ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ 169ರ ಶೌಕತ್ ಅಲಿ ಗ್ಯಾರೇಜ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಎಂಬ ಕೂಲಿ ಕಾರ್ಮಿಕನಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ.
ಜೂನ್ 6 ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಮಂಜುನಾಥ್ ಅವರಿಗೆ ಕೆಎ 14 EW 8530 ನಂಬರಿನ ಬೈಕ್ ಚಾಲಕ ಅತಿ ವೇಗವಾಗಿ ಬಂದು ಗುದ್ದಿದ್ದನು. ಅಪಘಾತದ ಬಳಿಕ ಅವರನ್ನು ಶೃಂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಆದರೆ ಮನೆಗೆ ಬಂದ ನಂತರ ತೀವ್ರ ತಲೆನೋವು ಕಾಣಿಸಿಕೊಂಡಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ ಹಾಗೂ ಅಲ್ಲಿಂದ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಎನ್.ಆರ್.ಪುರ ಬಳಿ ದಾರಿಯಲ್ಲೇ ಮೃತಪಟ್ಟಿದ್ದಾರೆ. ಮೃತರ ಮಗಳು ಅನ್ನಪೂರ್ಣ ನೀಡಿದ ದೂರಿನನ್ವಯ ಶೃಂಗೇರಿ ಪೊಲೀಸರು ಬೈಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Laborer dies after being hit by a bike from behind
Leave a comment