಿ ಸುಮಾರು ೪ ಕೋಟಿ ರು. ವೆಚ್ಚದಲ್ಲಿ ಕೆಪಿಎಸ್ ಶಾಲೆ ಮಂಜೂರಾಗಿದೆ. ಸದ್ಯದಲ್ಲೇ ಕೆಲಸ ಆರಂಭವಾಗಲಿದೆ. ದೇವನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ಕೋಟಿ ರು. ವೆಚ್ಚದಲ್ಲಿ ಇಡೀ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ಬಾರಿ ಲಕ್ಯಾ ಹೋಬಳಿಯ ಕೆ.ಬಿ. ಹಾಳ್ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಚಿಕ್ಕಮಗಳೂರಿನಲ್ಲಿ ತಾಯಿ ಮಗು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಒಂದು ವರ್ಷದೊಳಗೆ ಪ್ರಾರಂಭ ಮಾಡುತ್ತೇವೆ ಎಂದರು. ಯುದ್ಧದಿಂದಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಆದರೆ, ಇಲ್ಲಿನ ಕೇಂದ್ರ ಸರ್ಕಾರ ಸರಿಯಾದ ರೀತಿಯಲ್ಲಿ ನಿಭಾಯಿಸುತ್ತಿಲ್ಲ. ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ.

ಇಂತಹ ಬೆಲೆ ಏರಿಕೆಗಳ ನಡುವೆ ಸಾಮಾನ್ಯ ಜನರ ಬದುಕನ್ನು ಕಟ್ಟಿಕೊಡಲು ನಿಕಟಪೂರ್ವ ಸಿಎಂ ಸಿದ್ದರಾಮಯ್ಯ ಹಾಗೂ ಈಗಿನ ಸಿಎಂ ಡಿ.ಕೆ. ಶಿವಕುಮಾರ್ ಕೊಟ್ಟಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಸಾಧ್ಯವಾಗಿದೆ ಎಂದ ಶಾಸಕರು, ಜಿಲ್ಲೆಗೆ ೩೮ ಆಯುಷ್ಮಾನ್ ಆರೋಗ್ಯ ಕೇಂದ್ರ ಮಂಜೂರಾಗಿದ್ದು ಈ ಪೈಕಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ೧೧ ಕೇಂದ್ರಗಳು ಮಂಜೂರಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಪಿಎಂಸಿ ಮಾಜಿ ಸದಸ್ಯ ಲೋಕೇಶ್, ಶ್ರೀರಂಗನಾಥ ಸ್ವಾಮಿ ದೇವಾಲಯದ ಸಮಿತಿ ಅಧ್ಯಕ್ಷರಾದ ಬಸವರಾಜ್, ಕೃಷ್ಣಮೂರ್ತಿ ಸಂತೋಷ್, ಲಕ್ಷ್ಮಣ್, ಗ್ರಾಮ ಪಂಚಾಯ್ತಿ ಸದಸ್ಯರಾದ ವಿನೋದ್ ಉಪಸ್ಥಿತರಿದ್ದರು.

Kudali Puja for Ayushman Health Center work

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...