Home namma chikmagalur ́ಲಕ್ಷ್ಮಣ ತುಕಾರಾಂ ಗೋಲೆ’ ನಾಟಕ ಪ್ರದರ್ಶನ
namma chikmagalurchikamagalurHomeLatest News

́ಲಕ್ಷ್ಮಣ ತುಕಾರಾಂ ಗೋಲೆ’ ನಾಟಕ ಪ್ರದರ್ಶನ

Share
Share

ಚಿಕ್ಕಮಗಳೂರು: ರಂಗಭೂಮಿ ನಾಟಕಗಳು ಸಮಾಜ ಪರಿವರ್ತನೆಗೆ ನಾಂದಿಯಾಗಿದ್ದು, ಪ್ರತಿಯೊಬ್ಬರೂ ನಾಟಕ ವೀಕ್ಷಿಸುವ ಮೂಲಕ ಕಲೆಯನ್ನು ಪ್ರೋತ್ಸಾಹಿಸಬೇಕೆಂದು ಬಸವತತ್ವ ಪೀಠದ ಪೀಠಾಧ್ಯಕ್ಷ ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು.

ಅವರು ಕುವೆಂಪು ಕಲಾಮಂದಿರದಲ್ಲಿ ಬಸವತತ್ವ ಪೀಠ, ಕಲಾ ಸೇವಾಸಂಘ, ಆಶಾಕಿರಣ ಚಾರಿಟಬಲ್ ಟ್ರಸ್ಟ್, ಲಯನ್ ಸಂಸ್ಥೆ, ಸುಗಮ ಸಂಗೀತ ಗಂಗಾ, ಎಐಟಿ, ಆಶ್ರಯ ಫೌಂಡೇಷನ್, ಕಲ್ಕಟ್ಟೆ ಪುಸ್ತಕದ ಮನೆ, ಜೆಸಿ ಸಂಸ್ಥೆ, ಪೂರ್ವಿ ಸುಗಮಸಂಗೀತ ಅಕಾಡೆಮಿ, ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ‘ಲಕ್ಷ್ಮಣ ತುಕಾರಾಂ ಗೋಲೆ’ ನಾಟಕ ಪ್ರದರ್ಶನದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ದೂರದರ್ಶನ ಮನುಷ್ಯನನ್ನು ಚಿಕ್ಕದಾಗಿ ತೋರಿಸಿದರೆ, ಸಿನಿಮಾ ದೊಡ್ಡದಾಗಿ ತೋರಿಸುತ್ತದೆ. ರಂಗಭೂಮಿ ಮಾತ್ರ ಮನುಷ್ಯನನ್ನು ಮನುಷ್ಯನಾಗಿ ಬಿಂಬಿಸುತ್ತದೆ ಎಂದು ವಿಶ್ಲೇಷಿಸಿದರು.

ವಾಸ್ತವ ಬದುಕಿನಲ್ಲಿ ರಂಗಭೂಮಿ ಮನುಷ್ಯನನ್ನು ಮುನುಷ್ಯನಾಗಿ ತೋರಿಸುವ ಕಲಾ ಪ್ರಕಾರವೇ ನಾಟಕಗಳು ಎಂದ ಅವರು, ಪಾತಕಿ ಲೋಕದ ಅಪರಾಧದಿಂದ ಹೊರಬಂದು ಗಾಂಧೀಜಿಯವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡ ಲಕ್ಷ್ಮಣ್ ತುಕಾರಾಂ ಗೋಲೆ ನಾಟಕ ಅವರ ಜೀವನ ಚರಿತ್ರೆಯಾಗಿದೆ ಎಂದು ಹೇಳಿದರು.

ಪ್ರತಿಯೊಬ್ಬ ಮನುಷ್ಯನಿಗೆ ಪರಿವರ್ತನೆಗೆ ಒಂದು ಒಳ್ಳೆಯ ಅವಕಾಶವಿದೆ. ಪ್ರತಿ ಪಾಪಿಗೂ ಒಂದು ಭವಿಷ್ಯ ಇದೆ. ಅದರಂತೆ ಒಳ್ಳೆಯ ಭವಿಷ್ಯ ರೂಪಿಸುವ ನಾಟಕ ಇದಾಗಿದ್ದು, ಎಲ್ಲರೂ ವೀಕ್ಷಿಸುವ ಮೂಲಕ ಪ್ರೋತ್ಸಾಹಿಸಬೇಕಾದ ಅಗತ್ಯ ಇದೆ ಎಂದರು. ಮುಂದಿನ ದಿನಗಳಲ್ಲಿ ಈ ರೀತಿಯ ಸಾಮಾಜಿಕ ಬದಲಾವಣೆಯ ನಾಟಕಗಳನ್ನು ಹೆಚ್ಚು ಹೆಚ್ಚು ಪ್ರದರ್ಶನದ ಮೂಲಕ ಜನರ ಮನಃಪರಿವರ್ತನೆಗೆ ನಾಂದಿಯಾಗಲಿ ಎಂದು ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಮೋಹನ್ ದಾಸ್‌ರನ್ನು ಮಹಾತ್ಮಾ ಗಾಂಧಿಯಾಗಿ ಪರಿವರ್ತನೆ ಮಾಡಿದ್ದು ಅವರು ಚಿಕ್ಕಂದಿನಲ್ಲಿ ಹರಿಶ್ಚಂದ್ರ ನಾಟಕವನ್ನು ವೀಕ್ಷಿಸಿದ್ದರು ಎಂದು ಹೇಳಿದರು. ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಇಂತಹ ಸಾಮಾಜಿಕ ಪರಿವರ್ತನೆಯ ನಾಟಕಗಳ ಪ್ರದರ್ಶನ ಜನರಲ್ಲಿ ಭಾವನಾತ್ಮಕ ವಿಚಾರಧಾರೆಗಳು ನೆಲೆಸಲು ಪೂರಕ ಎಂದರು.

ಪರಿವರ್ತನೆ ದಾರಿಯಲ್ಲಿ ಸಾಗಬೇಕಾದರೆ ಎಲ್ಲರಿಗೂ ಅವಕಾಶವಿದೆ ಎಂಬುದನ್ನು ಗಾಂಧೀಜಿ ಮನಗಂಡಿದ್ದರು. ಇಂತಹ ಅವಕಾಶಗಳಿಗೆ ಜಿಲ್ಲೆಯಲ್ಲಿ ವಿಫುಲ ಅವಕಾಶಗಳಿದ್ದು, ರಂಗಭೂಮಿ ನಾಟಕಗಳ ಪ್ರದರ್ಶನ ಯಶಸ್ವಿಯಾಗಲಿ ಎಂದು ಹೇಳಿದರು. ಖ್ಯಾತ ಮಕ್ಕಳ ತಜ್ಞ ಡಾ. ಜಿ.ಪಿ. ಕೃಷ್ಣೇಗೌಡ ಮಾತನಾಡಿ, ಮನುಷ್ಯನಲ್ಲಿ ನಿಜವಾದ ಕಲೆ ಉಳಿದಿದೆ ಅಂದರೆ ಅದು ರಂಗಭೂಮಿ ಕಲಾವಿದರಲ್ಲಿ ಮಾತ್ರ ಕಾಣಲು ಸಾಧ್ಯ ಎಂದು ತಿಳಿಸಿದರು.

ಆರ್ಕೆಸ್ಟ್ರಾ, ಸಿನಿಮಾ, ದೂರದರ್ಶನ, ಮೊಬೈಲ್ ಮುಂತಾದವುಗಳ ಗೀಳಿಗೆ ಬಿದ್ದು ವೀಕ್ಷಣೆಯಲ್ಲಿ ಜನತೆ ಮುಂದಾಗಿ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಈ ರೀತಿಯ ಸಾಮಾಜಿಕ ಪರಿವರ್ತನೆಯ ಉತ್ತಮ ನಾಟಕ ಪ್ರದರ್ಶನ ನೋಡಲು ಪ್ರೇಕ್ಷಕರ ಸಂಖ್ಯೆ ಇಳಿಮುಖವಾಗಿರುವುದು ವಿಷಾಧನೀಯ ಎಂದರು.

ತುಕಾರಾಂರವರು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜ ಪರಿವರ್ತನೆಯ ನಾಟಕವನ್ನು ನಿರ್ದೇಶಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದು, ಇಲ್ಲಿಗೂ ಬರುವಂತೆ ಲಕ್ಷ್ಮಣ ಅವರಿಗೆ ಆಹ್ವಾನ ನೀಡಿರುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ ಮಂಜುಳ ಹುಲ್ಲಳ್ಳಿ, ಎಐಟಿ ರಿಜಿಸ್ಟ್ರಾರ್ ಡಾ. ಸಿ.ಕೆ ಸುಬ್ರಾಯ, ಪ್ರಾಂಶುಪಾಲ ಡಾ. ಸಿ.ಟಿ ಜಯದೇವ್, ಕಾಂತೇಶ್ ಕದರ ಮಂಡಲಗಿ, ಲಯನ್ಸ್ ಅಧ್ಯಕ್ಷ ಕುಮಾರ್ ಸಿ.ಎನ್, ಗಾಯಕ ಎಂ.ಎಸ್ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು. ಕೊನೆಯಲ್ಲಿ ಲಯನ್ಸ್ ಪ್ರಧಾನ ಕಾರ್ಯದರ್ಶಿ ಗೋಪಿಕೃಷ್ಣ ವಂದಿಸಿದರು.

‘Lakshman Tukaram Gole’ play performance

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...